ಕುಂದಾಪುರ:ಬೈಂದೂರು ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಬಾಲಕ ಬಾಲಕಿಯರ ಖೋ ಖೋ ಪಂದ್ಯಾಟ ಸರಕಾರಿ ಹಿರಿಯ ಪ್ರಾಥಮಿಕ ಮೊವಾಡಿ ಶಾಲೆಯಲ್ಲಿ ಮಂಗಳವಾರ ನಡೆಯಿತು.ಶಾಲಾ ಎಸ್ಡಿಎಂಸಿ ಅಧ್ಯಕ್ಷೆ ಸಂಧ್ಯಾ ಕಾರಂತ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ತ್ರಾಸಿ ಗ್ರಾ ಪಂಚಾಯಿತಿ ಅಧ್ಯಕ್ಷ ಮಿಥುನ್ ದೇವಾಡಿಗ ಉದ್ಘಾಟಿಸಿ ಶುಭಹಾರೈಸಿದರು.
ತ್ರಾಸಿ ಪಂಚಾಯಿತಿ ಉಪಾಧ್ಯಕ್ಷೆ ಹೇಮಾ,ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ,ಬೈಂದೂರು ದೈಹಿಕ ಪರಿವೀಕ್ಷಣಾಧಿಕಾರಿ ಅರುಣ ಶೆಟ್ಟಿ,ಮೊವಾಡಿ ಶಾಲೆ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವಿರಾಜ್ ಶೆಟ್ಟಿ ಮತ್ತು ಎಸ್ಡಿಎಂಸಿ ಉಪಾಧ್ಯಕ್ಷ ರಾಘವೇಂದ್ರ ಶೆಟ್ಟಿಗಾರ್,ದೈಹಿಕ ಶಿಕ್ಷಕರಾದ ಗಣೇಶ ಹಾಗೂ ಸಂತೋಷ,ಹಾಲು ಉತ್ಪಾದಕರ ಸಂಘ ಮೊವಾಡಿ ಕಾರ್ಯನಿರ್ವಹಣಾಧಿಕಾರಿ ಶೇಖರ ಗಾಣಿಗ ಉಪಸ್ಥಿತರಿದ್ದರು.ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯಾಗಿ ಪದನ್ನೊತಿ ಹೊಂದಿರುವ ಚಂದ್ರಶೇಖರ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.ಮೊವಾಡಿ ಶಾಲೆ ಮುಖ್ಯೋಪಾಧ್ಯಾಯಿನಿ ಶರಾವತಿ ಸ್ವಾಗತಿಸಿದರು.ಶಿಕ್ಷಕಿ ಭಾಗಿರಥಿ ನಿರೂಪಿಸಿದರು.ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ ಖಾರ್ವಿ ವಂದಿಸಿದರು.
ಫಲಿತಾಂಶ ವಿವರ:ಬಾಲಕರ ವಿಭಾಗದಲ್ಲಿ ಸ.ಹಿ.ಪ್ರಾ ಶಾಲೆ ಕಂಚಿಕಾನ್ ಪ್ರಥಮ ಸ್ಥಾನ ಹಾಗೂ ಸ.ಹಿ.ಪ್ರಾ ಶಾಲೆ ಚಿತ್ತೂರು ದ್ವಿತೀಯ ಸ್ಥಾನ ಮತ್ತು ಬಾಲಕಿಯರ ವಿಭಾಗದಲ್ಲಿ ಸ.ಹಿ.ಪ್ರಾ ಶಾಲೆ ಹಕ್ಲಾಡಿ ಪ್ರಥಮ ಸ್ಥಾನ ಹಾಗೂ ಸ.ಹಿ.ಪ್ರಾ ಚಿತ್ತೂರು ಶಾಲೆ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…