ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ನಿರ್ಮಾಣಕ್ಕೆ ಕೇಂದ್ರ ಸಚಿವರಿಗೆ ಬಿ ವೈ ರಾಘವೇಂದ್ರ ಮನವಿ ಸಲ್ಲಿಕೆ

ಕುಂದಾಪುರ:ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ನಿರ್ಮಾಣಕ್ಕೆ ಅನುಮೋದನೆ ನೀಡುವಂತೆ ಸಂಸದ ಬಿ. ವೈ.ರಾಘವೇಂದ್ರ ಅವರು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರೊಂದಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಮನವಿಯನ್ನು ಸಲ್ಲಿಸಿದರು.ಸುಮಾರು 1200 ವರ್ಷಗಳ ಇತಿಹಾಸವನ್ನು ಹೊಂದಿರುವ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನವು ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕೇಂದ್ರಗಳಲ್ಲಿ ಒಂದಾಗಿದೆ.ವಿವಿಧ ರಾಜ್ಯಗಳಿಂದ ಹಾಗೂ ಹೊರ ದೇಶಗಳಿಂದ ಪ್ರತಿದಿನ ಸಾವಿರಾರು ಸಂಖ್ಯೆಯಲ್ಲಿ ಯಾತ್ರಾರ್ಥಿಗಳು ಭೇಟಿ ನೀಡುತ್ತಾರೆ.ಕ್ಷೇತ್ರದಲ್ಲಿ ಮೂಲಸೌಕರ್ಯದ ಜೊತೆಗೆ ಸೌಪರ್ಣಿಕಾ ನದಿ […]

ಕೋಟ:ಆದರ್ಶ ದಂಪತಿಗಳಿಗೆ ವೈಕುಂಠ ಭಾಗ್ಯ,ಸಾವಿನಲ್ಲೂ ಒಂದಾದ ಹಿರಿಯ ಜೀವಗಳು

ಕುಂದಾಪುರ:ಸಪ್ತಪದಿ ತುಳಿದು ದಂಪತಿಗಳಾಗಿ ಆದರ್ಶ ಜೀವನ ಕಟ್ಟಿಕೊಂಡಿದ್ದ ಹಿರಿಯ ದಂಪತಿಗಳು ಒಂದೇ ದಿನ ಮೊಕ್ಷವನ್ನು ಹೊಂದುವುದರ ಮೂಲಕ ಸಾವಿನಲ್ಲೂ ಜೊತೆಯಾಗಿ ಸಾಗಿದ ಅಪರೂಪದ ಘಟನೆ ಕೋಟ ಸಮೀಪದ ಬನ್ನಾಡಿ ಕಂಬಳಕಟ್ಟು ಎಂಬಲ್ಲಿ ನಡೆದಿದೆ.ಕೋಟ ಕಂಬಳಕಟ್ಟು ಗುರಿಕಾರ ಮನೆ ಕೃಷ್ಣ ಪೂಜಾರಿ (58) ಮತ್ತು ಅವರ ಪತ್ನಿ ಮುತ್ತು ಪೂಜಾರ್ತಿ(53) ಎನ್ನುವ ದಂಪತಿಗಳು ಮರಣ ಹೊಂದುವಾಗಲೂ ಜೊತೆಯಾಗಿ ಇಹಲೋಕ ತ್ಯಜಿಸಿದ್ದಾರೆ.ಕಂಬಳಕಟ್ಟು ಗುರಿಕಾರ ಮನೆ ಕೃಷ್ಣ ಪೂಜಾರಿ ಬ್ರಹ್ಮಬೈದರ್ಕಳ ಕಂಬಳಾಭಿಮಾನಿಯಾಗಿ, ಕಂಬಳದ ಸ್ವಯಂಸೇವಕರಾಗಿ ನಿರಂತರ ಸೇವೆಮಾಡುತ್ತ, ಕೃಷಿರಾಗಿ ಗುರುತಿಸಿಕೊಂಡಿದ್ದರು.ಅವರ ಪತ್ನಿ […]

ಆಗಷ್ಟ್.04 ರಂದು ಮರವಂತೆ ಕರ್ಕಾಟಕ ಅಮಾವಾಸ್ಯೆ ಜಾತ್ರೆ

ಕುಂದಾಪುರ:ಬೈಂದೂರು ತಾಲೂಕಿನ ಮರವಂತೆ ಮಹಾರಾಜ ಸ್ವಾಮಿ ಶ್ರೀವರಾಹ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಆಗಷ್ಟ್.04 ರ ಭಾನುವಾರ ನಡೆಯಲಿದೆ. ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ ಎಂ. ನಾಯಕ ತಿಳಿಸಿದ್ದಾರೆ.

You cannot copy content of this page