ಡಾ.ಎಂ ರಾಜೇಂದ್ರ ಕುಮಾರ್‍ಗೆ ಸಹಕಾರಿ ಸಂವರ್ಧಕ ಪ್ರಶಸ್ತಿ ಪ್ರದಾನ

ಕುಂದಾಪುರ:ದ.ಕ ಜಿಲ್ಲಾ ಸಹಕಾರಿ ಬ್ಯಾಂಕ್ ಮಂಗಳೂರು ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರಿಗೆ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಸಂಘದ ಪ್ರಧಾನ ಕಚೇರಿ ನವೀಕೃತ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಹಕಾರಿ ಸಂವರ್ಧಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.ಸಂಘದ ಅಧ್ಯಕ್ಷ ಎಸ್.ರಾಜು ಪೂಜಾರಿ,ಶಾಸಕ ಗುರುರಾಜ ಗಂಟಿಹೊಳೆ,ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ,ಬಿ.ಎಂ ಸುಕುಮಾರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಪ್ರಧಾನ ಕಛೇರಿ ನವೀಕೃತ ಮೇಲಂತಸ್ತಿನ ಕಟ್ಟಡ ಉದ್ಘಾಟನೆ

ಕುಂದಾಪುರ:ಬೈಂದೂರು ತಾಲೂಕಿನ ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಪ್ರಧಾನ ಕಛೇರಿ ಮತ್ತು ಮೇಲಂತಸ್ತಿನ ನವೀಕೃತ ಕಟ್ಟಡದ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ನಾವುಂದಲ್ಲಿ ಶನಿವಾರ ಅದ್ದೂರಿಯಾಗಿ ನಡೆಯಿತು.ಸಂಘದ ನವೀಕೃತ ಪ್ರಧಾನ ಕಛೇರಿ ಮತ್ತು ಮೇಲಂತಸ್ತಿನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಅಂಗವಾಗಿ ಸಂಗೀತ ರಸಮಂಜರಿ ಕಾರ್ಯಕ್ರಮ ಹಾಗೂ ಯಕ್ಷ ರಾಘವ ಜನ್ಸಾಲೆ ಪ್ರತಿಷ್ಠಾ ಮತ್ತು ಅತಿಥಿ ಕಲಾವಿದರ ಕೂಡುವಿಕೆಯಿಂದ ದಿ.ಕಾಳಿಂಗ ನಾವುಡ ವಿರಚಿತ ನಾಗಶ್ರೀ ಯಕ್ಷಗಾನ ಕಾರ್ಯಕ್ರಮ ಜರುಗಿತು.ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಅಧ್ಯಕ್ಷರಾದ,ಕರ್ನಾಟಕ […]

ತೆಂಗಿನ ತೋಟಕ್ಕೆ ವಿಶೇಷ ರೋಗ ಭಾಧೆ,ಜಿಲ್ಲಾ ರೈತ ಸಂಘ ಭೇಟಿ

ಕುಂದಾಪುರ:ವಿಶೇಷ ರೋಗ ಭಾಧೆಗೆ ತುತ್ತಾಗಿರುವ ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮದ ಕನ್ನಡ ಕುದ್ರು ಮತ್ತು ಮುವತ್ತು ಮುಡಿ ಭಾಗದ ತೆಂಗಿನ ತೋಟಕ್ಕೆ ಉಡುಪಿ ಜಿಲ್ಲಾ ರೈತ ಸಂಘದ ಮುಖಂಡರುಗಳು ಗುರುವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ವಿಜ್ಞಾನಿಗಳು ಮತ್ತು ರೈತರೊಂದಿಗೆ ಮಾತುಕತೆ ನಡೆಸಿದರು.ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಪ್ರತಾಪ ಶೆಟ್ಟಿ,ತ್ರಾಸಿ ವಲಯ ರೈತ ಸಂಘದ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ ಬಾಳಿಕೆರೆ,ಕಂಬದಕೋಣೆ ರೈತ ಸಂಘದ ಅಧ್ಯಕ್ಷ ಪ್ರತಾಪಶ್ಚಂದ್ರ ಶೆಟ್ಟಿ,ಕಿಶನ್ ಹೆಗ್ಡೆ ಮೊಳಹಳ್ಳಿ,ವಡಂಬಳ್ಳಿ ಜಯರಾಮ ಶೆಟ್ಟಿ,ವಂಡ್ಸೆ […]

You cannot copy content of this page