ಮನೆ ಮೇಲೆ ಮರ ಬಿದ್ದು ಹಾನಿ:ವಿಪತ್ತು ನಿರ್ವಹಣಾ ತಂಡದಿಂದ ತೆರವು

ಕುಂದಾಪುರ:ಭಾನುವಾರ ಸುರಿದ ಭಾರಿ ಗಾಳಿ ಮಳೆಗೆ ಬೈಂದೂರು ತಾಲೂಕಿನ ನಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡ್ಡೆಯಂಗಡಿ ಜನತಾ ಕಾಲೋನಿಯಲ್ಲಿ ಬೃಹತ್ ಗಾತ್ರದ ಮರ ವಿದ್ಯುತ್ ತಂತಿ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಕಂಬ ಮುರಿದು ಬಿದ್ದಿದೆ.ಗಂಗೆ ದೇವಾಡಿಗ ಹಾಗೂ ರಾಘವೇಂದ್ರ ಭಂಡಾರಿ ಅವರ ಮನೆಗೂ ಹಾನಿ ಉಂಟಾಗಿದೆ.ರಸ್ತೆ ಸಂಚಾರಕ್ಕೂ ತೊಡಕು ಉಂಟಾಗಿತ್ತು.ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಪತ್ತು ನಿರ್ವಹಣಾ ತಂಡ ಪಡುಕೋಣೆ-ನಾಡ ವಲಯದ ಸದಸ್ಯರು ಕ್ಷೀಪ್ರಗತಿಯಲ್ಲಿ ಮರವನ್ನು ತೆರವುಗೊಳಿಸಿದರು.

ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಾಗಾರ.

ಹೆಮ್ಮಾಡಿ:ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ,ಸಹೋದರಿ ನಿವೇದಿತಾ ಪ್ರತಿಷ್ಠಾನ ಉಡುಪಿ, ರೋಟರಿ ಕ್ಲಬ್ ಕುಂದಾಪುರ ರಿವರ್ ಸೈಡ್ ಅವರ ಜಂಟಿ ಆಶ್ರಯದಲ್ಲಿ ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ನಾಗಲಕ್ಷ್ಮಿ ಬೆಂಗಳೂರು ಅವರು ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿ,ಎಲ್ಲರಲ್ಲಿಯೂ ಒಂದು ವಿಶೇಷ ಕೌಶಲ್ಯ ಇರುತ್ತದೆ,ಇಂದಿನ ಜೀವನದಲ್ಲಿ ಶಿಕ್ಷಣದ ಜೊತೆ-ಜೊತೆಗೆ ಕೌಶಲ್ಯವನ್ನೂ ವೃದ್ಧಿಸಿಕೊಳ್ಳುವುದು ಬಹಳ ಪ್ರಮುಖವಾದದ್ದು,ವಿದ್ಯಾರ್ಥಿ ಜೀವನದಲ್ಲಿ ಪಡೆದ ಅನುಭವ ನಿಮ್ಮ ಜೀವನದ ಬದುಕಿನ ಅಡಿಪಾಯವಾಗಬೇಕು ಎಂದು ಹೇಳಿದರು.ರೋಟರಿ ರಿವರ್ ಸೈಡ್ ಕುಂದಾಪುರ ಅಧ್ಯಕ್ಷ […]

ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಅಗ್ನಿನಂದಕ ಪ್ರಾತ್ಯಕ್ಷಿಕೆ ಕಾರ್ಯಾಗಾರ.

ಕುಂದಾಪುರ:ಜೆಸಿಐ ಕುಂದಾಪುರ ಸಿಟಿ,ಜ್ಯೂನಿಯರ್ ಸಿಟಿ ವಿಂಗ್ ಆಯೋಜನೆಯಲ್ಲಿ ಅಗ್ನಿಶಾಮಕ ದಳ ಕುಂದಾಪುರ ಠಾಣೆ ಸಹಭಾಗಿತ್ವದಲ್ಲಿ ಅಗ್ನಿನಂದಕ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಹೆಮ್ಮಾಡಿ ಜನತಾ ಕಾಲೇಜಿನ ವಠಾರದಲ್ಲಿ ನಡೆಯಿತು.ಜ್ಯೂನಿಯರ್ ಸಿಟಿ ವಿಂಗ್ ನ ಅಧ್ಯಕ್ಷರಾದ ಜೆಎಪ್ ಡಿ ಕಿರಣ್ ಅಧ್ಯಕ್ಷತೆ ವಹಿಸಿದ್ದರು.ಜ್ಯೂನಿಯರ್ ಜೆಸಿಐ ರಾಷ್ಟ್ರೀಯ ಮಟ್ಟದ ಸಂಯೋಜಕರ ಜೆಎಪ್ ಎಸ್ ರಾಜೇಶ್ ರಾಜನ್,ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ,ಜನತಾ ಪ್ರೌಢಶಾಲೆ ಹೆಮ್ಮಾಡಿಯ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ,ಕುಂದಾಪುರ ಸಿಟಿ ಜೆಸಿಐ ಅಧ್ಯಕ್ಷ […]

You cannot copy content of this page