ವಿಶ್ವ ಪರಿಸರ ದಿನಾಚರಣೆ,ಸನ್ಮಾನ ಕಾರ್ಯಕ್ರಮ

ಕುಂದಾಪುರ:ಜೆಸಿಐ ಕುಂದಾಪುರ ಸಿಟಿ ಹಾಗೂ ಪ್ರಕೃತಿ ಇಕೋ ಕ್ಲಬ್ ಜನತಾ ಪ್ರೌಢಶಾಲೆ ಹೆಮ್ಮಾಡಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಹೆಮ್ಮಾಡಿ ಜನತಾ ಪ್ರೌಢಶಾಲೆಯಲ್ಲಿ ಗುರುವಾರ ನಡೆಯಿತು.ಜೆಸಿಐ ಕುಂದಾಪುರ ಸಿಟಿ ಅಧ್ಯಕ್ಷ ರಾಘವೇಂದ್ರ ಕುಲಾಲ್ ಅಧ್ಯಕ್ಷತೆ ವಹಿಸಿದ್ದರು.ಜನತಾ ಪ್ರೌಢ ಶಾಲೆ ಹೆಮ್ಮಾಡಿ ಮುಖ್ಯೋಪಾಧ್ಯಾಯರಾದ ಮಂಜು ಕಾಳವಾರ ಉದ್ಘಾಟಿಸಿದರು.ಜೆಸಿಐ ಕುಂದಾಪುರ ಸಿಟಿ ಸ್ಥಾಪಕಾಧ್ಯಕ್ಷ ಹುಸೇನ್ ಹೈಕಾಡಿ ಗಿಡಗಳನ್ನು ವಿತರಿಸಿದರು.ಶ್ರೀಧರ ಗಾಣಿಗ ಅವರು ಪರಿಸರ ಕಾಳಜಿ ಕುರಿತು ಮಾಹಿತಿಯನ್ನು ನೀಡಿದರು.ಬೈಂದೂರು ವಲಯದ ಬೀಟ್ ಅರಣ್ಯಾಧಿಕಾರಿ ಶಂಕರ್ ಡಿ.ಎಲ್ ಅವರನ್ನು ಸನ್ಮಾನಿಸಲಾಯಿತು.ಜೆಸಿಐ […]

ಸಿಡಿಲು ಬಡಿದು ಮೂರು ಮಹಿಳೆಯರಿಗೆ ಗಾಯ

ಮಂಗಳೂರು:ಹುಲ್ಲು ಕೊಯ್ಯಲು ಹೋಗಿದ್ದ ಮೂವರು ಮಹಿಳೆಯರಿಗೆ ಸಿಡಿಲು ಬಡಿದ ಪರಿಣಾಮ ಗಾಯಗೊಂಡ ಘಟನೆ ಕೊಡಂಬೆಟ್ಟು ಗ್ರಾಮದಲ್ಲಿ ನಡೆದಿದೆ.ಗಾಯಾಳುಗಳನ್ನುಬಂಟ್ವಾಳ ಆಸ್ಪತ್ರೆಗೆ ದಾಖಲಾಲು ಮಾಡಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.ಕೊಡಂಬೆಟ್ಟು ಗ್ರಾಮದ ಸುಬ್ಬೊಟ್ಟು ನಿವಾಸಿಯಾದ ಅನಿತಾ ಪೂಜಾರಿ ಮತ್ತು ರಾಮಯ್ಯ ಗುರಿ ನಿವಾಸಿಯಾದ ಲೀಲಾವತಿ ಹಾಗೂ ಮೋಹಿನಿ ಎನ್ನುವವರಿಗೆ ಸಿಡಿಲು ಬಡಿದಿದೆ.

ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ

ಕುಂದಾಪುರ:ಮನೋಸೋ ಇಚ್ಛೆ ಮರಗಳನ್ನು ಕಡಿದು ಭೂಮಿಯನ್ನು ಬಗೆದಿದ್ದರ ಪರಿಣಾಮ ಪ್ರಕೃತಿಯಲ್ಲಿ ಅಸಮಾತೋಲನ ಉಂಟಾಗಿ ಮಳೆ,ಬೆಳೆ ಕುಂಠಿತವಾಗುತ್ತಿದೆ.ಶುದ್ಧ ಗಾಳಿ ಸೇವನೆಗೂ ಪರಿತಪಿಸುವಂತೆ ಆಗಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.ಬೈಂದೂರು ವಲಯದ ಬಡಾಕೆರೆ ಉತ್ತರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಗಿಡಗಳನ್ನು ವಿತರಿಸಿ ಅವರು ಮಾತನಾಡಿದರು.ಭೂಮಿ ಹಸಿರಾಗಿದ್ದಾರೆ ಮಾತ್ರ ಮಾನವ ಸಹಿತ ಜೀವಿ ಸಂಕುಲಗಳು ಬದುಕಬಹುದಾಗಿದೆ.ಗಿಡಗಳನ್ನು ನೆಟ್ಟು ಬೆಳೆಸಿ ಪೋಷಿಸುವುದರ ಮೂಲಕ ಪ್ರಕೃತಿ ಉಳಿವಿಗೆ ಎಲ್ಲರೂ ಕೈಜೋಡಿಸಬೇಕೆಂದು […]

You cannot copy content of this page