ನೇತ್ರಾವತಿ ನದಿ ನೀರಿನ ಮಟ್ಟ ಹೆಚ್ಚಳ

ಮಂಗಳೂರು:ಬಂಟ್ವಾಳದಲ್ಲಿ ನೇತ್ರಾವತಿ ನದಿ ನೀರಿನ ಮಟ್ಟ ಶನಿವಾರ ಬೆಳಗಿನ ಜಾವ ಹೆಚ್ಚಳವಾಗಿದೆ.ಈ ಭಾಗದಲ್ಲಿ ಅಪಾಯದ ಮಟ್ಟ 8.5 ಮೀಟರ್ ಆಗಿದ್ದು,ಸುಮಾರು 8 ಮೀಟರ್ ಎತ್ತರಕ್ಕೆ ಬರುವ ಹೊತ್ತಿಗೆ ನೀರು ಸಮೀಪದ ತಗ್ಗು ಪ್ರದೇಶಗಳಿಗೆ ಹರಿಯಲಾರಂಭಿಸುತ್ತದೆ. ಈಗಾಗಲೇ ಮುಂಜಾಗರೂಕತಾ ಕ್ರಮ ಕೈಗೊಳ್ಳಲಾಗಿದ್ದು, ನದಿ ಸಮೀಪದ ಭಾಗಗಳಲ್ಲಿ ವಾಸಿಸುವವರು ಹಾಗೂ ಪ್ರತಿ ಬಾರಿಯೂ ನೀರಿನ ಮಟ್ಟ ಏರುವ ಸಂದರ್ಭ ತೊಂದರೆಗೊಳಗಾಗುವವರಿಗೆ ಸೂಚನೆಗಳನ್ನು ನೀಡಲಾಗಿದೆ ಎಂದು ಆಡಳಿತ ತಿಳಿಸಿದೆ.

ಅಪಾಯಕಾರಿ ಮರದ ಕಾಲು ಸಂಕ ಪರಿಶೀಲಿಸಿದ ಶಾಸಕ ಗುರುರಾಜ್ ಗಂಟಿಹೊಳೆ

ಬೈಂದೂರು:ಯಳಜಿತ್ ಗ್ರಾಮದ ಸಾತೇರಿಯಲ್ಲಿ ಮರದ ದಿಮ್ಮಿಗಳಿಂದ ನಿರ್ಮಿಸಲಾದ ಅಪಾಯಕಾರಿ ಕಾಲು ಸಂಕದಲ್ಲಿ ಸ್ವತಹ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಸಂಚಾರ ಮಾಡುವುದರ ಮುಖೇನ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಯಾವುದೇ ಕ್ಷಣದಲ್ಲೂ ಅಪಾಯ ತಂದೊಡ್ಡಬಹುದಾದ ಈ ಕಾಲುಸಂಕದ ಬದಲಾಗಿ ಶೀಘ್ರವೇ ಆಧುನಿಕ ಮಾದರಿಯ ಕಾಲು ಸಂಕ ನಿರ್ಮಿಸಿಕೊಡುವ ಭರವಸೆಯನ್ನು ಶಾಸಕರು ನೀಡಿದ್ದಾರೆ.

ಲಾರಿ ಚಾಸಿಸಿ ಬಳಸಿ ವಿನೂತನ ಮಾದರಿಯಲ್ಲಿ ನಿರ್ಮಿಸಿದ ಕಾಲುಸಂಕ:ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ‌ ಉದ್ಘಾಟನೆ

ಕುಂದಾಪುರ:ವಿನೂತನ ತಂತ್ರಜ್ಞಾನ ಬಳಸಿ ಕಾಲುಸಂಕ ನಿರ್ಮಿಸುವ ಮೂಲಕ ಗ್ರಾಮೀಣ ಜನರ ಅನೇಕ ದಶಕಗಳ ಕನಸನ್ನು ನನಸು ಮಾಡಿರುವುದರ ಬಗ್ಗೆ ಹೆಮ್ಮೆಯಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.ಸಮೃದ್ಧ ಬೈಂದೂರು ಪರಿಕಲ್ಪನೆಯಡಿಲ್ಲಿ ಬೆಂಗಳೂರಿನ ಡಾ.ಆರ್. ಅರುಣಾಚಲಮ್ ಚಾರಿಟೇಬಲ್ ಟ್ರಸ್ಟ್ ಸಹಕಾರದೊಂದಿಗೆ ಯಡಮೊಗೆಯ ರಾಂಪಯ್ಯಜಡ್ಡು ಹಾಗೂ ಕುಮ್ಟಿಬೇರು ಸಂಪರ್ಕಿಸುವ ಮತ್ತು ತೊಂಬಟ್ಟುವಿನ ಕಬ್ಬಿನಾಲೆ – ಗುಡ್ಡಿಮನೆ ಸಂಪರ್ಕಿಸುವಲ್ಲಿ ಅತ್ಯಾಧುನಿಕ ಮಾದರಿಯ ಮತ್ತು ಹಳೆಯ ಬಸ್‌,ಲಾರಿಗಳ ಚಾಸಿಸಿ ಬಳಸಿ ನಿರ್ಮಾಣಗೊಂಡ ಕಾಲುಸಂಕ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.ಸರ್ಕಾರಿ ವ್ಯವಸ್ಥೆಯ ಮೂಲಕ […]

You cannot copy content of this page