ಲಯನ್ಸ್ ಪ್ರಾಂತೀಯ ಸಮ್ಮೇಳನ,ಕನಕ 2025 ಕಾರ್ಯಕ್ರಮ ಉದ್ಘಾಟನೆ

ಕುಂದಾಪುರ:ಕಳೆದ ಹತ್ತೊಂಭತ್ತು ವರ್ಷಗಳಿಂದ ಅಂತರಾಷ್ಟ್ರೀಯ ಲಯನ್ಸ್ ಕ್ಲಬ್ ಮೂಲಕ ಮುಂಬೈ ಸೇರಿದಂತೆ ಉಡುಪಿ ಜಿಲ್ಲೆಯ ಭಾಗದಲ್ಲಿ ಸಾಮಾಜಿಕ ಕಾರ್ಯಗಳನ್ನು ಮಾಡಿಕೊಂಡು ಬರಲಾಗುತ್ತಿದ್ದು.ಅಶಕ್ತರ ಬಾಳಿಗೆ ನೆರವನ್ನು ಒದಗಿಸಿಕೊಡುವುದರ ಜತೆಗೆ ಸೇವಾ ಕಾರ್ಯಗಳನ್ನು ಮಾಡುತ್ತಾ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತನ್ನು ನೀಡಲಾಗುತ್ತಿದೆ ಎಂದು ಉದ್ಯಮಿಗಳಾದ ಲಯನ್ ಪ್ರಾಂತೀಯ ಅಧ್ಯಕ್ಷ ಎಂಜೆಎಫ್ ಕನಕ ಜಗದೀಶ ಶೆಟ್ಟಿ ಕುದ್ರಕೋಡು ಹೇಳಿದರು.ಲಯನ್ಸ್ ಇಂಟರ್ ನ್ಯಾಷನಲ್ ಪ್ರಾಂತ್ಯ 4 ಜಿಲ್ಲೆ 317ಸಿ ವತಿಯಿಂದ ಜ್ಯುವೆಲ್ ಪಾರ್ಕ್ ಹೆಮ್ಮಾಡಿಯಲ್ಲಿ ಶನಿವಾರ ನಡೆದ ಲಯನ್ಸ್ ಪ್ರಾಂತೀಯ ಸಮ್ಮೇಳನ ಕನಕ-2025 […]

ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು 30ನೇ ವಾರ್ಷಿಕ ಅಧಿವೇಶನ ಉದ್ಘಾಟನೆ

ಬೈಂದೂರು:ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ಉಪ್ಪುಂದ ವಲಯದ ವತಿಯಿಂದ 30ನೇ ವಾರ್ಷಿಕ ಅಧಿವೇಶನ,ಪ್ರತಿಭಾ ಪುರಸ್ಕಾರ,ಸನ್ಮಾನ ಹಾಗೂ ಅಭಿನಂದನೆ ಕಾರ್ಯಕ್ರಮ ಕಿರಿಮಂಜೇಶ್ವರ ಗುರುನರಸಿಂಹ ಸಭಾಭವನದಲ್ಲಿ ಭಾನುವಾರ ನಡೆಯಿತು.ಗಣಹೋಮ ಜರುಗಿತು.ವಾರ್ಷಿಕ ಅಧಿವೇಶನದ ಅಂಗವಾಗಿ ಪ್ರತಿಭಾನ್ವಿತ ವಿದ್ಯಾರ್ಥಿಗಳಾದ ಪೂಜಾ ಕಾರಂತ,ಐಶ್ವರ್ಯ ವೈದ್ಯ,ಕವನಾ ನಾವಡ,ಪ್ರಮಥ ಶ್ಯಾನುಭೋಗ್,ಪ್ರಣವ್ ಅಡಿಗ ಅವರಿಗೆ ಪ್ರತಿಭಾ ಪುರಸ್ಕಾರ ವಿತರಣೆ ಮಾಡಲಾಯಿತು ಹಾಗೂ ಸಾಧಕರಾದ ಮಂಜುನಾಥ ಮಯ್ಯ,ಗಾಯತ್ರಿ ಭಟ್ ಮೊಗೇರಿ,ವಿದ್ಯಾಶ್ರೀ ಮಯ್ಯ,ಗುರುರಾಜ್ ಹೆಬ್ಬಾರ್ ಅವರನ್ನು ಸನ್ಮಾನಿಸಲಾಯಿತು.ವಲಯದ ವಿಪ್ರರಿಂದ ಸಾಂಸ್ಕøತಿಕ ಕಾರ್ಯಕ್ರಮ ಜರುಗಿತು.ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.ದ್ರಾವಿಡ ಬ್ರಾಹ್ಮಣ ಪರಿಷತ್ತು […]

ತ್ರಾಸಿ:ಬೆಂಕಿ ತಗುಲಿ ಕಾರು ಭಸ್ಮ

ಕುಂದಾಪುರ:ತಾಲೂಕಿನ ತ್ರಾಸಿ ಸರ್ಕಲ್ ಬಳಿ ಪೆಟ್ರೋಲ್ ಬಂಕ್ ಎದುರುಗಡೆ ಆಕಸ್ಮಿಕವಾಗಿ ತಗುಲಿದ ಬೆಂಕಿ ಕೆನ್ನಾಲಿಗೆಗೆ ವಿನಾಯಕ ಗ್ಯಾರೇಜ್ ಬಳಿ ನಿಲ್ಲಿಸಿದ ಹಳೆ ಕಾರೊಂದು ಸುಟ್ಟು ಕರಕಲಾಗಿದ್ದ ಘಟನೆ ಭಾನುವಾರ ನಡೆದಿದೆ.ಬೈಂದೂರು ಅಗ್ನಿ ಶಾಮಕದಳದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದರು.ಪೆಟ್ರೋಲ್ ಬಂಕ್ ಸಿಬ್ಬಂದಿಗಳು ಬಂಕಿನಲ್ಲಿರುವ ಬೆಂಕಿ ನಿರೋಧಕ ಉಪಕರಣದ ಮೂಲಕ ಬೆಂಕಿಯನ್ನು ತಹಬದಿಗೆ ತರಲು ಪ್ರಾಥಮಿಕ ಹಂತದಲ್ಲಿ ಪ್ರಯತ್ನಿಸಿದ್ದರು.

You cannot copy content of this page