ಗಂಗೊಳ್ಳಿ:ಮಳೆಗೆ ಮನೆ ಕುಸಿದು ಬಿದ್ದು ಹಾನಿ

ಕುಂದಾಪುರ:ಗುರುವಾರ ಬೀಸಿದ ಭಾರಿ ಗಾಳಿ ಮಳೆಗೆ ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲರ್ ಬೆಟ್ಟು ನಿವಾಸಿ ರೇಖಾ ಖಾರ್ವಿ ಅವರ ಮನೆ ಕುಸಿದು ಬಿದ್ದು ಅಂದಾಜು 10 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದ ಘಟನೆ ನಡಿದಿದೆ.ಗಂಗೊಳ್ಳಿ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕುರುದ್ವೀಪ ಪ್ರದೇಶದಲ್ಲಿ ಮತ್ತೆ ನೆರೆ

ಕುಂದಾಪುರ:ಬುಧವಾರ ದಿಂದ ಸುರಿಯುತ್ತಿದ್ದ ಭಾರಿ ಮಳೆಗೆ ಬೈಂದೂರು ತಾಲೂಕಿನ ನಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರುದ್ವೀಪ ಪ್ರದೇಶದಲ್ಲಿ ಗುರುವಾರ ಮತ್ತೆ ನೆರೆ ನೀರು ಆವರಿಸಿದ್ದು.ಆಳೆತ್ತರದ ನೀರು ಮನೆಯನ್ನು ಆವರಿಸಿದೆ.ಹದಿನೈದು ದಿನಗಳಿಂದ ನಿರಂತರವಾಗಿ ನೆರೆ ಕಾಣಿಸಿಕೊಂಡಿದ್ದರಿಂದ ದ್ವೀಪ ವಾಸಿಗಳ ನಿದ್ದೆ ಹಾಳು ಗೇಡವಿದೆ.ಆತಂಕದಲ್ಲೆ ಜೀವನವನ್ನು ಸಾಗಿಸುವಂತೆ ಆಗಿದೆ.

ಶಿರಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ:ಚಾಲಕ ಪಾರು

ಮಂಗಳೂರು:ಸಕಲೇಶಪುರ ತಾಲೂಕಿನ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ದೊಡ್ಡತಪ್ಪಲು ಎಂಬಲ್ಲಿ ಭೂ ಕುಸಿತ ಉಂಟಾಗಿ ಓಮಿನಿಯೊಂದು ಜಖಂಗೊಂಡಿದ್ದು, ಅದೃಷ್ಟವಶಾತ್‌ ಕಾರು ಚಾಲಕ ಅಪಾಯದಿಂದ ಪಾರಾದ ಘಟನೆ ಜು.18ರ ಗುರುವಾರ ನಸುಕಿನ ಜಾವ 2.30ರ ಸಮಯಕ್ಕೆ ಸಂಭವಿಸಿದೆ.ಬೇಲೂರು ತಾಲೂಕಿನ ಬಿಕ್ಕೊಡು ಮೂಲದ ಶರತ್ ಎಂಬವರು ಮಂಗಳೂರು ಕಡೆಯಿಂದ ಸಕಲೇಶಪುರ ಮಾರ್ಗವಾಗಿ ಬರುವ ಸಂದರ್ಭ ದೊಡ್ಡತಪ್ಪಲು ಸಮೀಪ ಭೂ ಕುಸಿತ ಉಂಟಾಗಿ ಕಾರಿನ ಮೇಲೆ ಬಿದ್ದಿದ್ದು ಕಾರು ಮಣ್ಣಿನ ರಾಶಿಯಲ್ಲಿ ಸಿಲುಕಿ ಸಂಪೂರ್ಣವಾಗಿ ಕುಸಿದಿದೆ.ಈ ಸಂದರ್ಭದಲ್ಲಿ ಹೆದ್ದಾರಿ ಕಾಮಗಾರಿ ಗುತ್ತಿಗೆದಾರ […]

You cannot copy content of this page