ಬೈಂದೂರು:ಅಂತರಾಷ್ಟ್ರೀಯ ಮಟ್ಟದ ಬೃಹತ್ ಉದ್ಯೋಗ ಮೇಳ ಉದ್ಘಾಟನೆ

ಕುಂದಾಪುರ:ಸಮೃದ್ಧ ಬೈಂದೂರು,ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ಹಾಗೂ ಅಜಿನೋರಾಹ್ ಸಂಸ್ಥೆ ಸಹಭಾಗಿತ್ವದಲ್ಲಿ ಅಂತರಾಷ್ಟ್ರೀಯ ಮಟ್ಟದ ಬೃಹತ್ ಉದ್ಯೋಗ ಮೇಳ ಬೈಂದೂರು ಜೆ.ಎನ್.ಆರ್ ಸಭಾಂಗಣದಲ್ಲಿ ಸೋಮವಾರ ನಡೆಯಿತು.ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಅವರು ಅಂತರಾಷ್ಟ್ರೀಯ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿ,ಯುವ ಶಕ್ತಿಗೆ ಶಕ್ತಿಯನ್ನು ತುಂಬುವ ನಿಟ್ಟಿನಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಸಹಭಾಗಿತ್ವದಲ್ಲಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗುತ್ತಿದೆ.ಸಂದರ್ಶನದಲ್ಲಿ ಆಯ್ಕೆಗೊಳ್ಳುವ ಅಭ್ಯರ್ಥಿಗಳಿಗೆ ತರಬೇತಿ ಸಂಸ್ಥೆಗಳ ಮೂಲಕ ತರಬೇತಿಯನ್ನು ನೀಡುವುದರ ಜತೆಗೆ ವಿದೇಶಕ್ಕೆ ತೆರಳಲು ತಗಲುವ ವೆಚ್ಚವನ್ನು […]

ಶ್ರೀ ಗೋಪಾಲಕೃಷ್ಣ ದೇವರಿಗೆ ತುಳಸಿ ಅರ್ಚನೆ

ಕುಂದಾಪುರ:ತಾಲೂಕಿನ ಹೊಸಾಡು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸೋಮವಾರ ನಡೆಯಿತು.ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಶ್ರೀ ಗೋಪಾಲಕೃಷ್ಣ ದೇವರಿಗೆ ತುಳಸಿ ಅರ್ಚನೆ,ಹಣ್ಣುಕಾಯಿ ಮತ್ತು ಮಂಗಳಾರತಿ ಸೇವೆ,ಮಹಾ ಪೂಜೆಯನ್ನು ನೆರವೇರಿಸಲಾಯಿತು.ಪ್ರಸಾದ ವಿತರಣೆ ಹಾಗೂ ಭಜನಾ ಕಾರ್ಯಕ್ರಮ ಜರುಗಿತು.

ನಟ ರಿಷಬ್ ಶೆಟ್ಟಿ ಗುಡ್ಡಮ್ಮಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ

ಕುಂದಾಪುರ:ಕನ್ನಡ ಚಿತ್ರರಂಗದ ಖ್ಯಾತ ನಟ ರಾಷ್ಟ್ರ ಪ್ರಶಸ್ತಿ ಪುರಸ್ಕøತರಾದ ಕಾಂತಾರ ರಿಷಬ್ ಶೆಟ್ಟಿ ಅವರು ಕುಂದಾಪುರ ತಾಲೂಕಿನ ಪ್ರಸಿದ್ಧ ಶ್ರೀಕ್ಷೇತ್ರ ಶ್ರೀ ಗುಡ್ಡಮ್ಮಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತಮ್ಮ ಕುಟುಂಬದವರೊಂದಿಗೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು.ದೇವಸ್ಥಾನದ ಅರ್ಚಕರಾದ ನಾಗೇಂದ್ರ ಭಟ್ ಅವರು ರಿಷಬ್ ಶೆಟ್ಟಿ ದಂಪತಿಗಳನ್ನು ಗೌರವಿಸಿದರು.ಸಿಬ್ಬಂದಿಗಳು ಉಪಸ್ಥಿತರಿದ್ದರು.

You cannot copy content of this page