ಅಣಬೆ ಕೃಷಿಯಲ್ಲಿ ಯಶಸ್ವಿ ಸಾಧನೆ

ಕುಂದಾಪುರ:ಬದುಕಿನಲ್ಲಿ ಏನಾದರೂ ಸಾಧಿಸಬೇಕು ಎನ್ನುವ ಛಲವನ್ನು ಹೊಂದಿರುವ ಬೈಂದೂರು ತಾಲೂಕಿನ ನಾವುಂದ ಗ್ರಾಮದ ಕುದ್ರುಕೋಡು ನಿವಾಸಿ ಲಂಬೋದರ ಶೆಟ್ಟಿ ಮತ್ತು ರಾಘು ಪೂಜಾರಿ ಅವರು ಅಣಬೆ ಕೃಷಿಯಲ್ಲಿ ಸ್ಫೂರ್ತಿದಾಯಕವಾಗಿ ಹೆಜ್ಜೆಯನ್ನು ಇಡುವುದರ ಮುಖೇನ ಯಶಸ್ವಿಯಾಗಿದ್ದಾರೆ.ಉದ್ಯೋಗಕ್ಕಾಗಿ ದೂರ ದೂರದ ಊರಿಗೆ ತೆರಳದೆ ತಮ್ಮ ಊರಿನಲ್ಲಿ ಇದ್ದು ಕೊಂಡು ಏನಾದರೂ ಸಾಧಿಸಬೇಕು ಎನ್ನುವ ಹಂಬಲವನ್ನು ಹೊಂದಿರುವ ಯುವಕರಿಬ್ಬರು ವಿನೂತನ ಮಾದರಿಯಲ್ಲಿ “ಆರ್ಯ ಮಶ್ರೂಮ್ ಪ್ಲಾಂಟ್” ಅನ್ನು ಮಾಡಿದ್ದಾರೆ,ಇವರ ಫಾರ್ಮ್‍ನಲ್ಲಿ ಉತ್ಕøಷ್ಟ ಗುಣಮಟ್ಟದ ಅಣಬೆಗಳು ದೊರೆಯುತ್ತದೆ.ರಿಯಾತಿ ದರದಲ್ಲಿ ಮಾರಾಟವನ್ನು ಮಾಡಲಾಗುತ್ತಿದ್ದು ಅಣಬೆ […]

ಸ್ವಾತಿ ಸ್ವಸಹಾಯ ಸಂಘಕ್ಕೆ ಸನ್ಮಾನ

ಕುಂದಾಪುರ:25 ವರ್ಷಗಳನ್ನು ಪೂರೈಸಿರುವ,3 ಕೋಟಿಗೂ ಅಧಿಕ ವ್ಯವಹಾರವನ್ನು ನಡೆಸಿಕೊಂಡು ಬಂದಿರುವ ನವೋದಯ ಸ್ವಾತಿ ಸ್ವಸಹಾಯ ಸಂಘ ಮರವಂತೆ ಅದರ ಸದಸ್ಯರನ್ನು ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಧಾನ ಕಛೇರಿ ಮತ್ತು ಮೇಲಂತಸ್ತಿನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಡಾ.ಎಂ ರಾಜೇಂದ್ರ ಕುಮಾರ್ ಅವರು ಸನ್ಮಾನಿಸಿದರು.ಈ ಸಂದರ್ಭದಲ್ಲಿ ಸಂಘದ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಾಜು ಎಸ್ ಪೂಜಾರಿ,ಶಾಸಕ ಗುರುರಾಜ್ ಗಂಟಿಹೊಳೆ,ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ,ಬಿ.ಎಂ ಸುಕುಮಾರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಡಾ.ಎಂ ರಾಜೇಂದ್ರ ಕುಮಾರ್‍ಗೆ ಸಹಕಾರಿ ಸಂವರ್ಧಕ ಪ್ರಶಸ್ತಿ ಪ್ರದಾನ

ಕುಂದಾಪುರ:ದ.ಕ ಜಿಲ್ಲಾ ಸಹಕಾರಿ ಬ್ಯಾಂಕ್ ಮಂಗಳೂರು ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರಿಗೆ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಸಂಘದ ಪ್ರಧಾನ ಕಚೇರಿ ನವೀಕೃತ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಹಕಾರಿ ಸಂವರ್ಧಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.ಸಂಘದ ಅಧ್ಯಕ್ಷ ಎಸ್.ರಾಜು ಪೂಜಾರಿ,ಶಾಸಕ ಗುರುರಾಜ ಗಂಟಿಹೊಳೆ,ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ,ಬಿ.ಎಂ ಸುಕುಮಾರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

You cannot copy content of this page