ಶ್ರೀ ಗೋಪಾಲಕೃಷ್ಣ ದೇವಸ್ಥಾನ ಮೂಡುಮಠ:ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಕುಂದಾಪುರ:ಮೂಡುಮಠ ಉಳ್ಳೂರು 11 ಶ್ರೀಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು.ಶ್ರೀಗೋಪಾಲ ಕೃಷ್ಣ ದೇವರಿಗೆ ತುಳಸಿ ಅರ್ಚನೆ,ಹಣ್ಣು ಕಾಯಿ ಮತ್ತು ಮಂಗಳಾರತಿ ಸೇವೆ,ಅನ್ನಸಂತರ್ಪಣೆ ಸೇವೆಯನ್ನು ನೆರವೇರಿಸಲಾಯಿತುಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಮುದ್ದು ಕೃಷ್ಣ ಸ್ಪರ್ಧೆ,ಪುರುಷ ಹಾಗೂ ಮಹಿಳೆಯರಿಂದ ಮೊಸರು ಕುಡಿಕೆ,ಭಜನಾ ಕಾರ್ಯಕ್ರಮ,ಭಕ್ತಿ ಗೀತೆ,ನೃತ್ಯ ಕಾರ್ಯಕ್ರಮ ಜರುಗಿರು.ಸ್ಪರ್ಧೆಯಲ್ಲಿ ವಿಜೇತರಾದ ಪುಟಾಣಿಗಳಿಗೆ ಬಹುಮಾನ ವಿತರಿಸಲಾಯಿತು.ದಾನಿಗಳನ್ನು ಗೌರವಿಸಲಾಯಿತು.ಪೋಷಕರು ತಮ್ಮ ಮಕ್ಕಳಿಗೆ ಕೃಷ್ಣ ವೇಷ ತೊಡಿಸಿ ಸಂಭ್ರಮಿಸಿದರು.ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ರಾಧಾಕೃಷ್ಣ ಶೆಟ್ಟಿ ಮಾತನಾಡಿ,ಶ್ರೀ ಕೃಷ್ಣ […]

ನಾವುಂದ:ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ

ಕುಂದಾಪುರ:ನಾವುಂದ ಮಸ್ಕಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಮಂಗಳವಾರ ನಡೆಯಿತು.ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀ ಗೋಪಾಲಕೃಷ್ಣ ದೇವರಿಗೆ ವಿಶೇಷ ಹೂವಿನ ಅಲಂಕಾರ ಪೂಜೆ,ಹಣ್ಣು ಕಾಯಿ ಮತ್ತು ಮಂಗಳಾರತಿ ಸೇವೆ,ಮಹಾ ಪೂಜೆ,ಅನ್ನ ಸಂತರ್ಪಣೆ ಸೇವೆಯನ್ನು ನೆರವೇರಿಸಲಾಯಿತು.ಭಜನೆ,ಕೃಷ್ಣ ಜನನ ಕಾರ್ಯಕ್ರಮ ಜರುಗಿತು.ಬಾಲ ಕೃಷ್ಣ ವೇಷ ಸ್ಪರ್ಧೆ,ಹಗ್ಗಜಗ್ಗಾಟ,ಸಂಗೀತ ಮೊಸರು ಕುಡಿಕೆ ಒಡೆಯುವುದು ಹಾಗೂ ಓಕುಳಿ ಆಟ ಜರುಗಿತು.ಭಕ್ತರು ಶ್ರೀ ದೇವರ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಭ್ರಮಿಸಿದರು.ಶ್ರೀ ಕೃಷ್ಣ ದೇವರ ನಾಮಸ್ಮರಣೆಯನ್ನು ಕೊಂಡಾಡಿದರು.ಸತೀಶ್ […]

ಆಗಸ್ಟ್.31 ರಂದು ಬೈಂದೂರಿನಲ್ಲಿ ಬೃಹತ್ ಅಂತಾರಾಷ್ಟ್ರೀಯ ಉದ್ಯೋಗ ಮೇಳ ಆಯೋಜನೆ

ಕುಂದಾಪುರ:ಸಮೃದ್ಧ ಬೈಂದೂರು ವತಿಯಿಂದ ಕೇಂದ್ರ ಸರ್ಕಾರದ ಅಂಗ ಸಂಸ್ಥೆಯಾದ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ನಿಗಮ(ಅಂತಾರಾಷ್ಟ್ರೀಯ) ಹಾಗೂ ಅಜಿನುರಹಾ ಸಂಸ್ಥೆಯ ಸಹಭಾಗಿತ್ವದಲ್ಲಿ ಆಗಸ್ಟ್‌ 31ರಂದು ಬೈಂದೂರಿನ ಜೆ.ಎನ್.ಆರ್. ಅಡಿಟೋರಿಯಂನಲ್ಲಿ ಅಂತಾರಾಷ್ಟ್ರೀಯ ಉದ್ಯೋಗ ಮೇಳ ನಡೆಯಲಿದೆ.ವಿದೇಶದಲ್ಲಿ ಉದ್ಯೋಗ ಬಯಸುವವರಿಗೆ ಸುವರ್ಣಾವಕಾಶವನ್ನು ಕಲ್ಪಿಸಲಾಗಿದ್ದು.ಉಚಿತ ತರಬೇತಿ,ಉಚಿತ ವಸತಿ ವ್ಯವಸ್ಥೆ,ಊಟ,ಉಪಹಾರದ ಜತೆಗೆ ವೀಸಾ ಹಾಗೂ ವಿಮಾನ ಟಿಕೆಟ್ ಕೂಡ ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತವಾಗಿ ಸಿಗಲಿದೆ.ವಿದೇಶಿ ಭಾಷೆ ಕಲಿತು, ವಿದೇಶದಲ್ಲಿ ಉದ್ಯೋಗ ಮಾಡಬಹುದು. ಇಂತಹದ್ದೊಂದು ಅವಕಾಶ ಬೈಂದೂರಿಗೆ ಇದೇ ಮೊದಲ ಬಾರಿಗೆ ದೊರಕಲಿದ್ದು ಯುವಕ ಯುವತಿಯರು ಹೆಚ್ಚಿನ […]

You cannot copy content of this page