ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸರಕಾರ ಅನುದಾನ ನೀಡುತ್ತಿಲ್ಲ-ಶಾಸಕ ಗಂಟಿಹೊಳೆ ಆರೋಪ

ಕುಂದಾಪುರ:ಗ್ರಾಮಕ್ಕೆ ಅನುಕೂಲವಾಗುವಂತಹ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ರಾಜ್ಯ ಸರಕಾರ ಯಾವುದೆ ರೀತಿ ಅನುದಾನ ನೀಡುತ್ತಿಲ್ಲ ಹಾಗಾಗಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ತೊಡಕಾಗಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.ಕುಂದಾಪುರ ತಾಲೂಕಿನ ಬೈಂದೂರು ವಿಧಾನಸಭಾ ಕ್ಷೇತ್ರದ ಹಕ್ಲಾಡಿ ಗ್ರಾಮದ ಮಾಸ್ತಿಕಟ್ಟೆ ವೆಂಕಮ್ಮ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಬುಧವಾರ ನಡೆದ ಗ್ರಾಮ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗ್ರಾಮದಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಕೆಲಸ ಕಾರ್ಯಗಳು ಹಾಗೂ ಗ್ರಾಮದ ಅಭಿವೃದ್ಧಿಗೆ ಯಾವ ರೀತಿ ಯೋಜನೆಗಳನ್ನು ಕೈಗೊಳ್ಳಬಹುದು ಎನ್ನುವುದರ ಬಗ್ಗೆ […]

ಬೈಂದೂರು ಯು.ಬಿ ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳ ಪರಿಷತ್ ಚುನಾವಣೆ

ಕುಂದಾಪುರ:ಬೈಂದೂರಿನ ಯು.ಬಿ.ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿವಿದ್ಯಾರ್ಥಿಗಳ ಪರಿಷತ್ತಿಗೆ ಚುನಾವಣೆ ನಡೆಯಿತು.ಜುಲೈ 14,2024 ಶುಕ್ರವಾರದಂದು ಬೈಂದೂರಿನ ಯು.ಬಿ.ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮುಖ್ಯೋಪಾಧ್ಯಾಯಿನಿ ಅಮಿತಾ ಶೆಟ್ಟಿ ಇವರ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪರಿಷತ್ತಿಗೆ ಚುನಾವಣೆ ನಡೆಯಿತು.ಶಾಲಾ ಚಟುವಟಿಕೆಗಳು ಮತ್ತು ಸೇವಾ ಯೋಜನೆಗಳನ್ನು ಆಯೋಜಿಸುವ ಮತ್ತು ನಿರ್ವಹಿಸುವ ಮೂಲಕ ವಿದ್ಯಾರ್ಥಿಗಳಿಗೆ ನಾಯಕತ್ವದ ಗುಣಗಳನ್ನು ಬೆಳೆಸಲು ವೇದಿಕೆಯನ್ನು ಒದಗಿಸುವುದು ವಿದ್ಯಾರ್ಥಿ ಪರಿಷತ್ತಿನ ನೇಮಕದ ಉದ್ದೇಶವಾಗಿದೆ.ಮೊದಲ ಸುತ್ತಿನಲ್ಲಿ ನಾಮಪತ್ರ ಸಲ್ಲಿಸಿದ ವಿದ್ಯಾರ್ಥಿಗಳು ತಾವು ನಿಂತಿರುವ ಸ್ಥಾನಗಳಿಗೆ ಆಯ್ಕೆಯಾಗಲು ಮತಯಾಚನೆ ಮಾಡಿದರು. ಇದರ ಬೆನ್ನಲ್ಲೇ ವಿದ್ಯಾರ್ಥಿಗಳು […]

ಹೊಸಾಡು ಶಾಲೆಯಲ್ಲಿ ಎಲ್‍ಕೆಜಿ,ಯುಕೆಜಿ ತರಗತಿ ಶುಭಾರಂಭ

ಕುಂದಾಪುರ:ಬೈಂದೂರು ವಲಯದ ಹೊಸಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಆರಂಭಗೊಂಡಿರುವ ಎಲ್‍ಕೆಜಿ ಮತ್ತು ಯುಕೆಜಿ ತರಗತಿ ಶುಭಾರಂಭ ಕಾರ್ಯಕ್ರಮ ಅದ್ಧೂರಿಯಾಗಿ ಮಂಗಳವಾರ ನಡೆಯಿತು.ಹೊಸಾಡು ಶಾಲೆ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಡಾ.ಉಮೇಶ್ ಪುತ್ರನ್ ಎಲ್‍ಕೆಜಿ ಮತ್ತು ಯುಕೆಜಿ ತರಗತಿ ಕೋಣೆಯನ್ನು ಉದ್ಘಾಟಿಸಿದರು.ಎಸ್‍ಡಿಎಂಸಿ ಅಧ್ಯಕ್ಷೆ ರೇಖಾಗಣೇಶ ಅಧ್ಯಕ್ಷತೆ ವಹಿಸಿದ್ದರು.ಬೈಂದೂರು ಬಿಒ ನಾಗೇಶ್ ನಾಯ್ಕ್,ನಿವೃತ್ತ ಮುಖ್ಯೋಪಾಧ್ಯಾಯರಾದ ಸದಾಶಿವ ಶೆಟ್ಟಿ,ಜ್ಯೋತಿ ಐತಾಳ್ ಮತ್ತು ತೇಜಪ್ಪ ಶೆಟ್ಟಿ,ನಿವೃತ್ತ ಶಿಕ್ಷಕರಾದ ಭಾಸ್ಕರ ಶೆಟ್ಟಿ,ಭಾಸ್ಕರ ಮಯ್ಯ,ಮಾಜಿ ಗ್ರಾ.ಪಂ ಅಧ್ಯಕ್ಷ ಚಂದ್ರ ಪೂಜಾರಿ ಅರಾಟೆ,ಎಂ.ಎಂ ಸುವರ್ಣ,ನಿವೃತ್ತ […]

You cannot copy content of this page