ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ಸಕ್ಕರೆ ತುಂಬಿದ ಲಾರಿ ಪಲ್ಟಿ

ಕುಂದಾಪುರ:ರಾಷ್ರೀಯ ಹೆದ್ದಾರಿ 66 ರಲ್ಲಿ ಕುಂದಾಪುರ ಕಡೆಯಿಂದ ಬಂಟ್ವಾಡಿ ಕಡೆಗೆ ಸಾಗುತ್ತಿದ್ದ ಟ್ರಕ್ ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ಯೂರ್ಟನ್ ತೆಗೆದು ಕೊಳ್ಳುತ್ತಿದ್ದ ಸಮಯದಲ್ಲಿ ತ್ರಾಸಿ ಕಡೆಯಿಂದ ಕುಂದಾಪುರ ಕಡೆಗೆ ವೇಗವಾಗಿ ಸಾಗುತ್ತಿದ್ದ ಸಕ್ಕರೆ ತುಂಬಿದ ಲಾರಿ ಟ್ರಕ್‍ನ ಹಿಂಭಾಗಕ್ಕೆ ಡಿಕ್ಕಿ ಹೊಡೆದು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ರಸ್ತೆ ಮೇಲೆ ಉರುಳಿ ಬಿದ್ದಿದ ಘಟನೆ ಶುಕ್ರವಾರ ನಡೆದಿದೆ.ಅಪಘಾತದಲ್ಲಿ ಲಾರಿ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.ಸಕ್ಕರೆ ಚೀಲ ರಸ್ತೆ ತುಂಬೆಲ್ಲಾ ಉರುಳಿ ಬಿದ್ದಿದ್ದು.ಧಾರಾಕಾರವಾಗಿ ಮಳೆ ಸುರಿಯುತ್ತಿದ್ದ ಪರಿಣಾಮ ಸಕ್ಕರೆ ಚೀಲಕ್ಕೆ ಮಳೆ ನೀರು […]

ನೆರೆ ಪೀಡಿತ ಪ್ರದೇಶದ ಜನರಿಗೆ ಸಮೃದ್ಧ ಜನಸೇವಾ ಟ್ರಸ್ಟ್ ನಿಂದ ಊಟ ವಿತರಣೆ

ಬೈಂದೂರು:ನಿರಂತರ ಸುರಿದ ಮಳೆಯಿಂದಾಗಿ ನಾವುಂದ ಬಡಾಕೆರೆ ಸಾಲ್ಬುಡ ಪ್ರದೇಶ ಸಂಪೂರ್ಣ ಜಲಾವೃತಗೊಂಡಿದ್ದು, ಸುಮಾರು 80ಕ್ಕೂ ಅಧಿಕ ಮನೆಗಳಿಗೆ ಜಲದಿಗ್ಬಂದನಕ್ಕೆ ಒಳಗಾಗಿದ್ದವು.ಜನರ ಕಷ್ಟವನ್ನು ಅರಿತ ಸಮೃದ್ಧ ಜನಾ ಸೇವಾ ಟ್ರಸ್ಟ್ ಬೈಂದೂರು ವತಿಯಿಂದ ಊಟದ ಪ್ಯಾಕೆಟ್ ಮತ್ತು ನೀರಿನ ಬಾಟಲಿಗಳನ್ನು ದೋಣಿಯಲ್ಲಿ ತೆರಳಿ ವಿತರಿಸಲಾಯಿತು.ಟ್ರಸ್ಟ್ ನ ಐವತ್ತಕ್ಕೂ ಹೆಚ್ಚಿನ ಸದಸ್ಯರು ಸ್ವಯಂ ಸೇವಾ ಕಾರ್ಯದಲ್ಲಿ ತೊಡಗಿ ಕೊಂಡಿದ್ದರು.ತುರ್ತು ಕಾರ್ಯದ ನಿಮಿತ್ತ ಬೆಂಗಳೂರು ಪ್ರವಾಸದಲ್ಲಿದ್ದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ನೆರೆ ಭೀತಿಯ ವಿಷಯ ತಿಳಿಯುತ್ತಿದ್ದಂತೆ ಅಧಿಕಾರಿಗಳಿಗೆ ದೂರವಾಣಿ ಕರೆಮಾಡಿ […]

ಕ್ಲೋರೋಫಾರ್ಮ್ ಬಳಸಿ ಹಗಲುದರೊಡೆಗೆ ಯತ್ನ, ಮೂವರು ಆರೋಪಿಗಳು ಪರಾರಿ

ಮಂಗಳೂರು:ಬಜಪೆ ಮಾರುಕಟ್ಟೆ ಸಮೀಪದ ಖಾಸಗಿ ಫೈನಾನ್ಸೊಂದಕ್ಕೆ ಮೂವರು ಅಪರಿಚಿತ ವ್ಯಕ್ತಿಗಳು ಗುರುವಾರ ದಿಢೀರ್ ನುಗ್ಗಿ ಕ್ಲೋರೋಫಾರ್ಮ್ ಬಳಸಿ ದರೋಡೆಗೆ ಯತ್ನಿಸಿ ಪರಾರಿಯಾಗಿರುವ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸಂಜೆ ಸುಮಾರು 4:30ರ ವೇಳೆಗೆ ಆಕ್ಟೀವ(ಸ್ಕೂಟಿ)ದಲ್ಲಿ ಬಜಪೆಯ ಮಸೀದಿ ಕಡೆಯಿಂದ ಆಗಮಿಸಿ ಹೂವಿನ ಮಾರುಕಟ್ಟೆ ಬಳಿಗೆ ಹೋಗಿ ವಾಪಾಸು ಬಂದು ಮಾರುಕಟ್ಟೆ ಸಮೀಪದ ಖಾಸಗಿ ಫೈನಾನ್ಸ್ ನ ಒಳಗೆ ಏಕಾಏಕಿ ನುಗ್ಗಿ ಚಿಕ್ಕ ಆಸಿಡ್ ತುಂಬಿದ ಡಬ್ಬವೊಂದರ ಮುಚ್ಚಳ ತೆಗೆದು ಟೇಬಲ್ ಮೇಲಿಟ್ಟು ಕ್ಯಾಶ್ ಗೆ ಬಲಾತ್ಕಾರವಾಗಿ […]

You cannot copy content of this page