ಕುಂದಾಪುರ

ಯಾವುದೇ ಪ್ರಚಾರ ಬಯಸದ ತೆರೆಯಮರೆಯ ಹೆಸರೆ ಹೇಳದ ಸರಳ ಸಜ್ಜನ ಸಮಾಜ ಸೇವಕ ಅಜಾದಿ ಗಿರೀಶ್ ಕೊಡಪಾಡಿ

Share

ಕುಂದಾಪುರ:ಇಂದು ನಾವು ಇರ್ತಿವಿ ನಾಳೆ ಹೋಗ್ತೀವಿ ಆದರೆ ನಮ್ಮ ಹೆಸರು ಮತ್ತು ಮಾಡಿದ ಕೆಲಸವು ಜೀವಂತ ಇರಬೇಕು ಅನ್ನುತ್ತಾರೆ…*
11 ವರ್ಷಗಳಿಂದ ದೇಶ ಸೇವೆಯೇ ಈಶಾ ಸೇವೆ ಎಂದು ತನ್ನ ಜೀವನವನ್ನೇ ದೇಶ ಧರ್ಮಕ್ಕಾಗಿ ಸಮರ್ಪಿಸುತ್ತ ಸವೆಯುತ್ತ ರಾಷ್ಟ್ರೀಯ ಸ್ವಯಂ ಸೇವಕನಾಗಿ ರಾಜ್ಯದ ಜಿಲ್ಲೆ ತಾಲೂಕು ಊರೂರು ಕೇರಿ ಅಲೆಯುತ್ತಾ ನಮ್ಮ ಹಿಂದು ಸಮಾಜ ಜಾಗ್ರತಗೊಳಿಸುತ್ತ ನಿರಂತರ ಜನರ ಸೇವೆ ಮಾಡುತ್ತಾ ಬಂದಿದ್ದಾರೆ…
ಇಂತಹ ಒಬ್ಬ ನಮ್ಮೂರಿನ ಸಮಾಜ ಸೇವಕನನ್ನು ಅವರ ಸೇವೆಯನ್ನು ನಾವು ಗುರುತಿಸಲೇಬೇಕೆಂಬ ಉದ್ದೇಶದಿಂದ ಅವರ ಈ ಕಿರುಪರಿಚಯ👇
ಸರಕಾರಿ ಶಾಲೆಯಲ್ಲಿ ಕಲಿತವನು ಮಾತ್ರ ಪರಿಪೂರ್ಣ ಉತ್ತಮ ಸಾಮಾಜಿಕ ಕಾರ್ಯಕರ್ತನಾಗಬಲ್ಲ ಯಾಕೆಂದರೆ ಅವನು ಮಾತ್ರ ಸಮಾಜದ ಅಳ ಅಗಲ ಕಷ್ಟ ಸುಖ ನೋವು ನಲಿವುಗಳನ್ನು ಸಮಾಜದ ಚಿತ್ರಣವನ್ನು ಅರಿತುಕೊಂಡಿರುತ್ತಾನೆ ಎಂಬುದಕ್ಕೆ ನಮ್ಮ ಗಿರೀಶ್ ರೇ ಉತ್ತಮ ಉದಾಹರಣೆ.
ಎಲ್ಲವೂ ಉಚಿತವಾಗಿ ಕೊಟ್ಟು ವಿದ್ಯೆ ಕಲಿಸಿದ ದೇಶಕ್ಕೆ ತಾನು ಏನಾದರೂ ಋಣ ತೀರಿಸಬೇಕೆಂಬ ತುಡಿತ ಅವರಲ್ಲಿದೆ.

ಹಲವು ವರ್ಷಗಳಿಂದ ನಮ್ಮ ಶಾಲೆ ಉಳಿವಿನ ಹೋರಾಟಕ್ಕೆ ನಾವುಗಳು ಬಹಳಷ್ಟು ಶ್ರಮಿಸಿದ್ದೇವೆ ಈ ಹೋರಾಟಕ್ಕೆ ನಮ್ಮ ಆತ್ಮೀಯ ಗಿರೀಶ್ ರವರ ಆಗಮನದಿಂದ ಅವರ ಅರ್ಥಿಕ ಸಹಕಾರದಿಂದ ನಮಗೆ ಆನೆ ಬಲಬಂದಂತಾಗಿದೆ.

ಆರಂಭದಲ್ಲಿ ಕಂಚುಗೋಡಿನ ನಮ್ಮ ಶಾಲೆ ವೇದಿಕೆಯಲ್ಲಿ ಗಿರೀಶ್ ಕೊಡಪಾಡಿ ಹೇಳಿದಾಗೆ, “ಹೆತ್ತ ತಾಯಿ, ಹೊತ್ತ ಭೂಮಿ, ಕಲಿತ ಶಾಲೆಯ ಋಣ ತೀರಿಸಲು ಸಾಧ್ಯವಿಲ್ಲ ಆದರೆ ನನ್ನ ಶಾಲೆಗೆ ನನ್ನಿಂದ ಎಷ್ಟು ಸಾಧ್ಯವೋ ಅಷ್ಟು ಸಹಕರ ಸಹಾಯ ಶಕ್ತಿಮಿರಿ ಪ್ರಯತ್ನಿಸುತ್ತೇನೆ ಎಂದು ಹೇಳಿದ ಕ್ಷಣದಿಂದಲೇ ಮಾತಿಗೆ ತಪ್ಪದೇ ಬರೀ ಆಶ್ವಾಸನೆ ಆಗದೆ ಆರಂಭದಲ್ಲಿ ಗಿರೀಶ್ ರವರು ತನ್ನ ಶಾಲಾ ಮಕ್ಕಳಿಗೆ ಪೆನ್ನು ಪುಸ್ತಕ ಕಲಿಕೆ ಸಾಮಾಗ್ರಿಗಳನ್ನು ನೀಡಿದರು.
ನಂತರ ಮತ್ತೆ ತನ್ನಿಂದ ಮತ್ತು ತನ್ನ ಪರಿಚಯಸ್ಥ ಉದ್ಯಮಿ ಮತ್ತು ಶಾಸಕರಿಂದ ಅವರ ಬೆನ್ನುಬೀಡದೇ ನಮ್ಮ ಕಂಚುಗೋಡು ಶಾಲೆ ಮಕ್ಕಳಿಗೆ ಸ್ಮಾರ್ಟ್ ಕ್ಲಾಸಿಗಾಗಿ ಎರಡು ಕಂಪ್ಯೂಟರ್ ಮತ್ತು ಸಲಕರಣೆಗಳು, ಕಂಚುಗೋಡು ಅಂಗನವಾಡಿ ಸೇರಿ ಒಟ್ಟು ನಾಲ್ಕು ಅಂಗನವಾಡಿ ಮತ್ತು ಕಂಚುಗೋಡು ಶಾಲಾ ಮಕ್ಕಳಿಗೆ ಉತ್ತಮ ಗುಣಮಟ್ಟದ 200 ಶಾಲಾ ಬ್ಯಾಗ್ ಕೊಟ್ಟಿದ್ದಾರೆ, 80 ಮಕ್ಕಳಿಗೆ ಸ್ಪೋರ್ಟ್ಸ್ ಟೀ-ಶಾರ್ಟ್ ಚಡ್ಡಿ ಮತ್ತು 25 ಸಾವಿರದ ಮೌಲ್ಯದ ಕ್ರೀಡಾ ಸಾಮಾಗ್ರಿಗಳು ನೀಡಿದ್ದಾರೆ ಮತ್ತು ಬೆಂಗಳೂರಿನಿಂದ ಆತ್ಮೀಯ ಶಾಸಕರಿಂದ ರೂ.5 ಲಕ್ಷ ತಂದು ಮೇಲ್ಚಾವಣಿ ಕಟ್ಟಡವನ್ನು ಕೂಡ ನಿರ್ಮಿಸಿಕೊಟ್ಟಿದ್ದಾರೆ ಅದು ನಾಳೆ ಶಾಸಕರಿಂದ ಅಥವಾ ಇವರಿಂದಲೇ ಉದ್ಘಾಟನೆಯಿದೆ ಹಾಗೇ ಮುಂದೆ ನಮ್ಮ ಕನಸಿನ ಕೂಸು ಶಾಲೆ ಆವರಣ ಗೋಡೆ ಮತ್ತು ಶಾಲಾ ವಾಹನವನ್ನು ತೆಗೆಸಿಕೊಡುವ ಜವಾಬ್ದಾರಿ ನನ್ನದು ಎಂದು ಭರವಸೆ ನೀಡಿದ್ದಾರೆ ಹೇಳಿದ್ದನ್ನು ಮಾಡಿಯೇ ತಿರುತ್ತಾರೆ ಎಂಬ ನಂಬಿಕೆ ನಮಗಿದೆ, ಇಷ್ಟೇ ಅಲ್ಲದೇ ಮುಂದೆ ಇನ್ನೂ ಹೆಚ್ಚಿನ ಸಹಾಯ ಮಾಡುತ್ತೇನೆ ಜೊತೆಗಿರುತ್ತೇನೆ ಎಂದು ಹೇಳಿದ್ದು ನಮಗೆಲ್ಲರಿಗೂ ತುಂಬಾ ಸಂತೋಷವಾಗಿದೆ…

ಇದಕ್ಕಿಂತ ಹಿಂದೆ ಕೂಡ ತನ್ನೂರಿಗೆ ಕೊಡಪಾಡಿ ಶಾಲೆಗೆ ವಿವೇಕ ಕೊಠಡಿ, ಭಾಸ್ಕರ ಪೈ ಶಾಲೆಗೆ ರೋಡ್, ಕೊಡಪಾಡಿಯಿಂದ ಗುಹೇಶ್ವರ ರೋಡ್, ಗುಹೇಶ್ವರ ಭಧ್ರಕಾಳಿ ಅಮ್ಮನವರ ದೇವಸ್ಥಾನಕ್ಕೆ 25 ಲಕ್ಷ ಅನುದಾನ ತೆಗೆಸಿಕೊಟ್ಟಿದ್ದಾರೆ. ಹೇಳಿದರೆ ಅನುದಾನದ ಸರಮಾಲೆ ಬಹಳಷ್ಟಿದೆ, ಅಂಗವಿಕಲ ಅಶಕ್ತನಿಗೆ ಹೊಲಿಗೆ ಯಂತ್ರ ನೀಡಿದ್ದು ತನ್ನ ಹೃದಯ ವೈಶಾಲ್ಯತೆ ತೋರುತ್ತದೆ ಹೀಗೆಯೇ ನಮಗೆ ಗೊತ್ತಿಲ್ಲದೇ ತೆರೆಯಮರೆಯಲ್ಲಿ ನಿಂತು ತನ್ನ ಊರಿಗೆ ಶಾಲೆಗೆ ಮಾಡಿದ ದೊಡ್ಡಮಟ್ಟದ ಅರ್ಥಿಕ ಸಹಾಯ ಕೆಲಸಗಳು ಬಹಳಷ್ಟಿದೆ…!!
*ಇಂತಹ ಒಬ್ಬ ಸಮಾಜ ಸೇವಕ ಶಾಲೆಗೊಬ್ಬ ಊರಿಗೊಬ್ಬರು ಇರಲಿ ನೀವು ಇನ್ನೂ ಉತ್ತರೊತ್ತರಕ್ಕೆ ಬೆಳೆದು ಊರಿಗೆ ಬೆಳಕಾಗಲಿ ಶ್ರೀ ದೇವರು ನಿಮಗೆ ಆಯುರಾರೋಗ್ಯ ಐಶ್ವರ್ಯ ಕೊಟ್ಟು ಆಶೀರ್ವದಿಸಲಿ ಎಂದು ಆಶೀಸುತ್ತೇನೆ.

            *- ಹೆಬ್ಬುಲಿ ರಮ್ಮಿ*
Advertisement

Share
Team Kundapur Times

Recent Posts

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

6 days ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago