ನೆರೆ ಪೀಡಿತ ಪ್ರದೇಶಗಳಿಗೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ,ತುರ್ತು ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ
ಬೈಂದೂರು:ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಕ್ಷೇತ್ರದ ಕೆಲವು ಭಾಗದಲ್ಲಿ ನೆರೆ ಆವರಿಸಿದ್ದ ಹಿನ್ನೆಲೆಯಲ್ಲಿ ಶಾಸಕರಾದ ಗುರುರಾಜ್ ಗಂಟಿಹೊಳೆಯವರು ಬೆಂಗಳೂರಿನಲ್ಲಿ ತಮ್ಮ ಪೂರ್ವ ನಿಯೋಜಿತ ಕಾರ್ಯಕ್ರಮಗಳನ್ನು ಹಠತ್ ರದ್ದುಗೊಳಿಸಿ ನೇರವಾಗಿ ಕ್ಷೇತ್ರಕ್ಕೆ ಆಗಮಿಸಿ,ಶುಕ್ರವಾರ ಬೆಳಗ್ಗೆಯಿಂದ ನೆರೆಪೀಡಿದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಾರ್ವಜನಿಕರು ಸೇರಿದಂತೆ ನೆರೆಹಾನಿಗೆ ಒಳಗಾದವರೊಂದಿಗೆ ಮಾತುಕತೆ ನಡೆಸಿದರು.ನಾವುಂದ ಭಾಗದ ಸಾಲ್ಬುಡ, ನಾಡಾ ಗ್ರಾಮದ ಚಿಕ್ಕಳ್ಳಿ, ಸಂಸಾಡಿ, ಹೆಮ್ಮುಂಜಿ, ಕೊಂಣ್ಕೀ ಪ್ರದೇಶಗಳಲ್ಲಿ ಮಳೆಯಿಂದಾಗಿ ನೆರೆ, ಪ್ರವಾಹ, ಗುಡ್ಡೆ ಕುಸಿತ ಉಂಟಾಗಿದ್ದು ಸ್ಥಳಕ್ಕೆ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು […]



















































































































































































































































































































































































































































































































































































































































































































































































































































































































































































































































































































































































































































































































































































































































































