ಶ್ರೀ ಗಣೇಶ್ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ:78ನೇ ಸ್ವಾತಂತ್ರ್ಯ ದಿನಾಚರಣೆ

ಕುಂದಾಪುರ:ಶ್ರೀ ಗಣೇಶ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಹೊಸಾಡು ಮುಳ್ಳಿಕಟ್ಟೆ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಸಲಹೆಗಾರ ವಿಶ್ವಂಭರ ಐತಾಳ್ ಧ್ವಜಾರೋಹಣವನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ಸಲಹೆಗಾರರಾದ ಡಿ.ಎಂ ಕಾರಂತ ಮತ್ತು ನಿರ್ದೇಶಕ ರಾಘವೇಂದ್ರ ಶೆಟ್ಟಿ,ನಿವೃತ್ತ ಬ್ಯಾಂಕ್ ಉದ್ಯೋಗಿ ಜಿ.ಬಿ ಗಣಪಯ್ಯ ಆಚಾರ್ಯ ಉಪಸ್ಥಿತರಿದ್ದರು.ಸಿಇಒ ಅಶ್ವಿನಿ ಸ್ವಾಗತಿಸಿದರು.ಲೆಕ್ಕಿಗ ಶ್ರೀಕರ ಐತಾಳ್ ವಂದಿಸಿದರು.

ಹೆಮ್ಮಾಡಿ ದೇವಸ್ಥಾನದಲ್ಲಿ ಕದ್ದ ಹಣ ಶಾಲೆ ಜಗುಲಿಯಲ್ಲಿ ಪತ್ತೆ

ಕುಂದಾಪುರ:ತಾಲೂಕಿನ ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಶುಕ್ರವಾರ ಮಧ್ಯರಾತ್ರಿ ಕಳವು ಗೈದಿರುವ ಹುಂಡಿ ಹಣವನ್ನು ದೇವಸ್ಥಾನದ ಸಮೀಪದಲ್ಲಿರುವ ಹೆಮ್ಮಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಜಗುಲಿಯಲ್ಲಿ ಕಳ್ಳ ಬಿಟ್ಟು ಹೋಗಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದೆ.ಹೆಮ್ಮಾಡಿ ಪ್ರಾಥಮಿಕ ಶಾಲೆ ಜಗುಲಿ ಮೇಲೆ ಹಸಿರು ಚೀಲ ಇರುವುದದನ್ನು ಶನಿವಾರ ಗಮನಿಸಿರುವ ಶಾಲೆ ಶಿಕ್ಷಕರು ಅಷ್ಟೇನು ಗಂಭೀರವಾಗಿ ಪರಿಗಣಿಸಿರಲಿಲ್ಲ.ಭಾನುವಾರ ಶಾಲೆಗೆ ರಜೆ ಇದ್ದಿದ್ದು.ಸೋಮವಾರ ಅದೇ ಸ್ಥಳದಲ್ಲಿದ್ದ ಚೀಲವನ್ನು ಗಮನಿಸಿದ ವಿದ್ಯಾರ್ಥಿಗಳು ಬೀಡಿಸಿ ನೋಡಿದಾಗ ಹಣ ಇರುವುದು ಬೆಳಕಿಗೆ ಬಂದಿದೆ.ಕೂಡಲೆ ದೇವಸ್ಥಾನದ […]

ಸಾಮೂಹಿಕ ವರಮಹಾಲಕ್ಷ್ಮೀ ವ್ರತಾಚರಣೆ

ಕುಂದಾಪುರ:ದ್ರಾವಿಡ ಬ್ರಾಹ್ಮಣ ಪರಿಷತ್ ಗುಜ್ಜಾಡಿ ವಲಯದ ವತಿಯಿಂದ ವಾಸುದೇವ ಶಾಸ್ತ್ರೀ ಕೆಳಾಮಠ ಅವರ ಸಹಕಾರೊಂದಿಗೆ ಸಾಮೂಹಿಕ ವರಮಹಾಲಕ್ಷ್ಮೀ ವ್ರತಾಚರಣೆ ಕಾರ್ಯಕ್ರಮ ಹಾಗೂ ವಿಷ್ಣು ಸಹಸ್ರನಾಮ ಪಠಣ ಗುಜ್ಜಾಡಿ ಶ್ರೀ ಶೃಂಗೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ನಡೆಯಿತು.ದ್ರಾವಿಡ ಬ್ರಾಹ್ಮಣ ಪರಿಷತ್ ಕುಂದಾಪುರ ತಾಲೂಕು ಅಧ್ಯಕ್ಷ ಎಚ್.ಎಸ್ ಹತ್ವಾರ್,ಕೋಶಾಧಿಕಾರಿ ಪಿ.ರಘುರಾಮ್ ರಾವ್.ಜಿಲ್ಲಾ ಘಟಕದ ಮಹಿಳಾ ಅಧ್ಯಕ್ಷೆ ಶಾಂತ ಗಣೇಶ,ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಗಣೇಶ ರಾವ್,ಗುಜ್ಜಾಡಿ ವಲಯ ಅಧ್ಯಕ್ಷ ವಿಶ್ವಂಭರ ಐತಾಳ್ ಮತ್ತು ಕಾರ್ಯದರ್ಶಿ ಡಿ.ಎಂ ಕಾರಂತ ಹಾಗೂ ಮಹಿಳಾ ಘಟಕದ […]

You cannot copy content of this page