ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಿದ್ಯಾರ್ಥಿನಿ ಪ್ರಾನಂಜಲಿ ರಾಜ್ಯಕ್ಕೆ ಪ್ರಥಮ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಪದವಿ ಕಾಲೇಜಿನ ವಿದ್ಯಾರ್ಥಿನಿ ಪ್ರಾನಂಜಲಿ ಕೆ.ಹೆಚ್ ಬಿಸ್ಸಿ. ಪುಡ್ ಟೆಕ್ನಾಲಜಿ 2021-2024 ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಪದವಿ ಪರೀಕ್ಷೆಯಲ್ಲಿ 90.57.% ಅಂಕಗಳೊಂದಿಗೆ ಪ್ರಥಮ ರ‍್ಯಾಂಕ್‌ ಪಡೆದು ಕಾಲೇಜಿಗೆ ಕೀರ್ತಿಯನ್ನು ತಂದಿದ್ದಾರೆ.ಕಾಲೇಜಿನ ಸಂಸ್ಥಾಪಕರಾದ ಸುಬ್ರಮಣ್ಯ ಮತ್ತು ನಿರ್ದೇಶಕಿ ಮಮತಾ ಹಾಗೂ ಕಾಲೇಜಿನ ಪ್ರಿನ್ಸಿಪಾಲ್ ಡಾ. ಸೀಮಾ ಜಿ ಭಟ್, ಎಲ್ಲಾ ಉಪನ್ಯಾಸಕ ವೃಂದವರು,ಬೋಧಕ,ಬೋಧಕೇತರ ಸಿಬ್ಬಂದಿಗಳು ಶುಭ ಹಾರೈಸಿದ್ದಾರೆ.

ಆಲೂರು:ಸಾವಿನಲ್ಲೂ ಸಾರ್ಥಕತೆ ಮೆರೆದ ರತ್ನಾಕರ ಜೊಯಿಸ್

ಕುಂದಾಪುರ:ತಾಲೂಕಿನ ಆಲೂರು ಗ್ರಾಮದ ನಿವಾಸಿ ರತ್ನಾಕರ ಜೊಯಿಸ್ (48) ಅವರು ತಮ್ಮ ಅಂಗಾಂಗಗಳನ್ನು ದಾನ ಮಾಡುವುದರ ಮುಖೇನ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.ಜನವರಿ.21 ರಂದು ಕಾರಿನಲ್ಲಿ ಸಾಗುತ್ತಿದ್ದ ರತ್ನಾಕರ ಜೊಯಿಸ್ ಅವರ ಕಾರಿಗೆ ವಿರುದ್ಧ ದಿಕ್ಕಿನಲ್ಲಿ ಬಂದಿದ್ದ ಲಾರಿ ಅರಾಟೆ ಸೇತುವೆ ಡಿವೈಡರ್ ಬಳಿ ಡಿಕ್ಕಿ ಹೊಡೆದಿದೆ.ಅಪಘಾತದಲ್ಲಿ ಗಂಭೀರ ಸ್ವರೂಪದ ಗಾಯದೊಂದಿಗೆ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದರು.ಆರೋಗ್ಯದಲ್ಲಿ ಧಿಡೀರ್ ಏರುಪೇರು ಉಂಟಾಗಿದ್ದರಿಂದ ಗುರವಾರ ದಂದು ಚಿಕಿತ್ಸೆ ಫಲಕಾರಿ ಆಗದೆ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಕುಟುಂಬಸ್ಥರ ನಿರ್ಣಯದಂತೆ ರತ್ನಾಕರ […]

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ, ಉಪನ್ಯಾಸಕರಿಗೆ “ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಂ” ಕಾರ್ಯಕ್ರಮ

ಕುಂದಾಪುರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಎಲ್ಲಾ ಉಪನ್ಯಾಸಕರಿಗೆ “ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಂ” ಎಂಬ ಕಾರ್ಯಕ್ರಮ ನಡೆಸಲಾಯಿತು .ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಯಾಗಿ ಪ್ರೊಫೆಸರ್ ಸ್ಟೀವನ್ ರಾಬರ್ಟ್ ಟೆಲ್ಲಿಸ್,ಮಾಧವ ವಾದಿರಾಜ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ಬಂಟಕಲ್ಲು ಉಡುಪಿ.ಇವರು ಎಲ್ಲಾ ಉಪನ್ಯಾಸಕರಿಗೆ “ತರಬೇತಿದಾರರಿಗೆ ತರಬೇತಿ” ಎನ್ನುವ ವಿಷಯದ ಕುರಿತು ಅನೇಕ ಮಾಹಿತಿಗಳಾದ ತರಗತಿ ನಿರ್ವಹಣೆ, ವಿದ್ಯಾರ್ಥಿಗಳೊಂದಿಗೆ ಸಂವಹನ, ಪ್ರಚಲಿತ ವಿಷಯ, ಅನೇಕ ಚಟುವಟಿಕೆಗಳನ್ನು ನಡೆಸಿ ಸೂಕ್ತ ಮಾಹಿತಿ ನೀಡಿದರು.ಕಾಲೇಜಿನ ಸಂಸ್ಥಾಪಕರಾದ ಸುಬ್ರಮಣ್ಯ,ಹಾಗೂ ಕಾಲೇಜಿನ ನಿರ್ದೇಶ […]

You cannot copy content of this page