ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮದ ನಾಯಕವಾಡಿ ರಾಮ ದೇವಸ್ಥಾನದ ಬಳಿ ನಿದ್ರಿಸುತ್ತಿದ್ದ ಜಾನುವಾರುಗಳನ್ನು ಕದಿಯಲು ವಿಫಲ ಯತ್ನ ನಡೆಸಿ ಪರಾರಿಯಾಗಿದ್ದ ಆರೋಪಿತರಾದ ಮೊಹಮ್ಮದ್ ಸೀನಾನ್ (19) ಗುಲ್ವಾಡಿ ಹಾಗೂ ಕಾನೂನಿನ ಸಂಘರ್ಷಕ್ಕೆ ಒಳಗಾದ ಬಾಲಕನೊರ್ವನನ್ನು ಗಂಗೊಳ್ಳಿ ಪೊಲೀಸ್ ಠಾಣೆ ಪಿಎಸ್ಐ ಹರೀಶ್ ಆರ್ ಮತ್ತು ತಂಡದ ಸಿಬ್ಬಂದಿಗಳು ಗುಲ್ವಾಡಿಯಲ್ಲಿ ಶನಿವಾರ ಬಂಧಿಸಿದ್ದಾರೆ.
ಸೆ.12 ರ ಬೆಳಗಿನ ಜಾವ 4.30 ರ ಸುಮಾರಿಗೆ ನಾಯಕವಾಡಿ ರಾಮ ದೇವಸ್ಥಾನದ ಬಳಿ ಮಲಗಿರುವ ಮೂರು ಗೋವುಗಳನ್ನು ಕದ್ದು ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಲು ಯತ್ನಸಿಸುತ್ತಿದ್ದ ಸಂದರ್ಭದಲ್ಲಿ ರಾಮ ದೇವಸ್ಥಾನದ ಹಾಲ್ನಲ್ಲಿ ಮಲಗಿರುವ ವ್ಯಕ್ತಿಗಳಿಬ್ಬರು ಮೂತ್ರ ವಿಸರ್ಜನೆಗೆಂದು ಹೊರಗಡೆ ಬಂದತಹ ಸಮಯದಲ್ಲಿ ಅವರನ್ನು ನೋಡಿ ಹೆದರಿಕೊಂಡ ದನಕಳ್ಳರು ಸ್ಥಳದಲ್ಲೆ ಗೋವು ಮತ್ತು ಕೃತ್ಯಕ್ಕೆ ಬಳಸಿದ ಕಾರನ್ನು ಬಿಟ್ಟು ಪರಾರಿಯಾಗಿದ್ದ ಪ್ರಕರಣಕ್ಕೆ ಸಬಂಧಿಸಿದಂತೆ ಗಂಗೊಳ್ಳಿ ಪೊಲೀಸ್ ಠಾಣೆ ಪಿಎಸ್ಐ ಮತ್ತು ತಂಡದ ಸಿಬ್ಬಂದಿಗಳು ಮಿಂಚಿನ ಕಾರ್ಯಚರಣೆ ಮೂಲಕ ಸೆ.14 ರಂದು ಆರೋಪಿತರನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ.ಪೊಲೀಸ್ ಇಲಾಖೆ ಕಾರ್ಯಕ್ಕೆ ಸಾರ್ವಜನಿಕರು ಪ್ರಶಂಸನೆಯನ್ನು ವ್ಯಕ್ತಪಡಿಸಿದರು.ಕಾರ್ಯಚರಣೆಯಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆ ಪಿಎಸ್ ಹರೀಶ್ ಆರ್ ಮತ್ತು ಗುಪ್ತದಳ ಪಿಎಸ್ಐ ಬಸವರಾಜ ಕನಶೆಟ್ಟಿ,ಸಿಬ್ಬಂದಿಗಳಾದ ರಾಜು ನಾಯ್ಕ,ಶಾಂತರಾಮ ಶೆಟ್ಟಿ,ರಾಘವೇಂದ್ರ ಪೂಜಾರಿ,ಸಂದೀಪ ಕುರಾಣಿ ಮತ್ತು ದಿನೇಶ್ ಭಾಗವಹಿಸಿದ್ದರು.
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…