ಸಂಸದ ಕೋಟ ಶ್ರೀನಿವಾಸ ಪೂಜಾರಿ ತಾಯಿ ನಿಧನ

ಕುಂದಾಪುರ:ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ,ಮಾಜಿಸಚಿವ ಕೋಟ ಶ್ರೀನಿವಾಸಪೂಜಾರಿ ಅವರ ಮಾತೃಶ್ರೀ ಕೋಟತಟ್ಟು ಬಾರಿಕೆರೆ ನಿವಾಸಿ ಲಚ್ಚಿ ಪೂಜಾರಿ (97) ಭಾನುವಾರ ನಿಧನ ಹೊಂದಿದರು.ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.ಅವರು ಉತ್ತಮ ಕೃಷಿಕರಾಗಿದ್ದರು.ಪೂಜಾರಿ ಅವರು ತನ್ನ ರಾಜಕೀಯ ಜೀವನದಲ್ಲಿ ಉನ್ನತ ಸ್ಥಾನವನ್ನು ಅಲಂಕರಿಸುವಪ್ರತಿ ಸಂದರ್ಭ ತಾಯಿ ವಾಸವಿರುವ ಮನೆಗೆ ತೆರಳಿ ಆಶೀರ್ವಾದ ಪಡೆಯುತ್ತಿದ್ದರು.ಚುನಾವಣೆಯಲ್ಲೂ ತಾಯಿಯೊಂದಿಗೆ ಆಗಮಿಸಿ ಮತ ಚಲಾಯಿಸುತ್ತಿದ್ದರು.ಗಣ್ಯರ ಸಂತಾಪ:ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಉಡುಪಿ ಶಾಸಕ ಯಶಪಾಲ್ಸುವರ್ಣ, ಕಾಪು ಶಾಸಕ ಗುರ್ಮೆ […]

ಬೈಂದೂರು ವಲಯದ ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಗಾರ

ಕುಂದಾಪುರ:ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಉಡುಪಿ ಜಿಲ್ಲೆ,ಬೈಂದೂರು ವಲಯದ ವತಿಯಿಂದ ಒಂದು ದಿನದ ಶೈಕ್ಷಣಿಕ ಕಾರ್ಯಗಾರ ಎಂ.ಭಾಸ್ಕರ್ ಪೈ ಸರ್ಕಾರಿ ಪ್ರೌಢಶಾಲೆ ಗುಜ್ಜಾಡಿ ಇಲ್ಲಿ ನಡೆಯಿತು.ಶಾಲಾ ಎಸ್ ಡಿಎಂಸಿ ಅಧ್ಯಕ್ಷ ಸದಾನಂದ ಮೊವಾಡಿ ಅಧ್ಯಕ್ಷತೆ ವಹಿಸಿದ್ದರು.ಸಂಪನ್ಮೂಲ ವ್ಯಕ್ತಿ ಆಜಾದ್ ಅಹ್ಮದ್ ಅವರನ್ನು ಸನ್ಮಾನಿಸಲಾಯಿತು.ಕಂಬದ ಕೋಣೆ ರೈತ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ ಚಂದ್ರ ಶೆಟ್ಟಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾದಿಕಾರಿ ಚಂದ್ರಶೇಖರ್ ಶೆಟ್ಟಿ ,ಎಸ್ ಡಿ ಎಂ ಸಿ ಸದಸ್ಯ ನಾಗರಾಜ್ ಮೋವಾಡಿ,ಜಿಲ್ಲಾ […]

ಕೊಲ್ಲೂರು:ಕೆರೆಗೆ ಕಾಲು ಜಾರಿ ಬಿದ್ದು ಇಬ್ಬರು ಮಕ್ಕಳು ಸಾವು,ತಾಯಿ ರಕ್ಷಣೆ

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ಳಾಲ ಪಂಚಾಯತ್ ನಂದ್ರೋಳ್ಳಿ ಎಂಬಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.ತಾಯಿಯನ್ನು ರಕ್ಷಣೆ ಮಾಡಿದ ಘಟನೆ ಶನಿವಾರ ನಡೆದಿದೆ.ಧನರಾಜ್ ಸತೀಶ್ 13 (ಗಂಡು ಮಗು),ಛಾಯ ಸತೀಶ್ 7 (ಹೆಣ್ಣು ಮಗು) ಮೃತಪಟ್ಟವರು.ತಾಯಿ ಶೀಲಾ ಸತೀಶ್ ಮಡಿವಾಳ (34) ಸ್ಥಿತಿ ಗಂಭೀರವಾಗಿದೆ.

You cannot copy content of this page