ಮನೆ ಗೋಡೆ ಮೇಲೆ ಕಂಪೌಂಡ್ ಕುಸಿದು ಬಿದ್ದು,ಒಂದೇ ಕುಟುಂಬದ ನಾಲ್ವರು ದುರ್ಮರಣ

ಮಂಗಳೂರು:ಭಾರಿ ಮಳೆಗೆಕಂಪೌಂಡ್ ಗೋಡೆ ಮನೆ ಗೋಡೆ ಮೇಲೆ ಕುಸಿದು ಬಿದ್ದು ಒಂದೆ ಕುಟುಂಬದ ನಾಲ್ವರು ಮಲಗಿದ್ದಲ್ಲೇ ಸಾವನ್ನಪ್ಪಿದ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಮದನಿನಗರದಲ್ಲಿ ಮಂಗಳವಾರ ನಸುಕಿನ ಜಾವ ಸಂಭವಿಸಿದೆ.ಮನೆಯೊಳಗೆ ವಿಶ್ರಾಂತಿ ಪಡೆದು ಕೊಳ್ಳುತ್ತಿದ್ದ ರಿಹಾನ ಮಂಝಿಲ್ ಯಾಸಿರ್(45), ಮರಿಯಮ್ಮ(40) ಮಕ್ಕಳಾದ ರಿಹಾನ (11)ಮತ್ತು ರಿಫಾನ (17) ಎಂಬುವರು ದುರ್ಘಟನೆಯಲ್ಲಿ ಸಾವನ್ನಪ್ಪಿದ್ದಾರೆ.ಯಾಸೀರ್ ಮಂಗಳೂರಿನ ಬಂದರಿನಲ್ಲಿ ಮಡ್ಡಿ ಆಯಿಲ್ ನಿರ್ವಹಣೆ ಕಾರ್ಯ ನಿರ್ವಹಿಸುತ್ತಿದ್ದರು.ರಾತ್ರಿ ಸಮಯದಲ್ಲಿ ಸುರಿದ ಧಾರಾಕಾರ ಮಳೆಗೆ ಕಂಪೌಂಡ್ ಗೋಡೆ ಹಾಗೂ ಎರಡು ಅಡಕೆ ಮರ […]

ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆ ಗಂಗೊಳ್ಳಿ:ರಕ್ಷಕ ಶಿಕ್ಷಕ-ಸಂಘದ ಸಭೆ,ಇಂಗ್ಲೀಷ್ ಸ್ಪೀಕಿಂಗ್ ಕ್ಲಾಸ್ ಉದ್ಘಾಟನೆ

ಕುಂದಾಪುರ:ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆ ಗಂಗೊಳ್ಳಿಯಲ್ಲಿ ರಕ್ಷಕ- ಶಿಕ್ಷಕ ಸಂಘದ ಮಹಾಸಭೆ ಸೋಮವಾರ ನಡೆಯಿತು.ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ,ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮಿಲ್ಟನ್ ರೋಹಿತ್ ಕ್ರಾಸ್ತಾ ಅವರು ಅನುಭವ ಹಾಗೂ ಹಲವು ನೈಜ ನಿದರ್ಶನಗಳ ಮೂಲಕ ಪರಿಣಾಮಕಾರಿ ಕಲಿಕೆಗೆ ಕುರಿತು ಮಾರ್ಗದರ್ಶನ ನೀಡಿದರು.ಇಂಗ್ಲೀಷ್ ಸ್ಪೀಕಿಂಗ್ ಕ್ಲಾಸ್ ‘ನ್ನು ಉದ್ಘಾಟಿಸಲಾಯಿತು.ರಕ್ಷಕ ಶಿಕ್ಷಕ ಸಂಘದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಗೌರಿ ಖಾರ್ವಿ, ಸದಸ್ಯರಾಗಿ ಭಾಸ್ಕರ ಖಾರ್ವಿ, ಸುರೇಶ ಖಾರ್ವಿ,ಪ್ರಮಿತ, ರೇಣುಕಾ,ಮರಿಯಾ ಡಿ ಅಲ್ಮೇಡಾ,ಪುಷ್ಪಲತಾ ಆಚಾರ್ಯ,ಶ್ರುತಿ ಖಾರ್ವಿ ಆಯ್ಕೆಯಾದರು.ಜಂಟಿ ಕಾರ್ಯದರ್ಶಿಭ. […]

ಬಿಜಾಡಿ ಸಮುದ್ರ ತೀರದಲ್ಲಿ ಕೊಚ್ಚಿ ಹೋಗಿದ್ದ ಯೋಗೀಶ್ ಮೃತ ದೇಹ ಕಾರವಾರದಲ್ಲಿ ಪತ್ತೆ

ಕುಂದಾಪುರ:ತುಮಕೂರು ಜಿಲ್ಲೆಯ ತಿಪಟೂರು ನಿವಾಸಿ ಯೋಗೀಶ್ ( 22) ಎಂಬಾತ ಯುವಕ ಜೂ.19 ರಂದು ಕುಂದಾಪುರ ತಾಲೂಕಿನ ಬಿಜಾಡಿ ಸಮುದ್ರ ತೀರದಲ್ಲಿ ತನ್ನ ಸ್ನೇಹಿತನೊಂದಿಗೆ ವಿಹಾರ ನಡೆಸುತ್ತಿದ್ದ ಸಮಯದಲ್ಲಿ ಕಡಲ ಅಲೆಗಳ ಅಬ್ಬರಕ್ಕೆ ಕೊಚ್ಚಿ ಹೋಗಿ ಸಮುದ್ರದಲ್ಲಿ ನಾಪತ್ತೆಯಾಗಿದ್ದರು.ಯೋಗೀಶ್ ಮೃತ ದೇಹ ಜೂನ್.25 ರ ಮಂಗಳವಾರ ಕಾರವಾರ ಕಡಲ ತೀರದಲ್ಲಿ ಪತ್ತೆಯಾಗಿದೆ.ಮಳೆ ಮತ್ತು ಗಾಳಿ ಅಬ್ಬರದಿಂದ ಬಿಜಾಡಿ ಸಮುದ್ರ ಕಿನಾರೆಯಿಂದ ಯೋಗೀಶ್ ಮೃತ ಶರೀರ ಕಾರವಾರದತ್ತ ತೇಲಿಕೊಂಡು ಹೋಗಿದೆ ಎಂದು ಮುಳುಗು ತಜ್ಞ ದಿನೇಶ್ ಖಾರ್ವಿ ಮತ್ತು […]

You cannot copy content of this page