ಅನುಮಾನಾಸ್ಪದ ಸಾವು ಶಂಕೆ,ಹೂತ ಮೃತದೇಹ ಮೇಲಕ್ಕೆತ್ತಿ ಮರುತನಿಖೆ
ಮಂಗಳೂರು:ತಮ್ಮನ ಸಾವಿನ ಬಗ್ಗೆ ಅಣ್ಣ ಅನುಮಾನ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಮರು ತನಿಖೆಗಾಗಿ ನ್ಯಾಯಾಲಯಲದ ಆದೇಶದಂತೆ ಮಂಜೇಶ್ವರ-ವಿಟ್ಲ ಪೊಲೀಸರು ಹಾಗೂ ಆರೋಗ್ಯಾಧಿಕಾರಿಗಳ ಸಮ್ಮುಖದಲ್ಲಿ ಕನ್ಯಾನ ಮಸೀದಿಯ ದಫನ ಭೂಮಿಯಿಂದ ಮೃತದೇಹವನ್ನು ಮೇಲಕ್ಕೆತ್ತಿದ್ದ ಘಟನೆ ನಡೆದಿದೆ.ವಿಟ್ಲ ಠಾಣಾ ವ್ಯಾಪ್ತಿಯ ಕನ್ಯಾನ ನಿವಾಸಿ ಅಶ್ರಫ್(44)ಎಂಬವರು ಮಂಜೇಶ್ವರ ಠಾಣಾ ವ್ಯಾಪ್ತಿಯ ಸುಂಕದಕಟ್ಟೆ ಮಜೀರ್ ಪಳ್ಳದಲ್ಲಿ ಪತ್ನಿಯ ಜೊತೆ ವಾಸವಾಗಿದ್ದು ಗೂಡಂಗಡಿ ವ್ಯವಹಾರ ನಡೆಸಿಕೊಂಡಿದ್ದರು.ಮೇ 5ರಂದು ಮನೆಯಲ್ಲಿ ಊಟ ಮಾಡಿ ಮಲಗಿದ್ದ ಅಶ್ರಫ್ ಅವರು ಮರುದಿನ ಅಂದರೆ ಮೇ 6ರಂದು ಮೃತಪಟ್ಟಿದ್ದರು.ಆದರೆ ತರಾತುರಿಯಲ್ಲಿ ಪತ್ನಿ […]





























































































































































































































































































































































































































































































































































































































































































































































































































































































































































































































































































































































































































































































































































































































































































