ಸೋಮೇಶ್ವರ ಬಳಿ ಗುಡ್ಡ ಕುಸಿತ ಭೀತಿ:ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಶಾಸಕ ಗುರುರಾಜ್ ಗಂಟಿಹೊಳೆ ಸೂಚನೆ
ಕುಂದಾಪುರ:ಬೈಂದೂರು ಪಡುವರಿ ಸೋಮೇಶ್ವರ ಬೀಚ್ ಗೆ ತೆರಳುವ ರಸ್ತೆಯಲ್ಲಿ ಗುಡ್ಡ ಕುಸಿಯುವ ಆತಂಕ ಎದುರಾಗಿದ್ದು,ಈ ಸಂಬಂಧ ಅಗತ್ಯ ಕಾಮಗಾರಿ ವ್ಯವಸ್ಥಿತ ರೀತಿಯಲ್ಲಿ ನಡೆಸುವಂತೆ ಈ ಹಿಂದೆಯೇ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿತ್ತು. ಆದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ.ಈಗ ಮಳೆಗೆ ಗುಡ್ಡ ಕುಸಿದರೆ ಅಧಿಕಾರಿಗಳೇ ಅದಕ್ಕೆ ಜವಾಬ್ದಾರರು.ತಕ್ಷಣವೇ ತುರ್ತು ಕಾಮಗಾರಿ ನಡೆಸಬೇಕು ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಸೂಚಿಸಿದ್ದಾರೆ.ಈ ಪ್ರದೇಶಕ್ಕೆ ಈ ಹಿಂದೆ ಭೇಟಿ ನೀಡಿದ ಸಂದರ್ಭದಲ್ಲಿ ಸ್ಥಳೀಯರು ಎಚ್ಚರಿಕೆ ಸೂಚನೆ ನೀಡಿರುವ ಜತೆಗೆ ದೂರನ್ನು ಕೊಟ್ಟಿದ್ದರು.ಈ ಬಗ್ಗೆ […]