ಬಡಾಕೆರೆ ಶಾಲೆ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ
ಕುಂದಾಪುರ:ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಬಡಾಕೆರೆ ಶಾಲೆಯಲ್ಲಿನ ಎಲ್ಕೆಜಿ ಮತ್ತು ಯುಕೆಜಿ ವಿದ್ಯಾರ್ಥಿಗಳಿಗೆ ಬಾಲ್ಯ ಫೌಂಡೇಶನ್ ವತಿಯಿಂದ ಪುಸ್ತಕ,ಸ್ಕೂಲ್ ಬ್ಯಾಗ್ ಮತ್ತು ಶಾಲಾ ಕೊಠಡಿಗೆ ಪೇಂಟಿಂಗ್ ಕಾರ್ಯವನ್ನು ನೆರವೇರಿಸಲು ಧನಸಹಾಯದ ರೂಪದಲ್ಲಿ ಚೆಕ್ ಭಾನುವಾರ ವಿತರಿಸಲಾಯಿತು.ಬಾಲ್ಯ ಫೌಂಡೇಶನ್ ಅಧ್ಯಕ್ಷ ಎಸ್.ನಾಗರಾಜ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಬಾಲ್ಯ ಫೌಂಡೇಶನ್ ಸಂಸ್ಥೆಯು ಸ್ವಾಮಿ ವಿವೇಕಾನಂದರ ತತ್ವ ಹಾಗು ಡಾ. ಅಬ್ದುಲ್ ಕಲಾಂ ಅವರ ಸಿದ್ಧಾಂತದಿಂದ ಪ್ರೇರೇಪಿತಗೊಂಡು 2009ರಲ್ಲಿ ಪ್ರಾರಂಭವಾಯಿತು.ಸಂಸ್ಥೆಯ ಗುರಿ ಮಕ್ಕಳಲ್ಲಿ ವಿದ್ಯಾಭ್ಯಾಸದ ಮಹತ್ವತೆಯನ್ನು ತಿಳಿಸುವುದು ಮತ್ತು ಪ್ರತಿಯೊಂದು ಮಗುವನ್ನು […]



























































































































































































































































































































































































































































































































































































































































































































































































































































































































































































































































































































































































































































































































































































































































































