ತಾಂತ್ರಿಕ ಸಮಸ್ಯೆ:ಮುಳ್ಳಿಕಟ್ಟೆ ಸರ್ಕಲ್ನಲ್ಲಿ ಪೊಲೀಸ್ ಜೀಪ್ ಪಲ್ಟಿ
ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರವಾರ ದಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಕಾರವಾರ ಪೊಲೀಸ್ ಠಾಣೆಗೆ ಸಂಬಂಧಿಸಿದ ಜೀಪ್ನಲ್ಲಿ ಉಂಟಾದ ತಾಂತ್ರಿಕ ಸಮಸ್ಯೆಯಿಂದಾಗಿ ಚಲಿಸುತ್ತಿದ್ದಾಗಲೆ ನಿಯಂತ್ರಣ ಕಳೆದುಕೊಂಡು ಮುಳ್ಳಿಕಟ್ಟೆ ಸರ್ಕಲ್ನಲ್ಲಿ ಸ್ಕಿಡ್ಡ್ ಆಗಿ ಪಲ್ಟಿ ಹೊಡೆದು ರಸ್ತೆ ಮೇಲೆ ಉರುಳಿ ಬಿದ್ದ ಘಟನೆ ಸೋಮವಾರ ನಡೆದಿದೆ.ಅಪಘಾತದಲ್ಲಿ ಪೊಲೀಸ್ ಜಿಪ್ ಡ್ರೈವರ್ ಸೇರಿದಂತೆ ಇಬ್ಬರು ಸಿಬ್ಬಂದಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಬೈಂದೂರು ಸರ್ಕಲ್ ಇನ್ಸ್ಪೆಕ್ಟರ್ ಸವಿತ್ರ ತೇಜ,ಗಂಗೊಳ್ಳಿ ಪೊಲೀಸ್ ಠಾಣೆ ಪಿಎಸ್ಐ ಹರೀಶ್ ಆರ್ ಮತ್ತು ಗುಪ್ತಚರ […]





























































































































































































































































































































































































































































































































































































































































































































































































































































































































































































































































































































































































































































































































































































































































































