ಕುಂದಾಪುರ

ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ:14% ಡಿವಿಡೆಂಟ್ ಘೋಷಣೆ

Share

ಕುಂದಾಪುರ:ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಅದರ 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ನಾವುಂದ ಶ್ರೀ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ ಶುಕ್ರವಾರ ನಡೆಯಿತು.
ವಾರ್ಷಿಕ ಸಾಮಾನ್ಯ ಸಭೆ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷ ರಾಜು ಎಸ್.ರಾಜು ಪೂಜಾರಿ ಮಾತನಾಡಿ,ಸಂಘದ ಸದಸ್ಯರ ಮಹಿಳೆಯರಿಗೆ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಆರ್ಥಿಕ ಶಕ್ತಿ ನೀಡಿರುವುದರ ಜತೆಗೆ ರೈತರನ್ನು ಉತ್ತೇಜಿಸುವ ದೃಷ್ಟಿಯಿಂದ ಕೃಷಿ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಸಾಲ ಸೌಲಭ್ಯವನ್ನು ನೀಡಲಾಗಿದೆ.ಶೈಕ್ಷಣಿಕ ಸೇವೆ,ಆರೋಗ್ಯ ಮಾಹಿತಿ ಕಾರ್ಯಕ್ರಮ ಆಯೋಜನೆ ಮತ್ತು ಸಾಮಾಜಿಕ ಕೆಲಸ ಕಾರ್ಯಗಳನ್ನು ಮಾಡುತ್ತಾ ಬರಲಾಗುತ್ತಿದ್ದು.ನಮ್ಮ ಸಂಘವು ವರ್ಷ ದಿಂದ ವರ್ಷಕ್ಕೆ ಗುರಿ ಮೀರಿದ ಸಾಧನೆ ಮಾಡಿರುವ ಕುರಿತು ಅಂಕಿ ಅಂಶಗಳ ಬಗ್ಗೆ ನಿಮಗೆಲ್ಲಾ ತಿಳಿದ ವಿಷಯವಾಗಿದೆ ಎಂದರು.
ಸಂಘದ ಅಭಿವೃದ್ಧಿಗೆ ಕಾಲ ಕಾಲಕ್ಕೆ ಸಲಹೆ ಸೂಚನೆಗಳನ್ನು ನೀಡುತ್ತಿರುವ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಅದರ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಹಾಗೂ ಜಿಲ್ಲಾ,ತಾಲೂಕು ಅಧಿಕಾರಿಗಳ ಸಹಕಾರ ಅತ್ಯಮೂಲ್ಯವಾದದ್ದು.ಗುರಿ ಮೀರಿದ ಸಾಧನೆ ಮಾಡುವಲ್ಲಿ ಸಂಘದ ನಿರ್ದೇಶಕರ ಮಂಡಳಿ ಸಿಬ್ಬಂದಿ ವರ್ಗ,ಗ್ರಾಹಕರು,ಸರ್ವ ಸದಸ್ಯರು,ಠೇವಣಿದಾರರ ಸಹಕಾರ ಸದಾ ಕಾಲ ಸ್ಮರಿಸುವಂತಹದ್ದು ಎಂದು ಹೇಳಿದರು.
2023-24ನೇ ಸಾಲಿನಲ್ಲಿ ಸಂಘವು 2,27,22,313.ರೂ ಪಾಲು ಬಂಡವಾಳ ಹೊಂದಿದ್ದು,66,64,45,991.ರೂ ಠೇವಣಾತಿ ಹೊರಬಾಕಿ ಇದೆ ಹಾಗೂ 58,86,43,511.ರೂ ಸಾಲ ಹೊರ ಬಾಕಿ ಇದೆ.5,33,67,722.ರೂ ಸಂಘವು ನಿಧಿಯನ್ನು ಹೊಂದಿದ್ದು.ವಿವಿಧ ಸ್ತರಗಳಲ್ಲಿ 29,52,33,900.ರೂ ಹೂಡಿಕೆಯನ್ನು ಮಾಡಲಾಗಿದೆ.ಪ್ರಸ್ತುತ ಸಾಲಿನಲ್ಲಿ ಸಂಘವು 1,55,09,557.37 ಪೈಸೆ.ರೂ ಲಾಭಾಂಶ ಗಳಿಸಿದ್ದು.324.91 ಕೋಟಿ.ರೂ ವಾರ್ಷಿಕ ವಹಿವಾಟನ್ನು ನಡೆಸಿದೆ ಎಂದರು.ಲಾಭಾಂಶದಲ್ಲಿ ಸಂಘದ ಸದಸ್ಯರಿಗೆ ಶೇ.14 ಡಿವಿಡೆಂಟ್ ಘೋಷಣೆ ಮಾಡಿದರು.
ಸಂಘದ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ ಅಳ್ವೆಗದ್ದೆ ವಾರ್ಷಿಕ ವರದಿಯನ್ನು ಮಂಡಿಸಿದರು.ಉಪಾಧ್ಯಕ್ಷ ಎಂ ಚಂದ್ರಶೀಲ ಶೆಟ್ಟಿ,ನಿರ್ದೇಶಕರುಗಳಾದ ವಾಸು ಪೂಜಾರಿ,ಭೋಜ ನಾಯ್ಕ,ಜಗದೀಶ ಪಿ ಪೂಜಾರಿ,ನರಸಿಂಹ ದೇವಾಡಿಗ,ರಾಮಕೃಷ್ಣ ಖಾರ್ವಿ,ಪ್ರಕಾಶ ದೇವಾಡಿಗ,ಎಂ ಅಣ್ಣಪ್ಪ ಬಿಲ್ಲವ,ನಾರಾಯಣ ಶೆಟ್ಟಿ,ರಾಮ,ನಾಗಮ್ಮ,ಸರೋಜ ಆರ್ ಗಾಣಿಗ ಹಾಗೂ ಜಿಲ್ಲಾ ಬ್ಯಾಂಕಿನ ಪ್ರತಿನಿಧಿ ಶಿವರಾಮ ಉಪಸ್ಥಿರತಿದ್ದರು.ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ಸಂಘ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.ಲೆಫ್ಟಿನೆಂಟ್ ಭರತ್ ದೇವಾಡಿಗ,ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರ್ಯಾಂಕ್ ಗಳಿಸಿದ ಪ್ರಗತಿ ಉದಯ ಕುಮಾರ್ ಮರವಂತೆ ಅವರನ್ನು ಸನ್ಮಾನಿಸಲಾಯಿತು.ವಿನಾಯಕ ರಾವ್ ಸ್ವಾಗತಿಸಿದರು.ಸೋಮಯ್ಯ ಬಿಲ್ಲವ ನಿರೂಪಿಸಿದರು.ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ ಅಳ್ವೆಗದ್ದೆ ವಂದಿಸಿದರು.ಸಂಘದ ಸಿಬ್ಬಂದಿಗಳು ಹಾಜರಿದ್ದರು.

ವರದಿ-ಜಗದೀಶ ದೇವಾಡಿಗ
ನಿಮ್ಮ ಸುದ್ದಿಗಳನ್ನು ನಮ್ಮ ಜಾಲಾತಾಣದಲ್ಲಿ ಪ್ರಕಟಿಸಲು ಸಂಪರ್ಕಿಸಿ-9916284048

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

2 months ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

4 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

4 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago