ಬೈಂದೂರು:ಅಂತರಾಷ್ಟ್ರೀಯ ಮಟ್ಟದ ಬೃಹತ್ ಉದ್ಯೋಗ ಮೇಳ ಉದ್ಘಾಟನೆ
ಕುಂದಾಪುರ:ಸಮೃದ್ಧ ಬೈಂದೂರು,ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ಹಾಗೂ ಅಜಿನೋರಾಹ್ ಸಂಸ್ಥೆ ಸಹಭಾಗಿತ್ವದಲ್ಲಿ ಅಂತರಾಷ್ಟ್ರೀಯ ಮಟ್ಟದ ಬೃಹತ್ ಉದ್ಯೋಗ ಮೇಳ ಬೈಂದೂರು ಜೆ.ಎನ್.ಆರ್ ಸಭಾಂಗಣದಲ್ಲಿ ಸೋಮವಾರ ನಡೆಯಿತು.ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಅವರು ಅಂತರಾಷ್ಟ್ರೀಯ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿ,ಯುವ ಶಕ್ತಿಗೆ ಶಕ್ತಿಯನ್ನು ತುಂಬುವ ನಿಟ್ಟಿನಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಸಹಭಾಗಿತ್ವದಲ್ಲಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗುತ್ತಿದೆ.ಸಂದರ್ಶನದಲ್ಲಿ ಆಯ್ಕೆಗೊಳ್ಳುವ ಅಭ್ಯರ್ಥಿಗಳಿಗೆ ತರಬೇತಿ ಸಂಸ್ಥೆಗಳ ಮೂಲಕ ತರಬೇತಿಯನ್ನು ನೀಡುವುದರ ಜತೆಗೆ ವಿದೇಶಕ್ಕೆ ತೆರಳಲು ತಗಲುವ ವೆಚ್ಚವನ್ನು […]



























































































































































































































































































































































































































































































































































































































































































































































































































































































































































































































































































































































































































































































































































































































































































