ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಫ್ಯಾಶನ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳಿಂದ ಕೈಮಗ್ಗ ಘಟಕಕ್ಕೆ ಕೈಗಾರಿಕಾ ಭೇಟಿ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿನ ಫ್ಯಾಶನ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳು ಕೈಮಗ್ಗ ತಯಾರಿಕಾ ಘಟಕಕ್ಕೆ ಭೇಟಿ ನೀಡಿದರು.ಉಡುಪಿ ಬ್ರಹ್ಮಗಿರಿ ಇಲ್ಲಿನ ತಾಳಿಪಾಡಿ ನೇಕಾರರ ಸಂಘ ಮತ್ತು ನೇಯ್ಗೆ ಘಟಕಕ್ಕೆ ಭೇಟಿ ನೀಡಿದ ವಿದ್ಯಾರ್ಥಿಗಳು ಹಳೆಯ ಸಾಂಪ್ರದಾಯಿಕ ನೇಯ್ಗೆ ತಯಾರಿಕಾ ವಿಧಾನವನ್ನು ವೀಕ್ಷಿಸಿ,ಮಾಹಿತಿಯನ್ನು ಪಡೆದು ಕೊಂಡರು. ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಚರ್ಚಿಸಿದರು.ವಿಭಾಗ ಮುಖ್ಯಸ್ಥೆ ಉಪನ್ಯಾಸಕಿ ಅಶ್ವಿನಿ ಮತ್ತು ಸ್ವಾತಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪರೀಕ್ಷೆಯಲ್ಲಿ ಅಂಕ ನೀಡುವಂತೆ ದೈವದ ಮೊರೆ ಹೋದ ವಿದ್ಯಾರ್ಥಿ

ಕುಂದಾಪುರ:ಪರೀಕ್ಷೆಯಲ್ಲಿ ತಾನು ಅಂದು ಕೊಂಡಷ್ಟು ಮಾಕ್ರ್ಸ್ ನೀಡುವಂತೆ ನಿವೇದಿಸಿ ವಿದ್ಯಾರ್ಥಿಯೊಬ್ಬ (ಳು) ಹೊಳ್ಮಗೆ ಹೋರ್ ಬೊಬ್ಬರ್ಯ ದೈವದ ಮೊರೆ ಹೋಗಿದ್ದು.ಚೀಟಿ ಬರೆದು ಹುಂಡಿಗೆ ಹಾಕಿರುವ ಕುತೂಹಲಕರ ವಿಷಯ ಹುಂಡಿ ಒಡೆಯುವ ಸಮಯದಲ್ಲಿ ಬೆಳಕಿಗೆ ಬಂದಿದೆ.ವಿದ್ಯಾರ್ಥಿ ಬರೆದು ಹುಂಡಿಗೆ ಹಾಕಿರುವ ಚೀಟಿ ಸೋಷಿಯಲ್ ಮೀಡಿಯಾದಲ್ಲಿ ಬಾರಿ ವೈರಲ್ ಆಗಿದೆ.

ಉಡುಪಿ ಕರ್ನಾಟಕ ಪತ್ರಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷರಾಗಿ ಜನಾರ್ಧನ ಕೆ.ಎಂ ಆಯ್ಕೆ

ಕುಂದಾಪುರ:ಕರ್ನಾಟಕ ಪತ್ರಕರ್ತರ ಸಂಘ (ರಿ) ಪ್ರೆಸ್ ಕಾಲೊನಿ,ಬೆಳಗಾವಿ ಇದರ ಉಡುಪಿ ಜಿಲ್ಲಾಧ್ಯಕ್ಷರಾಗಿ ಕಿರಣ್ ಪೂಜಾರಿ ಅವರು ರಾಜ್ಯಾಧ್ಯಕ್ಷರಾದ ಎಂ.ಬಿ.ಶಿವಪೂಜಿ ಅವರ ಸೂಚನೆಯಂತೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಜನಾರ್ಧನ ಕೆ.ಎಂ. ಪ್ರಧಾನ ಕಾರ್ಯದರ್ಶಿಯಾಗಿ ಪಿ.ಕೆ.ಪೂಜಾರಿ,ಜೊತೆ ಕಾರ್ಯದರ್ಶಿಯಾಗಿ ವಿಶ್ವನಾಥ ಬೆಳ್ಳಂಪಳ್ಳಿ,ಖಜಾಂಜಿಯಾಗಿ ದೇವೇಂದ್ರ ಸುವರ್ಣ ಅವರು ಆಯ್ಕೆಯಾಗಿದ್ದಾರೆ.

You cannot copy content of this page