ಶೃಂಗೇರಿ:ಗುರುನಮನ ಕಾರ್ಯಕ್ರಮ,ವಿದ್ವಾಂಸರಿಗೆ ಸನ್ಮಾನ

ಕುಂದಾಪುರ:ವೇದಾಭಿಮಾನಿಗಳು ಘನಪಾಠಿ ಲಕ್ಷ್ಮೀನಾರಾಯಣ ಭಟ್ ಅವರ ನೇತೃತ್ವದಲ್ಲಿ ಶೃಂಗೇರಿ ಶ್ರೀಮದ್ ಜಗದ್ಗುರು ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳ ಗುರುನಮನ ಕಾರ್ಯಕ್ರಮ ಶ್ರೀವಿಧುಶೇಖರ ಸ್ವಾಮಿಗಳ ದಿವ್ಯ ಉಪಸ್ಥಿತಿಯಲ್ಲಿ ಶೃಂಗೇರಿಯಲ್ಲಿ ನಡೆಯಿತು.ಶ್ರೀಗಳ ಗುರುನಮನ ಕಾರ್ಯಕ್ರಮದಲ್ಲಿ ಅಗ್ನಿಹೋತ್ರಿ ವಾಸುದೇವ ಜೋಗಳೇಕರ್ ಗೋಕರ್ಣ (ಋಗ್ವೇದ),ಅಗ್ನಿಹೋತ್ರಿ ನರಸಿಂಹ ಭಟ್ ಉಮ್ಮಚಗಿ (ಯಜುರ್ವೇದ) ಹಾಗೂ ರಾಮಮೂರ್ತಿ ಶ್ರೌತಿಗಳು ವಿದ್ಯಾರಣ್ಯಪುರ ಶೃಂಗೇರಿ (ಸಾಮವೇದ) ಅವರಿಗೆ ಫಲಪುಷ್ಪ ಸಹಿತ 4.50 ಲಕ್ಷ.ರೂ ನಗದು ನೀಡಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಕುಂದಾಪುರ ತಾಲೂಕಿನ ಹೊಸಾಡು ಶ್ರೀ ಗಣೇಶ ಕ್ರೆಡಿಟ್ ಸೊಸೈಟಿ ಅಧ್ಯಕ್ಷ […]

ಮರವಂತೆ ಶ್ರೀ ಮಹಾರಾಜ ವರಾಹ ಸ್ವಾಮಿ ದೇವಸ್ಥಾನದ ಬೆಳ್ಳಿ ರಥ ನಿರ್ಮಾಣಕ್ಕೆ ಧನ ಸಹಾಯ ಹಸ್ತಾಂತರ

ಕುಂದಾಪುರ:ವಲಯ ನಾಡದೋಣಿ ಮೀನುಗಾರರ ಸಂಘ ಉಪ್ಪುಂದ ವತಿಯಿಂದ ಮರವಂತೆ ಶ್ರೀ ಮಹಾರಾಜ ವರಾಹ ಸ್ವಾಮಿ ದೇವಸ್ಥಾನದ ಬೆಳ್ಳಿ ರಥ ನಿರ್ಮಾಣಕ್ಕೆ 10,00,101 ರೂ ಮೊತ್ತದ ಚೆಕ್‍ನ್ನು ಶುಕ್ರವಾರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಹಸ್ತಾಂತರಿಸಲಾಯಿತು.ಸಂಘದ ಅಧ್ಯಕ್ಷ ಉಪ್ಪುಂದ ಆನಂದ ಖಾರ್ವಿ ಮಾತನಾಡಿ, ಮೀನುಗಾರರು ಈ ಹಿಂದೆ ದೇವಸ್ಥಾನಕ್ಕೆ ಉಪ್ಪುಂದ ರಥವನ್ನು ನೀಡಿದ್ದು ಶ್ರೀ ದೇವರಲ್ಲಿ ಮೀನುಗಾರಿಕಾ ಉದ್ಯೋಗದಲ್ಲಿ ಸಮೃದ್ಧಿಯನ್ನು ಕರುಣಿಸುವ ಸಲುವಾಗಿ ಪ್ರಾರ್ಥಿಸಿದಂತೆ ಬೆಳ್ಳಿ ರಥದ ನಿರ್ಮಾಣಕ್ಕೆ ಸಂಘದ ಮೀನುಗಾರರ ವತಿಯಿಂದ ಈ ಕೊಡುಗೆ ನೀಡಲಾಗಿದೆ ಎಂದು […]

ಜಲಜೀವನ್ ಹೊಂಡಕ್ಕೆ ಉರುಳಿದ ಸರಕಾರಿ ಬಸ್

ಉಡುಪಿ:ಕುಂದಾಪುರ ದಿಂದ ಗಂಗೊಳ್ಳಿಗೆ ಸಾಗುತ್ತಿದ್ದ ಸರಕಾರಿ ಬಸ್ ಗುಜ್ಜಾಡಿ ಮುಖ್ಯ ರಸ್ತೆಯಲ್ಲಿ ಬೇರೊಂದು ಗಾಡಿಗೆ ಸೈಡ್ ಕೊಡುತ್ತಿದ್ದ ಸಮಯದಲ್ಲಿ ರಸ್ತೆ ಬದಿಯಲ್ಲಿದ್ದ ಜಲ ಜೀವನ್ ಮೆಷಿನ್ ನೀರಿನ ಪೈಪ್ ಲೈನ್ ಹೊಂಡದಲ್ಲಿ ಸಿಲುಕಿದ ಘಟನೆ ಶನಿವಾರ ನಡೆದಿದೆ.ಕ್ರೈನ್ ಸಹಾಯದಿಂದ ಹೊಂಡದಲ್ಲಿ ಸಿಲುಕಿದ ಬಸ್‍ನ್ನು ಮೇಲಕ್ಕೆ ಎತ್ತಲಾಯಿತು.ಮುಳ್ಳಿಕಟ್ಟೆ ಗುಜ್ಜಾಡಿ ಮಾರ್ಗದ ಮುಖ್ಯ ರಸ್ತೆ ಬದಿಯಲ್ಲಿ ಜಲಜೀವನ್ ನೀರಿನ ಪೈಪ್ ಲೈನ್ ಹೊಂಡ ಅಪಾಯವನ್ನು ತಂದೊಡ್ಡುತ್ತಿದ್ದು ಕ್ರಮಗಳನ್ನು ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

You cannot copy content of this page