ಮೊದಲ ಬಾರಿಗೆ ವಿಮಾನ ಏರಲಿರುವ ಕೃಷಿ ಕುಟುಂಬದ ಮಹಿಳೆಯರು:ಎಂಐ ಲೈಫ್ ಸ್ಟೈಲ್ ಕಂಪನಿ ವತಿಯಿಂದ ವಿಮಾನಯಾನ ಭಾಗ್ಯ

ಬೈಂದೂರು:ಶಿಕ್ಷಣವಂತರಾಗಿ ಉದ್ಯೋಗಕ್ಕಾಗಿ ಅಲೆಯುವರನ್ನು ಬಹಳಷ್ಟು ಜನರನ್ನು ನೋಡ ಬಹುದಾಗಿದೆ.ಒಳ್ಳೆ ಕೆಲಸ ಪಡೆದು ಕೈ ತುಂಬಾ ಸಂಬಳ ಗಳಿಸಿ ತಮ್ಮ ಮನದ ಆಸೆಗಳನ್ನು ಪೂರೈಸಿ ಕೊಳ್ಳುವ ಮಹದಾಸೆ ಎಲ್ಲರಿಗೂ ಇದ್ದೇ ಇರುತ್ತದೆ.ದುಬಾರಿ ದುನಿಯಾದಲ್ಲಿ ಕನಸುಗಳನ್ನು ನನಸು ಮಾಡಿಕೊಳ್ಳುವುದು ತುಂಬಾನೇ ಕಷ್ಟ.ಇದಕ್ಕೆ ಅಪವಾದ ಎನ್ನುವಂತೆ ತೀರಾ ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಸಾಮಾನ್ಯ ಶಿಕ್ಷಣ ಪಡೆದು ತಮ್ಮ ಜೀವನದಲ್ಲಿ ಏನಾದರೂ ಸಾಧಿಸಬೇಕು ಎನ್ನುವ ಛಲ ದೊಂದಿಗೆ ಅವಕಾಶವನ್ನು ಬಳಸಿಕೊಂಡು ಎಂಐ ಲೈಫ್ ಸ್ಟೈಲ್ ಎನ್ನುವ ಸಂಸ್ಥೆಯಲ್ಲಿ ಉದ್ಯೋಗಕ್ಕೆ ಇಳಿದ ಶ್ರೀಮತಿ ಪೂಜಾರಿ,ಅಶ್ವಿನಿ […]

ರಜೆ ಘೋಷಣೆ ಸಂದರ್ಭ ಸಮನ್ವಯ ಅಗತ್ಯ:ಶಾಸಕ ಗುರುರಾಜ್ ಗಂಟಿಹೊಳೆ

ಬೈಂದೂರು:ಮಳೆ,ನೆರೆ ಬಂದ ಸಂದರ್ಭದಲ್ಲಿ ಅಧಿಕಾರಿಗಳು ಸಮನ್ವಯ ಸಾಧಿಸಿಕೊಂಡು ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಬೇಕಾಗುತ್ತದೆ. ಇಲ್ಲವಾದರೆ ಗೊಂದಲ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ತಿಳಿಸಿದ್ದಾರೆ.ಬೈಂದೂರು ಮತ್ತು ಕುಂದಾಪುರ ಅವಳಿ ತಾಲೂಕುಗಳಿದ್ದಂತೆ ಇಡೀ ತಾಲೂಕಿಗೆ ರಜೆ ನೀಡುವ ಸಂದರ್ಭದಲ್ಲಿ ಎರಡು ಕಡೆ ಅನ್ವಯಿಸುವಂತೆ ಮಾಡಬೇಕು. ಬೈಂದೂರು ಭಾಗದ ಅನೇಕ ವಿದ್ಯಾರ್ಥಿಗಳು,ಶಿಕ್ಷಕರು ಕುಂದಾಪುರ ಭಾಗಕ್ಕೆ ಹೋಗುತ್ತಾರೆ, ಕುಂದಾಪುರದಿಂದ ಈ ಭಾಗಕ್ಕೆ ಬರುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಆದರೆ ಶಿಕ್ಷಕರು, ಉಪನ್ಯಾಸಕರು ಹೆಚ್ಚಿದ್ದಾರೆ. ಹೀಗಾಗಿ ಬೈಂದೂರಿಗೆ ರಜೆ […]

ಗಂಗೊಳ್ಳಿ:ಮಳೆಗೆ ಮನೆ ಕುಸಿದು ಬಿದ್ದು ಹಾನಿ

ಕುಂದಾಪುರ:ಗುರುವಾರ ಬೀಸಿದ ಭಾರಿ ಗಾಳಿ ಮಳೆಗೆ ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲರ್ ಬೆಟ್ಟು ನಿವಾಸಿ ರೇಖಾ ಖಾರ್ವಿ ಅವರ ಮನೆ ಕುಸಿದು ಬಿದ್ದು ಅಂದಾಜು 10 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದ ಘಟನೆ ನಡಿದಿದೆ.ಗಂಗೊಳ್ಳಿ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

You cannot copy content of this page