ಬಾವಿಗೆ ಕಾಲು ಜಾರಿ ಬಿದ್ದು ಕೃಷಿಕ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಬಡಾಕೆರೆ ಗ್ರಾಮದ ಪೋಸ್ಟ್ ನಿವಾಸಿ ಕೃಷಿಕ ಮಂಜುನಾಥ ಶೇಟ್ (85) ಎಂಬುವವರು ತೆಂಗಿನ ತೋಟದಲ್ಲಿ ತೆಂಗಿನಕಾಯಿ ಹೆಕ್ಕಲು ಹೋದಂತಹ ಸಮಯದಲ್ಲಿ ಬಾವಿ ಬದಿಯಲ್ಲಿ ಬಿದ್ದಿರುವ ತೆಂಗಿನಕಾಯಿಯನ್ನು ಹೆಕ್ಕುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ.ಮಂಜುನಾಥ ಶೇಟ್ ಅವರು ಬೆಳಗಿನ ಸಮಯದಲ್ಲಿ ತೆಂಗಿನ ತೋಟಕ್ಕೆ ಹೋಗಿ ತೋಟದಲ್ಲಿ ಬಿದ್ದಿರುವ ಕಾಯಿಯನ್ನು ಹೆಕ್ಕುವ ಅಭ್ಯಾಸವನ್ನು ಇಟ್ಟುಕೊಂಡಿದ್ದರು.ದಿನ ನಿತ್ಯದ ರೂಢಿಯಂತೆ ಬುಧವಾರ ಬೆಳಗಿನ ಸಮಯದಲ್ಲಿ ತೋಟಕ್ಕೆ ಕಾಯಿಯನ್ನು ಹೆಕ್ಕಲು ಮನೆಯಿಂದ […]

ವಾರಾಹಿ ನೀರಿಗಾಗಿ ಗ್ರಾಮ ಮಟ್ಟದಲ್ಲಿ ಜನಾಂದೋಲನಕ್ಕೆ ಪೂರ್ವ ತಯಾರಿ:ಶಾಸಕ ಗುರುರಾಜ್ ಗಂಟಿಹೊಳೆ ‌ನೇತೃತ್ವದಲ್ಲಿ ಸಭೆ

ಕುಂದಾಪುರ:ವಾರಾಹಿ‌ ನದಿ ನೀರು ಯೋಜನೆ ಬೈಂದೂರು ಕ್ಷೇತ್ರದ ಜನರಿಗೆ ಸಮರ್ಪಕವಾಗಿ ದೊರಕಬೇಕ್ಕೆನ್ನುವ ನಿಟ್ಟಿನಲ್ಲಿ ಹಾಗೂ ಯೋಜನೆಯ ಲಾಭ ಯಶಸ್ವಿಯಾಗಿ ಜಾರಿಗೆ ತರಲು ಒತ್ತಾಯಿಸಿ ಹೋರಾಟವನ್ನು ನಡೆಸುವ ಸಲುವಾಗಿ ಬೈಂದೂರು ಕ್ಷೇತ್ರದಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ನೇತೃತ್ವದಲ್ಲಿ ಸಿದ್ದಾಪುರದಲ್ಲಿ ಪೂರ್ವ ಸಿದ್ಧತಾ ಸಭೆ ನಡೆಯಿತು.ಶಾಸಕರು ಸಭೆಯನ್ನುದ್ದೇಶಿಸಿ ಮಾತ‌ನಾಡಿ,ರಾಜ್ಯ ಸರ್ಕಾರ ವಾರಾಹಿ ಯೋಜನೆ ಅನುಷ್ಠಾನದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದೆ. ಯೋಜನೆ ಬೈಂದೂರು ಕ್ಷೇತ್ರ ವ್ಯಾಪ್ತಿಯಲ್ಲಿ ಇದ್ದರೂ ಬೈಂದೂರಿನ ಯಾವುದೇ ಗ್ರಾಮಕ್ಕೆ ಇದರ ಪ್ರಯೋಜನ ಆಗುತ್ತಿಲ್ಲ.ವಾರಾಹಿ ನೀರು ಬೈಂದೂರಿನ ಗ್ರಾಮಗಳ ರೈತರ […]

ರಾಷ್ಟ್ರೀಯ ಮಟ್ಟದ ನಾಟಾ ಪ್ರವೇಶ ಪರೀಕ್ಷೆ:ಹೆಮ್ಮಾಡಿ ಜನತಾ ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ ಜಿಲ್ಲೆಗೆ ಪ್ರಥಮ

ಕುಂದಾಪುರ:ರಾಷ್ಟ್ರೀಯ ಮಟ್ಟದಲ್ಲಿ ನಡೆದ ನಾಟಾ ಪ್ರವೇಶ ಪರೀಕ್ಷೆ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್,ಪರೀಕ್ಷೆ ಬರೆದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ ರಾಜ್ಯಕ್ಕೆ 16ನೇ ಸ್ಥಾನ ಪಡೆದು,ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ.ಕಾಲೇಜಿನ ಇನ್ನೋರ್ವ ವಿದ್ಯಾರ್ಥಿನಿ ವರ್ಣಾ ಆಚಾರ್ ರಾಜ್ಯ ಮಟ್ಟದಲ್ಲಿ 197ನೇ ಸ್ಥಾನವನ್ನು ಗಳಿಸಿದ್ದಾರೆ.ಪಠ್ಯೇತರ ಚಟುವಟಿಕೆಗಳಲ್ಲಿಯೂ ಮುಂಚೂಣಿಯಲ್ಲಿರುವ ವಿದ್ಯಾರ್ಥಿನಿಯರಿಬ್ಬರು ಕಾಲೇಜಿನ ಪ್ರತಿಭಾನ್ವಿತ ವಿದ್ಯಾರ್ಥಿನಿಯರಾಗಿದ್ದಾರೆ.ರಾಜ್ಯದ ಪ್ರತಿಷ್ಠಿತ ಇಂಜಿನಿಯರ್ ಕಾಲೇಜಿನಲ್ಲಿ ಪ್ರವೇಶಾತಿ ಪಡೆಯಲು ಅರ್ಹರಾಗಿರುತ್ತಾರೆ.ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಜನತಾ ಪದವಿ ಪೂರ್ವ ಶಿಕ್ಷಣ ಸಂಸ್ಥೆ […]

You cannot copy content of this page