ಕಾರ್ಗಿಲ್ ವಿಜಯ ದಿವಸ್:ವಿದ್ಯಾರ್ಥಿ ಜೀವನದಲ್ಲಿಯೇ ರಾಷ್ಟ್ರ ಭಕ್ತಿ ಮೈಗೂಡಿಸಿಕೊಳ್ಳಬೇಕು-ಪ್ರಿನ್ಸಿಪಾಲ್ ಗಣೇಶ ಮೊಗವೀರ

ಕುಂದಾಪುರ:ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜು ಮತ್ತು ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲೀಷ್ ಮಿಡೀಯಂ ಸ್ಕೂಲ್‌ನಲ್ಲಿ (ಶುಭದಾ) ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮ ಶುಕ್ರವಾರ ನಡೆಯಿತು.ಅಧ್ಯಕ್ಷತೆ ವಹಿಸಿದ್ದ ಹೆಮ್ಮಾಡಿ ಜನತಾ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ಪ್ರಿನ್ಸಿಪಾಲ್ ಗಣೇಶ ಮೊಗವೀರ ಮಾತನಾಡಿ,ವಿದ್ಯಾರ್ಥಿ ಜೀವನದಲ್ಲೆ ರಾಷ್ಟ್ರ ಭಕ್ತಿಯನ್ನು ಮೈಗೂಡಿಸಿ ಕೊಳ್ಳಬೇಕು.ಸೈನಿಕರು ಹಾಗೂ ರೈತರು ನಮ್ಮ ದೇಶದ ರಿಯಲ್ ಹಿರೋಗಳು ಎಂದು ಅಭಿಪ್ರಾಯಪಟ್ಟರು.ಭಾರತೀಯ ಸೇನೆಯ ನಿವೃತ್ತ ಜೂನಿಯರ್ ಕಮಿಷನ್ಸ್ ಅಧಿಕಾರಿ ಜೋಷಿ ಪಿ.ಪಿ.ಹುತಾತ್ಮ ಸೈನಿಕರ ಭಾವಚಿತ್ರಕ್ಕೆ ಪುಷ್ಪ ನಮನವನ್ನು […]

ಬಡಾಕೆರೆ:ಸಮಾಲೋಚನಾ ಸಭೆ ಉದ್ಘಾಟನೆ

ಕುಂದಾಪುರ:ಕಂಬದಕೋಣೆ ಶಿಕ್ಷಣ ಸಂಯೋಜಕ ಕೇಂದ್ರದ ಜುಲೈ ತಿಂಗಳ ಸಮಾಲೋಚನಾ ಸಭೆ ಸ.ಹಿ‌.ಪ್ರಾ.ಶಾಲೆ ಬಡಾಕೆರೆಯಲ್ಲಿ ಶನಿವಾರ ನಡೆಯಿತು.ಶ್ರೀ ಶೃಂಗೇರಿ ಪೀಠದ ಪ್ರಾಂತೀಯ ಧರ್ಮಾಧಿಕಾರಿಗಳು ಹಾಗೂ ಶಾಲೆಯನ್ನು ದತ್ತು ಸ್ವೀಕಾರ ಮಾಡಿರುವ ವೇದ.ಮೂರ್ತಿ ಲೋಕೇಶ ಅಡಿಗ ದೀಪ ಪ್ರಜ್ವಲಿಸಿ ಉದ್ಘಾಟಿಸಿ ಮಾತನಾಡಿ,ಶಿಕ್ಷಣದೊಂದಿಗೆ ಸತ್ಯಶೀಲತೆ,ನ್ಯಾಯ, ಧರ್ಮಾಚರಣೆ,ಸಂಸ್ಕೃತಿಗಳು ಕೂಡಿದಾಗ ಮಾತ್ರ ಉತ್ತಮ ಶಿಕ್ಷಣ ದೊರೆಯುತ್ತದೆ.ಶಿಕ್ಷಕರು ಅಂತಹ ಗುರುತರವಾದ ಜವಾಬ್ದಾರಿಯನ್ನು ವಹಿಸಿದಾಗ ಶಿಕ್ಷಣ ಪರಿಪೂರ್ಣವಾಗುವುದು ಎಂದು ಶುಭ ಹಾರೈಸಿದರು.ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಕಲಿಕಾ ಬಲವರ್ಧನೆಗಾಗಿ ನಡೆಸಬಹುದಾದ ಕಾರ್ಯ ಚಟುವಟಿಕೆಗಳ ಬಗ್ಗೆ ಬೆಳಕು ಚೆಲುವ ಮಾಹಿತಿಯನ್ನು […]

ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ನ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಶಯದೇವಿಸುತೆ ಮರವಂತೆ ಆಯ್ಕೆ

ಕುಂದಾಪುರ:ಶಯದೇವಿಸುತೆ ಮರವಂತೆ(ಜ್ಯೋತಿ ಜೀವನ್ ಸ್ವರೂಪ್) ಅವರು ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ನ ನೂತನ ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.ಆಧ್ಯಾತ್ಮಿಕ ಚಿಂತಕರಾಗಿ, ಸಂಗೀತ-ಸಾಹಿತ್ಯ ಕಲಾ ಲೋಕದಲ್ಲಿ,ಯಕ್ಷಗಾನ ಕ್ಷೇತ್ರದಲ್ಲಿ,ವಿವಿಧ ಪತ್ರಿಕೋದ್ಯಮ ಹಾಗೂ, ಹಲವಾರು ಮಾಧ್ಯಮ ವಾಹಿನಿಗಳಲ್ಲಿ ಸತತ ಸೇವೆಗೈಯ್ಧಿರುವಂತಹಇವರ ಕಲಾಪ್ರತಿಭೆಯ ನಿರಂತರ ಸೇವೆಗೆ ಅಕ್ಕಮಹಾದೇವಿ ಪ್ರಶಸ್ತಿ,ಹುಟ್ಟೂರ ಸಾಧಕ ಸಂಮ್ಮಾನ ಪ್ರಶಸ್ತಿ,ಮಹಿಳಾ ಸಾಧಕಿ ಪ್ರಶಸ್ತಿ,ರಂಗಸ್ಥಳ ರತ್ನ ಪ್ರಶಸ್ತಿ,ಕುಂದಶ್ರೀ ಪ್ರಶಸ್ತಿ, ವಿಶ್ವಕವಿ ಕುವೆಂಪು ಕಾವ್ಯ ಪುರಸ್ಕಾರ,ವಿಶ್ವಮಾನ್ಯ ಕನ್ನಡಿಗ ಪ್ರಶಸ್ತಿ,ಸ್ಟೇಟ್ ಲೆವೆಲ್ ಅವಾರ್ಡ್,ಡಾ. ಜಿ.ಡಿ. ಜೋಶಿ ಗೌರವ ಪ್ರಶಸ್ತಿ, ಕನ್ನಡ ರಾಜ್ಯೋತ್ಸವ […]

You cannot copy content of this page