ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಾಗಾರ.

ಹೆಮ್ಮಾಡಿ:ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ,ಸಹೋದರಿ ನಿವೇದಿತಾ ಪ್ರತಿಷ್ಠಾನ ಉಡುಪಿ, ರೋಟರಿ ಕ್ಲಬ್ ಕುಂದಾಪುರ ರಿವರ್ ಸೈಡ್ ಅವರ ಜಂಟಿ ಆಶ್ರಯದಲ್ಲಿ ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ನಾಗಲಕ್ಷ್ಮಿ ಬೆಂಗಳೂರು ಅವರು ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿ,ಎಲ್ಲರಲ್ಲಿಯೂ ಒಂದು ವಿಶೇಷ ಕೌಶಲ್ಯ ಇರುತ್ತದೆ,ಇಂದಿನ ಜೀವನದಲ್ಲಿ ಶಿಕ್ಷಣದ ಜೊತೆ-ಜೊತೆಗೆ ಕೌಶಲ್ಯವನ್ನೂ ವೃದ್ಧಿಸಿಕೊಳ್ಳುವುದು ಬಹಳ ಪ್ರಮುಖವಾದದ್ದು,ವಿದ್ಯಾರ್ಥಿ ಜೀವನದಲ್ಲಿ ಪಡೆದ ಅನುಭವ ನಿಮ್ಮ ಜೀವನದ ಬದುಕಿನ ಅಡಿಪಾಯವಾಗಬೇಕು ಎಂದು ಹೇಳಿದರು.ರೋಟರಿ ರಿವರ್ ಸೈಡ್ ಕುಂದಾಪುರ ಅಧ್ಯಕ್ಷ […]

ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಅಗ್ನಿನಂದಕ ಪ್ರಾತ್ಯಕ್ಷಿಕೆ ಕಾರ್ಯಾಗಾರ.

ಕುಂದಾಪುರ:ಜೆಸಿಐ ಕುಂದಾಪುರ ಸಿಟಿ,ಜ್ಯೂನಿಯರ್ ಸಿಟಿ ವಿಂಗ್ ಆಯೋಜನೆಯಲ್ಲಿ ಅಗ್ನಿಶಾಮಕ ದಳ ಕುಂದಾಪುರ ಠಾಣೆ ಸಹಭಾಗಿತ್ವದಲ್ಲಿ ಅಗ್ನಿನಂದಕ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಹೆಮ್ಮಾಡಿ ಜನತಾ ಕಾಲೇಜಿನ ವಠಾರದಲ್ಲಿ ನಡೆಯಿತು.ಜ್ಯೂನಿಯರ್ ಸಿಟಿ ವಿಂಗ್ ನ ಅಧ್ಯಕ್ಷರಾದ ಜೆಎಪ್ ಡಿ ಕಿರಣ್ ಅಧ್ಯಕ್ಷತೆ ವಹಿಸಿದ್ದರು.ಜ್ಯೂನಿಯರ್ ಜೆಸಿಐ ರಾಷ್ಟ್ರೀಯ ಮಟ್ಟದ ಸಂಯೋಜಕರ ಜೆಎಪ್ ಎಸ್ ರಾಜೇಶ್ ರಾಜನ್,ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ,ಜನತಾ ಪ್ರೌಢಶಾಲೆ ಹೆಮ್ಮಾಡಿಯ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ,ಕುಂದಾಪುರ ಸಿಟಿ ಜೆಸಿಐ ಅಧ್ಯಕ್ಷ […]

ನೇತ್ರಾವತಿ ನದಿ ನೀರಿನ ಮಟ್ಟ ಹೆಚ್ಚಳ

ಮಂಗಳೂರು:ಬಂಟ್ವಾಳದಲ್ಲಿ ನೇತ್ರಾವತಿ ನದಿ ನೀರಿನ ಮಟ್ಟ ಶನಿವಾರ ಬೆಳಗಿನ ಜಾವ ಹೆಚ್ಚಳವಾಗಿದೆ.ಈ ಭಾಗದಲ್ಲಿ ಅಪಾಯದ ಮಟ್ಟ 8.5 ಮೀಟರ್ ಆಗಿದ್ದು,ಸುಮಾರು 8 ಮೀಟರ್ ಎತ್ತರಕ್ಕೆ ಬರುವ ಹೊತ್ತಿಗೆ ನೀರು ಸಮೀಪದ ತಗ್ಗು ಪ್ರದೇಶಗಳಿಗೆ ಹರಿಯಲಾರಂಭಿಸುತ್ತದೆ. ಈಗಾಗಲೇ ಮುಂಜಾಗರೂಕತಾ ಕ್ರಮ ಕೈಗೊಳ್ಳಲಾಗಿದ್ದು, ನದಿ ಸಮೀಪದ ಭಾಗಗಳಲ್ಲಿ ವಾಸಿಸುವವರು ಹಾಗೂ ಪ್ರತಿ ಬಾರಿಯೂ ನೀರಿನ ಮಟ್ಟ ಏರುವ ಸಂದರ್ಭ ತೊಂದರೆಗೊಳಗಾಗುವವರಿಗೆ ಸೂಚನೆಗಳನ್ನು ನೀಡಲಾಗಿದೆ ಎಂದು ಆಡಳಿತ ತಿಳಿಸಿದೆ.

You cannot copy content of this page