ರಾಷ್ಟ್ರೀಯ ಮಟ್ಟದ ನಾಟಾ ಪ್ರವೇಶ ಪರೀಕ್ಷೆ:ಹೆಮ್ಮಾಡಿ ಜನತಾ ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ ಜಿಲ್ಲೆಗೆ ಪ್ರಥಮ

ಕುಂದಾಪುರ:ರಾಷ್ಟ್ರೀಯ ಮಟ್ಟದಲ್ಲಿ ನಡೆದ ನಾಟಾ ಪ್ರವೇಶ ಪರೀಕ್ಷೆ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್,ಪರೀಕ್ಷೆ ಬರೆದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ ರಾಜ್ಯಕ್ಕೆ 16ನೇ ಸ್ಥಾನ ಪಡೆದು,ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ.ಕಾಲೇಜಿನ ಇನ್ನೋರ್ವ ವಿದ್ಯಾರ್ಥಿನಿ ವರ್ಣಾ ಆಚಾರ್ ರಾಜ್ಯ ಮಟ್ಟದಲ್ಲಿ 197ನೇ ಸ್ಥಾನವನ್ನು ಗಳಿಸಿದ್ದಾರೆ.ಪಠ್ಯೇತರ ಚಟುವಟಿಕೆಗಳಲ್ಲಿಯೂ ಮುಂಚೂಣಿಯಲ್ಲಿರುವ ವಿದ್ಯಾರ್ಥಿನಿಯರಿಬ್ಬರು ಕಾಲೇಜಿನ ಪ್ರತಿಭಾನ್ವಿತ ವಿದ್ಯಾರ್ಥಿನಿಯರಾಗಿದ್ದಾರೆ.ರಾಜ್ಯದ ಪ್ರತಿಷ್ಠಿತ ಇಂಜಿನಿಯರ್ ಕಾಲೇಜಿನಲ್ಲಿ ಪ್ರವೇಶಾತಿ ಪಡೆಯಲು ಅರ್ಹರಾಗಿರುತ್ತಾರೆ.ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಜನತಾ ಪದವಿ ಪೂರ್ವ ಶಿಕ್ಷಣ ಸಂಸ್ಥೆ […]

ಕೊಲ್ಪೆ: ಕಾರು ಡಿಕ್ಕಿ ಲಾರಿ ಚಾಲಕರಿಬ್ಬರಿಗೆ ಗಂಭೀರ ಗಾಯ

ಮಂಗಳೂರು:ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು- ಮಂಗಳೂರು ನಡುವೆ ನೆಲ್ಯಾಡಿ ಸಮೀಪದ ಕೋಲ್ಪೆಯಲ್ಲಿ ಎಂಬಲ್ಲಿ ಲಾರಿ ನಿಲ್ಲಿಸಿ ಚಹಾ ಕುಡಿದು ಲಾರಿಯ ಕಡೆಗೆ ನಡೆದುಕೊಂಡು ಬರುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿಯಾದ ಪರಿಣಾಮ ಸಕಲೇಶಪುರ ಮೂಲದ ಲಾರಿ ಚಾಲಕರಿಬ್ಬರು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜು.8ರಂದು ಬೆಳಿಗ್ಗೆ ನಡೆದಿದೆ.ಸಕಲೇಶಪುರ ಮೂಲದ ವಿನಯ ಕುಮಾರ್ ಹಾಗೂ ಮಂಜ ಗಾಯಗೊಂಡ ಲಾರಿ ಚಾಲಕರು. ಇವರಿಬ್ಬರು ಕೋಲ್ಪೆಯಲ್ಲಿ ಲಾರಿ ನಿಲ್ಲಿಸಿ ಪಕ್ಕದ ಕ್ಯಾಂಟಿನ್ ವೊಂದರಲ್ಲಿ ಚಹಾ ಕುಡಿದು […]

ಪ್ರವಾಸಿಗರಿಗೆ ಗಂಗೊಳ್ಳಿ ಠಾಣಾಧಿಕಾರಿ ಪಾಠ

ಕುಂದಾಪುರ:ಮಳೆಗಾಲದಲ್ಲಿ ಕಡಲು ಪ್ರಕ್ಷುಬ್ಧಗೊಳ್ಳುವುದರಿಂದ ಕಡಲಿಗೆ ಇಳಿಯದಂತೆ ನಿಷೇಧ ಹೇರಲಾಗಿದ್ದರು ತ್ರಾಸಿ-ಮರವಂತೆ ಬೀಚ್‍ಗೆ ಆಗಮಿಸುತ್ತಿರುವ ಪ್ರವಾಸಿಗರು ನಿಷೇಧದ ನಡುವೆಯೂ ಕಡಲಿಗೆ ಇಳಿದು ಮೋಜು ಮಸ್ತಿಯಲ್ಲಿ ತೊಡಗಿಕೊಳ್ಳುತ್ತಿದ್ದಾರೆ.ಪ್ರವಾಸಿಗರ ಹಿತದೃಷ್ಟಿಯಿಂದ ಗಂಗೊಳ್ಳಿ ಠಾಣೆಯ ಠಾಣಾಧಿಕಾರಿ ಹರೀಶ್.ಆರ್ ನಾಯ್ಕ್ ಅವರು ಕಡಲ ಪ್ರಕ್ಷುಬ್ಧತೆ ಕುರಿತು ಪ್ರವಾಸಿಗರಿಗೆ ತಿಳಿ ಹೇಳುತ್ತಿರುವ ಪಾಠ ಜನ ಮೆಚ್ಚುಗೆಗೆ ಪಾತ್ರವಾಗಿದೆ.ದೈತ್ಯಾಕಾರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿರುವ ದೃಶ್ಯವನ್ನು ತಮ್ಮ ಸೆಲ್ಫಿ ಜತೆಗೆ ಸೇರೆ ಹಿಡಿಯಲು ಕೆಂಪು ಪಟ್ಟಿಯನ್ನು ದಾಟಿ ಬ್ರೆಕ್ ವಾಟರ್ ಮೇಲೆ ಪ್ರವಾಸಿಗರು ತೆರಳುತ್ತಿದ್ದಾರೆ.ಕಲ್ಲಿನ ಮೇಲೆ ಪಾಚಿ ಬೆಳೆದಿದ್ದರಿಂದ […]

You cannot copy content of this page