ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ದಾರುಣ ಸಾವು

ಕುಂದಾಪುರ:ಮನೆಯ ಗೇಟ್ ಮುಂದೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಎಂಬಲ್ಲಿ ಭಾನುವಾರ ನಡೆದಿದೆ. ಹಡವಿನಕೋಣೆ ಮುದ್ರುಮಕ್ಕಿ ಸಮೀಪದ ನಿವಾಸಿ ಕುರುಡಿ ಇರ್ಷಾದ್ (52) ಮೃತಪಟ್ಟಿದ್ದಾರೆ.ಶನಿವಾರ ತಡರಾತ್ರಿ ಸುರಿದ ಬಾರಿ ಗಾಳಿ ಮಳೆಗೆ ಹಡವಿನಕೋಣೆಯಿಂದ ಮುದ್ರುಮಕ್ಕಿಗೆ ತೆರಳುವ ಮಾರ್ಗದಲ್ಲಿದ್ದ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು.ಇರ್ಷಾದ್ ಅವರು ಮನೆಯೊಳಕ್ಕೆ ಸತ್ತುಹೋದ ಇಲಿಯನ್ನು ಹೊರಕ್ಕೆ ಬೀಸಾಡುವ ಸಲುವಾಗಿ ಬೆಳಿಗ್ಗೆ ಗೇಟ್ ಹೊರಕ್ಕೆ ಬಂದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ […]

ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಬಿ.ಸಿ.ಎ ವಿಭಾಗದ ವತಿಯಿಂದವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ನಡೆಯಿತು.ಪ್ರೊ.ರಾಜಲಕ್ಷ್ಮೀ ಆನಂದನ್ಸೆಂಟರ್ ಹೆಡ್,ಸ್ಕೂಲ್ ಆಫ್ ಐಟಿ ಸ್ಕಿಲ್ಸ್ ಮಣಿಪಾಲ್,ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್, ಮಣಿಪಾಲ್ ಇವರು ವಿದ್ಯಾರ್ಥಿಗಳಿಗೆ ಬಿ.ಸಿ.ಎ ಕೋರ್ಸ್ ಉಪಯೋಗ ಮತ್ತು ಭವಿಷ್ಯದಲ್ಲಿ ಸಿಗುವ ಉದ್ಯೋಗದ ಮಾಹಿತಿ ಹಾಗೂ ಸಂದರ್ಶನವನ್ನು ಹೇಗೆ ಎದುರಿಸಬೇಕು ಎನ್ನುವುದರ ಕುರಿತು ಮತ್ತು ಹೊಸ ಬಗೆಯ ಕಂಪ್ಯೂಟರ್ ಅಪ್ಲಿಕೇಶನ್ ತಯಾರಿಸುವ ಕುರಿತು ಮಾಹಿತಿ ನೀಡಿದರು.ಕಾಲೇಜಿನ ಸಂಸ್ಥಾಪಕ ಅಧ್ಯಕ್ಷರಾದ ಸುಬ್ರಮಣ್ಯ ಬಿ.ಸಿ.ಎ ವಿಭಾಗದ ಮಹತ್ವದ ಕುರಿತು ‌ಮಾಹಿತಿಯನ್ನು ನೀಡಿದರು.ಕಾಲೇಜಿನ […]

ಮೀನುಗಾರಿಕಾ ಬೋಟ್ ಅವಘಡ,ಲಕ್ಷಾಂತರ.ರೂ ನಷ್ಟ

ಕುಂದಾಪುರ:ಭಟ್ಕಳ ತಾಲೂಕಿನ ಭಾಗದ ಸಮುದ್ರದಲ್ಲಿ ಶುಕ್ರವಾರ ಬೆಳಗಿನ ಜಾವಾ 5 ಗಂಟೆ ಸುಮಾರಿಗೆ ಗೋಪಾಲ ಸುವರ್ಣ ವಡಭಾಂಡೇಶ್ವರ ಮಲ್ಪೆ ಎಂಬುವವರ ಮಾಲೀಕತ್ವದ ಮಾಲ್ತೀ ದೇವಿ-2 ಎನ್ನುವ ಬೋಟ್‍ನಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಸಮಯದಲ್ಲಿ.ಅದೆ ಮಾರ್ಗದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ದುರ್ಗಾ ಎನ್ನುವ ಬೋಟ್ ಡಿಕ್ಕಿ ಹೊಡೆದ ಪರಿಣಾಮ ಮಾಲ್ತೀ ದೇವಿ-2 ಎನ್ನುವ ಬೋಟ್‍ಗೆ ತೀವೃ ಸ್ವರೂಪದಲ್ಲಿ ಹಾನಿ ಉಂಟಾಗಿದ್ದು 20 ಲಕ್ಷ.ಕ್ಕೂ ಅಧಿಕ ನಷ್ಟ ಸಂಭವಿಸಿದ ಘಟನೆ ನಡೆದಿದೆ.ಬೋಟ್ ದುರಂತದಲ್ಲಿ ಮೀನುಗಾರರು ಪಾರಾಗಿದ್ದಾರೆ.ಮಂಜು ಮುಸುಕಿದ ವಾತಾವರಣವೆ ದುರ್ಘಟನೆ ಸಂಭವಿಸಲು ಕಾರಣವಾಗಿದೆ […]

You cannot copy content of this page