ಕೆಸರಿನಲ್ಲೊಂದು ದಿನ ಸಾಂಪ್ರದಾಯಿಕ ಕ್ರೀಡಾ ಹಬ್ಬ

ಕುಂದಾಪುರ:ಟೀಮ್ ತ್ರಾಸಿ ವತಿಯಿಂದ ಕೆಸರಿನಲ್ಲೊಂದು ದಿನ ಸಾಂಪ್ರದಾಯಿಕ ಕ್ರೀಡಾ ಹಬ್ಬ ಕಾರ್ಯಕ್ರಮ ಇಪ್ಪಿಬೈಲು ಬೊಬ್ಬರ್ಯ ದೇವಸ್ಥಾನ ವಠಾರದ ಗದ್ದೆ ಬೈಲಿನಲ್ಲಿ ಭಾನುವಾರ ನಡೆಯಿತು.ಕೆಸರಿನಲ್ಲೊಂದು ದಿನ ಕ್ರೀಡಾ ಹಬ್ಬದ ಅಂಗವಾಗಿ ಪುರುಷರಿಗೆ,ಮಹಿಳೆಯರಿಗೆ,ಮಕ್ಕಳಿಗೆ ವೈವಿಧ್ಯಮಯವಾದ ಕ್ರೀಡೆಗಳನ್ನು ಆಯೋಜಿಸಲಾಯಿತು.ಟೀಮ್ ತ್ರಾಸಿ ಬಳಗದ ಸದಸ್ಯರು,ಗ್ರಾಮಸ್ಥರು ಉಪಸ್ಥಿತರಿದ್ದರು.

ಹೊಸಾಡು ಶಾಲೆಗೆ ಅಕ್ಷರ ರಥ ಕೊಡುಗೆ

ಕುಂದಾಪುರ:ತಾಲೂಕಿನ ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಹೊಸಾಡು ಶಾಲೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೊಸಾಡು ಶಾಲೆ ಶತಮಾನೋತ್ಸವ ಸಮಿತಿ ವತಿಯಿಂದ ಅಕ್ಷರ ರಥವನ್ನು ಶಾಲಾ ಎಸ್‍ಡಿಎಂಸಿ ಸಮಿತಿಗೆ ಭಾನುವಾರ ಹಸ್ತಾಂತರ ಮಾಡಲಾಯಿತು.ಹೊಸಾಡು ಶಾಲೆ ಶತಮಾನೋತ್ಸವ ಸಮಿತಿ ಅಧ್ಯಕ್ಷ ಡಾ.ಉಮೇಶ್ ಪುತ್ರನ್,ಎಸ್‍ಡಿಎಂಸಿ ಅಧ್ಯಕ್ಷೆ ರೇಖಾ ಗಣೇಶ್,ನಿವೃತ್ತ ಮುಖ್ಯೋಪಾಧ್ಯಾಯರಾದ ಸದಾಶಿವ ಶೆಟ್ಟಿ ಮತ್ತು ತೇಜಪ್ಪ ಶೆಟ್ಟಿ,ರಾಜೀವ ಶೆಟ್ಟಿ,ಡಾ.ಕಿಶೋರ್ ಕುಮಾರ್ ಶೆಟ್ಟಿ,ಎಸ್‍ಡಿಎಂಸಿ ಸದಸ್ಯರು,ಅಡುಗೆ ಸಿಬ್ಬಂದಿಗಳು ಉಪಸ್ಥಿತರಿದ್ದರು.ಮುಖ್ಯ ಶಿಕ್ಷಕ ರಾಜೇಶ್ ಸ್ವಾಗತಿಸಿ,ವಂದಿಸಿದರು.ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಶಾಲಾ ವಾಹನ ಧಾವಿಸಿ ಬರುವುದರಿಂದ ಗ್ರಾಮೀಣ ಪ್ರದೇಶದ […]

ಜನತಾ ಸಮೂಹ ವಿದ್ಯಾ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ

ಕುಂದಾಪುರ:ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಹಾಗೂ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರ ಸಮೂಹ ವಿದ್ಯಾ ಸಂಸ್ಥೆಗಳಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಹಾಗೂ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲಾ ಯೋಗ ಶಿಕ್ಷಕಿ ಕು|ಅನ್ವಿತಾ ಯೋಗ ಪ್ರಾತ್ಯಕ್ಷಿಕೆಯನ್ನು ನಡೆಸಿದರು.ಜನತಾ ಪದವಿಪೂರ್ವ ಕಾಲೇಜಿನ ಅಂತರರಾಷ್ಟ್ರೀಯ ಮಟ್ಟದ ಯೋಗ ಪ್ರತಿಭೆಗಳಾದ ಕು|ಧನ್ವಿ ಮರವಂತೆ,ಕು|ತನ್ವಿತಾ,ಕು|ನಿರೀಕ್ಷಾ ಅವರಿಂದ ಹಾಗೂ ಶಾಲಾ ಆಯ್ದ ವಿದ್ಯಾರ್ಥಿಗಳಿಂದ ಯೋಗ ಪ್ರಾತ್ಯಕ್ಷಿಕೆ ನಡೆಯಿತು.ಕಾರ್ಯಕ್ರಮದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲಾ ಮುಖ್ಯ […]

You cannot copy content of this page