ಕುಂದಾಪುರ

ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ:14% ಡಿವಿಡೆಂಟ್ ಘೋಷಣೆ

Share

Advertisement
Advertisement
Advertisement

ಕುಂದಾಪುರ:ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಅದರ 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ನಾವುಂದ ಶ್ರೀ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ ಶುಕ್ರವಾರ ನಡೆಯಿತು.
ವಾರ್ಷಿಕ ಸಾಮಾನ್ಯ ಸಭೆ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷ ರಾಜು ಎಸ್.ರಾಜು ಪೂಜಾರಿ ಮಾತನಾಡಿ,ಸಂಘದ ಸದಸ್ಯರ ಮಹಿಳೆಯರಿಗೆ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಆರ್ಥಿಕ ಶಕ್ತಿ ನೀಡಿರುವುದರ ಜತೆಗೆ ರೈತರನ್ನು ಉತ್ತೇಜಿಸುವ ದೃಷ್ಟಿಯಿಂದ ಕೃಷಿ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಸಾಲ ಸೌಲಭ್ಯವನ್ನು ನೀಡಲಾಗಿದೆ.ಶೈಕ್ಷಣಿಕ ಸೇವೆ,ಆರೋಗ್ಯ ಮಾಹಿತಿ ಕಾರ್ಯಕ್ರಮ ಆಯೋಜನೆ ಮತ್ತು ಸಾಮಾಜಿಕ ಕೆಲಸ ಕಾರ್ಯಗಳನ್ನು ಮಾಡುತ್ತಾ ಬರಲಾಗುತ್ತಿದ್ದು.ನಮ್ಮ ಸಂಘವು ವರ್ಷ ದಿಂದ ವರ್ಷಕ್ಕೆ ಗುರಿ ಮೀರಿದ ಸಾಧನೆ ಮಾಡಿರುವ ಕುರಿತು ಅಂಕಿ ಅಂಶಗಳ ಬಗ್ಗೆ ನಿಮಗೆಲ್ಲಾ ತಿಳಿದ ವಿಷಯವಾಗಿದೆ ಎಂದರು.
ಸಂಘದ ಅಭಿವೃದ್ಧಿಗೆ ಕಾಲ ಕಾಲಕ್ಕೆ ಸಲಹೆ ಸೂಚನೆಗಳನ್ನು ನೀಡುತ್ತಿರುವ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಅದರ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಹಾಗೂ ಜಿಲ್ಲಾ,ತಾಲೂಕು ಅಧಿಕಾರಿಗಳ ಸಹಕಾರ ಅತ್ಯಮೂಲ್ಯವಾದದ್ದು.ಗುರಿ ಮೀರಿದ ಸಾಧನೆ ಮಾಡುವಲ್ಲಿ ಸಂಘದ ನಿರ್ದೇಶಕರ ಮಂಡಳಿ ಸಿಬ್ಬಂದಿ ವರ್ಗ,ಗ್ರಾಹಕರು,ಸರ್ವ ಸದಸ್ಯರು,ಠೇವಣಿದಾರರ ಸಹಕಾರ ಸದಾ ಕಾಲ ಸ್ಮರಿಸುವಂತಹದ್ದು ಎಂದು ಹೇಳಿದರು.
2023-24ನೇ ಸಾಲಿನಲ್ಲಿ ಸಂಘವು 2,27,22,313.ರೂ ಪಾಲು ಬಂಡವಾಳ ಹೊಂದಿದ್ದು,66,64,45,991.ರೂ ಠೇವಣಾತಿ ಹೊರಬಾಕಿ ಇದೆ ಹಾಗೂ 58,86,43,511.ರೂ ಸಾಲ ಹೊರ ಬಾಕಿ ಇದೆ.5,33,67,722.ರೂ ಸಂಘವು ನಿಧಿಯನ್ನು ಹೊಂದಿದ್ದು.ವಿವಿಧ ಸ್ತರಗಳಲ್ಲಿ 29,52,33,900.ರೂ ಹೂಡಿಕೆಯನ್ನು ಮಾಡಲಾಗಿದೆ.ಪ್ರಸ್ತುತ ಸಾಲಿನಲ್ಲಿ ಸಂಘವು 1,55,09,557.37 ಪೈಸೆ.ರೂ ಲಾಭಾಂಶ ಗಳಿಸಿದ್ದು.324.91 ಕೋಟಿ.ರೂ ವಾರ್ಷಿಕ ವಹಿವಾಟನ್ನು ನಡೆಸಿದೆ ಎಂದರು.ಲಾಭಾಂಶದಲ್ಲಿ ಸಂಘದ ಸದಸ್ಯರಿಗೆ ಶೇ.14 ಡಿವಿಡೆಂಟ್ ಘೋಷಣೆ ಮಾಡಿದರು.
ಸಂಘದ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ ಅಳ್ವೆಗದ್ದೆ ವಾರ್ಷಿಕ ವರದಿಯನ್ನು ಮಂಡಿಸಿದರು.ಉಪಾಧ್ಯಕ್ಷ ಎಂ ಚಂದ್ರಶೀಲ ಶೆಟ್ಟಿ,ನಿರ್ದೇಶಕರುಗಳಾದ ವಾಸು ಪೂಜಾರಿ,ಭೋಜ ನಾಯ್ಕ,ಜಗದೀಶ ಪಿ ಪೂಜಾರಿ,ನರಸಿಂಹ ದೇವಾಡಿಗ,ರಾಮಕೃಷ್ಣ ಖಾರ್ವಿ,ಪ್ರಕಾಶ ದೇವಾಡಿಗ,ಎಂ ಅಣ್ಣಪ್ಪ ಬಿಲ್ಲವ,ನಾರಾಯಣ ಶೆಟ್ಟಿ,ರಾಮ,ನಾಗಮ್ಮ,ಸರೋಜ ಆರ್ ಗಾಣಿಗ ಹಾಗೂ ಜಿಲ್ಲಾ ಬ್ಯಾಂಕಿನ ಪ್ರತಿನಿಧಿ ಶಿವರಾಮ ಉಪಸ್ಥಿರತಿದ್ದರು.ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ಸಂಘ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.ಲೆಫ್ಟಿನೆಂಟ್ ಭರತ್ ದೇವಾಡಿಗ,ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರ್ಯಾಂಕ್ ಗಳಿಸಿದ ಪ್ರಗತಿ ಉದಯ ಕುಮಾರ್ ಮರವಂತೆ ಅವರನ್ನು ಸನ್ಮಾನಿಸಲಾಯಿತು.ವಿನಾಯಕ ರಾವ್ ಸ್ವಾಗತಿಸಿದರು.ಸೋಮಯ್ಯ ಬಿಲ್ಲವ ನಿರೂಪಿಸಿದರು.ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ ಅಳ್ವೆಗದ್ದೆ ವಂದಿಸಿದರು.ಸಂಘದ ಸಿಬ್ಬಂದಿಗಳು ಹಾಜರಿದ್ದರು.

Advertisement

ವರದಿ-ಜಗದೀಶ ದೇವಾಡಿಗ
ನಿಮ್ಮ ಸುದ್ದಿಗಳನ್ನು ನಮ್ಮ ಜಾಲಾತಾಣದಲ್ಲಿ ಪ್ರಕಟಿಸಲು ಸಂಪರ್ಕಿಸಿ-9916284048

Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

1 week ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

1 week ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

2 weeks ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

2 weeks ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

2 weeks ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

3 weeks ago