ಬಿಜಾಡಿ ಸಮುದ್ರ ತೀರದಲ್ಲಿ ಕೊಚ್ಚಿ ಹೋಗಿದ್ದ ಯೋಗೀಶ್ ಮೃತ ದೇಹ ಕಾರವಾರದಲ್ಲಿ ಪತ್ತೆ

ಕುಂದಾಪುರ:ತುಮಕೂರು ಜಿಲ್ಲೆಯ ತಿಪಟೂರು ನಿವಾಸಿ ಯೋಗೀಶ್ ( 22) ಎಂಬಾತ ಯುವಕ ಜೂ.19 ರಂದು ಕುಂದಾಪುರ ತಾಲೂಕಿನ ಬಿಜಾಡಿ ಸಮುದ್ರ ತೀರದಲ್ಲಿ ತನ್ನ ಸ್ನೇಹಿತನೊಂದಿಗೆ ವಿಹಾರ ನಡೆಸುತ್ತಿದ್ದ ಸಮಯದಲ್ಲಿ ಕಡಲ ಅಲೆಗಳ ಅಬ್ಬರಕ್ಕೆ ಕೊಚ್ಚಿ ಹೋಗಿ ಸಮುದ್ರದಲ್ಲಿ ನಾಪತ್ತೆಯಾಗಿದ್ದರು.ಯೋಗೀಶ್ ಮೃತ ದೇಹ ಜೂನ್.25 ರ ಮಂಗಳವಾರ ಕಾರವಾರ ಕಡಲ ತೀರದಲ್ಲಿ ಪತ್ತೆಯಾಗಿದೆ.ಮಳೆ ಮತ್ತು ಗಾಳಿ ಅಬ್ಬರದಿಂದ ಬಿಜಾಡಿ ಸಮುದ್ರ ಕಿನಾರೆಯಿಂದ ಯೋಗೀಶ್ ಮೃತ ಶರೀರ ಕಾರವಾರದತ್ತ ತೇಲಿಕೊಂಡು ಹೋಗಿದೆ ಎಂದು ಮುಳುಗು ತಜ್ಞ ದಿನೇಶ್ ಖಾರ್ವಿ ಮತ್ತು […]

ಆಲೂರು – ನೂಜಾಡಿಗೆ ಸರಕಾರಿ ಬಸ್ ಕಲ್ಪಿಸುವಂತೆ ಆಗ್ರಹ

ಕುಂದಾಪುರ:ಸ್ತ್ರೀ ಸಾಮಾನ್ಯರು ಕೂಲಿ ಕಾರ್ಮಿಕರು ವಿದ್ಯಾರ್ಥಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ದಿನಂಪ್ರತಿ ದೂರದ ಕುಂದಾಪುರ ಪೇಟೆಗೆ ತೆರಳುತ್ತಾರೆ.ಜನ ಸಂಖ್ಯೆಗೆ ಅನುಗುಣವಾಗಿ ಆಲೂರು-ಗುಡ್ಡೆಯಂಗಡಿ ಮಾರ್ಗದಲ್ಲಿ ಬಸ್‍ಗಳು ಓಡಾಟ ಮಾಡದೆ ಇದ್ದಿದ್ದರಿಂದ ಹಳ್ಳಿ ಭಾಗದ ಜನರಿಗೆ ಬಹಳಷ್ಟು ತೊಂದರೆ ಆಗುತ್ತಿದೆ.ವಿದ್ಯಾರ್ಥಿಗಳಿಗೆ ಹಾಗೂ ಜನ ಸಾಮಾನ್ಯರಿಗೆ ಆಗುತ್ತಿರುವ ಸಂಕಷ್ಟವನ್ನು ತಪ್ಪಿಸಲು ಆಲೂರು ಗುಡ್ಡೆಯಂಗಡಿ ಭಾಗಕ್ಕೆ ಸರಕಾರಿ ಬಸ್ ಓಡಿಸಲು ಕೂಡಲೆ ಕ್ರಮ ಕೈಗೊಳ್ಳಬೇಕೆಂದು ರಾಜು ಪಡುಕೋಣೆ ಆಗ್ರಹಿಸಿದರು.ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘ ಆಲೂರು,ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘ ಆಲೂರು,ಕರ್ನಾಟಕ […]

ಕ್ಷೇತ್ರದ ಮತದಾರರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಂಸದ- ಬಿ.ವೈ. ರಾಘವೇಂದ್ರ

ಕುಂದಾಪುರ:ನಾಲ್ಕನೇ ಬಾರಿಗೆ ಸಂಸತ್ ಭವನ ಪ್ರವೇಶಿಸಿದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಅವರು ಕ್ಷೇತ್ರದ ಮತದಾರ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡುವುದರ ಮುಖೇನ ತನ್ನ ಗೆಲುವಿಗೆ ಕಾರಣಿಕರ್ತರಾದ ಕ್ಷೇತ್ರದ ಮತದಾರ ಬಂಧುಗಳಿಗೆ ವಿಭಿನ್ನ ರೀತಿಯಲ್ಲಿ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸತತ ನಾಲ್ಕನೇ ಬಾರಿಗೆ ತಮ್ಮ ಅತ್ಯಮೂಲ್ಯ ಮತಗಳನ್ನು ನೀಡಿ ಅಭೂತಪೂರ್ವ ದಿಗ್ವಿಜಯದ ಅಂಗಳಕ್ಕೆ ತಂದು ನಿಲ್ಲಿಸಿ ನನ್ನ ಮೇಲಿನ ಮಹತ್ತರ ಜವಾಬ್ದಾರಿಯನ್ನು ಹಾಗೂ ನೀವು ಇಟ್ಟಿರುವ ಅಪಾರ ನಂಬಿಕೆಯನ್ನು ಹಿಮ್ಮುಡಿಗೊಳಿಸಿದ್ದೀರಿ.ಜನರಿಂದ […]

You cannot copy content of this page