ಮಳೆ ಅಬ್ಬರ,ಶಾಲೆ ದೇವಳ ಕೃಷಿ ಗದ್ದೆಗಳಿಗೆ ನುಗ್ಗಿದ ನೀರು

ಸಿದ್ದಾಪುರ:ಕಳೆದೆರೆಡು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಗ್ರಾಮೀಣದ ಅಮಾಸೆಬೈಲ್ ಸಿದ್ದಾಪುರ ಹಳ್ಳಿಹೊಳೆ ಆಜ್ರಿ ಶಂಕರನಾರಾಯಣ ಅಂಪಾರು ಹೊಸಂಗಡಿ ಮುಂತಾದ ಕಡೆ ಮಳೆ ಅಬ್ಬರಕ್ಕೆ ಹಲವಾರು ವಿದ್ಯುತ್ ಕಂಬಗಳು ಬೃಹತಾಕಾರಾದ ಮರಗಳು ಧರೆಗುರುಳಿದ್ದು ಜನಸಂಚಾರಕ್ಕೆ ಅಡ್ಡಿಯಾಗಿದ್ದು ಸುತ್ತುವರಿದ ಸಂಚಾರ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ.ಘಾಟ್ ಪ್ರದೇಶದಿಂದ ಬಾರಿ ಮಟ್ಟದಲ್ಲಿ ನೀರು ಹರಿದು ಬರುತ್ತಿದ್ದು ನದಿ ಹಳ್ಳ ತೋಡುಗಳು ತುಂಬಿ ಹರಿದಿದ್ದು ಗದ್ದೆಗಳಿಗೆ ನೀರು ನುಗ್ಗಿ ಜಲಾವೃತವಾಗಿದೆ ಇತ್ತಿಚೆಗೆ ಬಿತ್ತನೆ ಮಾಡಿದ ಭತ್ತ ಕೃಷಿಗಳು ಸಂಪೂರ್ಣ ಮಳೆ ಪಾಲಾಗಿವೆ.ಮನೆ ದೇವಸ್ಥಾನ ತೋಟಗಳಿಗೆ […]

ಮೆಕೋಡು ಶೇಡಕುಳಿ ಕೆರೆ ದಂಡೆ ಕುಸಿದು ಅಡಿಕೆ ತೋಟಕ್ಕೆ ಹಾನಿ

ಕುಂದಾಪುರ:ಭಾರಿ ಮಳೆಗೆ ಬೈಂದೂರು ತಾಲೂಕಿನ ಹೇರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೆಕೋಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನ ಮೇಲ್ಭಾಗದಲ್ಲಿರುವ ಶೇಡಕುಳಿ ಕೆರೆ ದಂಡೆ ಕುಸಿದು ಹೋಗಿದ್ದ ಘಟನೆ ಮಂಗಳವಾರ ನಡೆದಿದೆ.ಕೆರೆ ದಂಡೆ ಕುಸಿದು ಹೋಗಿದ್ದರ ಪರಿಣಾಮ ಕೆರೆ ಕೇಳ ಭಾಗದಲ್ಲಿರುವ ಪ್ರವೀಣ್ ಚಂದ್ರಶೆಟ್ಟಿ ಅವರ ತೋಟಕ್ಕೆ ನೀರಿನೊಂದಿಗೆ ಮಣ್ಣು ನುಗ್ಗಿ ನೂರಾರು ಅಡಿಕೆ ಗಿಡ ಸಹಿತ ಬಾಳೆ ನಾಶವಾಗಿದೆ.ಘಟನೆಯಲ್ಲಿ ಲಕ್ಷಾಂತರ.ರೂ ನಷ್ಟ ಉಂಟಾಗಿದೆ.ಮೆಕೋಡು ದೇವಸ್ಥಾನದ ಅನ್ನ ಛತ್ರದ ಒಳಗೆ ಕೆರೆ ನೀರು ನುಗ್ಗಿದ್ದರಿಂದ ಕೇಸರು ಮಯವಾಗಿದ್ದು ಕಟ್ಟಡದೊಳಗೆ ಇದ್ದ ಅಮೂಲ್ಯವಾದ […]

ಒತ್ತಿನೆಣೆ ಗುಡ್ಡ ಕುಸಿತದ ಭೀತಿ:ಹೆದ್ದಾರಿ ಸಂಪರ್ಕ ಕಡಿತ ಸಾಧ್ಯತೆ

ಕುಂದಾಪುರ:ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಶಿರೂರು ಒತ್ತಿನೆಣೆಯಲ್ಲಿ ಗುಡ್ಡ ಕುಸಿತದ ಭೀತಿ ಎದುರಾಗಿದೆ.ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಯ ವೇಳೆ ಗುಡ್ಡ ಕೊರೆಯಲಾಗಿದ್ದು.ಗುಡ್ಡದ ಮಣ್ಣು ಸಡಿಲಗೊಂಡಿದೆ ಗುಡ್ಡ ಕುಸಿದು ರಾಷ್ಟ್ರೀಯ ಹೆದ್ದಾರಿ ಮೇಲೆ ಬೀಳುವ ಸಂಭವ ಎದುರಾಗಿದ್ದು ಆತಂಕ ಸೃಷ್ಟಿಯಾಗಿದೆ.ಪ್ರತಿವರ್ಷದ ಮಳೆಗಾಲದ ಸಂದರ್ಭದಲ್ಲಿಯೂ ಇಲ್ಲಿ ಗುಡ್ಡ ಕುಸಿಯುವ ಭೀತಿ ಸೃಷ್ಟಿಯಾಗುತ್ತದೆ.ಸದ್ಯ ಒತ್ತಿನೆಣೆಯಲ್ಲಿ ನಿಧಾನವಾಗಿ ಗುಡ್ಡ ಜರಿಯಲು ಶುರುವಾಗಿದ್ದು,ಮಳೆ ಹೀಗೆ ಮುಂದುವರೆದರೆ ಸಂಪೂರ್ಣ ಗುಡ್ಡವೂ ಹೆದ್ದಾರಿ ಮೇಲೆ ಕುಸಿಯುವ ಆತಂಕವಿದೆ. ಒಂದು ವೇಳೆ ಗುಡ್ಡ ಜರಿದರೆ ಉತ್ತರ ಕನ್ನಡ ಉಡುಪಿ […]

You cannot copy content of this page