ಮೀನುಗಾರಿಕಾ ಬೋಟ್ ಅವಘಡ,ಲಕ್ಷಾಂತರ.ರೂ ನಷ್ಟ

ಕುಂದಾಪುರ:ಭಟ್ಕಳ ತಾಲೂಕಿನ ಭಾಗದ ಸಮುದ್ರದಲ್ಲಿ ಶುಕ್ರವಾರ ಬೆಳಗಿನ ಜಾವಾ 5 ಗಂಟೆ ಸುಮಾರಿಗೆ ಗೋಪಾಲ ಸುವರ್ಣ ವಡಭಾಂಡೇಶ್ವರ ಮಲ್ಪೆ ಎಂಬುವವರ ಮಾಲೀಕತ್ವದ ಮಾಲ್ತೀ ದೇವಿ-2 ಎನ್ನುವ ಬೋಟ್‍ನಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಸಮಯದಲ್ಲಿ.ಅದೆ ಮಾರ್ಗದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ದುರ್ಗಾ ಎನ್ನುವ ಬೋಟ್ ಡಿಕ್ಕಿ ಹೊಡೆದ ಪರಿಣಾಮ ಮಾಲ್ತೀ ದೇವಿ-2 ಎನ್ನುವ ಬೋಟ್‍ಗೆ ತೀವೃ ಸ್ವರೂಪದಲ್ಲಿ ಹಾನಿ ಉಂಟಾಗಿದ್ದು 20 ಲಕ್ಷ.ಕ್ಕೂ ಅಧಿಕ ನಷ್ಟ ಸಂಭವಿಸಿದ ಘಟನೆ ನಡೆದಿದೆ.ಬೋಟ್ ದುರಂತದಲ್ಲಿ ಮೀನುಗಾರರು ಪಾರಾಗಿದ್ದಾರೆ.ಮಂಜು ಮುಸುಕಿದ ವಾತಾವರಣವೆ ದುರ್ಘಟನೆ ಸಂಭವಿಸಲು ಕಾರಣವಾಗಿದೆ […]

ನಿಂತಿದ್ದ ಟಿಪ್ಪರ್ ಗೆ ಬೊಲೆರೋ ಡಿಕ್ಕಿ ಚಾಲಕ ಗಂಭೀರ

ಉಡುಪಿ:ರಾಷ್ಟ್ರೀಯ ಹೆದ್ಧಾರಿ 66 ರ ಕೊಪ್ಪಲಂಗಡಿ ಎಂಬಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟಿಪ್ಪರ್ ವಾಹನಕ್ಕೆ ಬೊಲೆರೋ ವಾಹನವೊಂದು ಹಿಂದಿನಿಂದ ಡಿಕ್ಕಿ‌ಹೊಡೆದಿದೆ.ಅಪಘಾತದಲ್ಲಿ ಬೊಲೆರೋ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.ಮಂಗಳೂರಿನಿಂದ ಉಡುಪಿಯತ್ತ ಚಲಿಸುತ್ತಿದ್ದ ಬೊಲೆರೋ ವಾಹನ ರಸ್ತೆ ಬದಿ ನಿಂತಿದ್ದ ಟಿಪ್ಪರ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು,ಅಪಘಾತದ ರಭಸಕ್ಕೆ ಬೊಲೆರೋ ವಾಹನದ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ.ಗಂಭೀರವಾಗಿ ಗಾಯಗೊಂಡಿರುವ ಚಾಲಕನನ್ನು ಸ್ಥಳೀಯರು ತಕ್ಷಣ ಉಡುಪಿಯ ಆಸ್ಪತ್ರೆಗೆ ರವಾನಿಸಿದ್ದಾರೆ.

ಮೇ.20 ರಂದು ಬಸ್ರೂರುನಲ್ಲಿ ಊರಾಗ್ ಒಂದ ಕಾರ್ ಹಬ್ಬ ಕಾರ್ಯಕ್ರಮ

ಕುಂದಾಪುರ:ಯುನೈಟೆಡ್ ಟೊಯೋಟಾ ವತಿಯಿಂದ ಉಡುಪಿ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಊರಾಗ್ ಒಂದ ಕಾರ್ ಹಬ್ಬ ಕಾರ್ಯಕ್ರಮ ಬಸ್ರೂರು ಜಂಕ್ಷನ್ ನಲ್ಲಿ ಮೇ.20 ರಿಂದ ಮೇ.26 ರ ವರೆಗೆ ನಡೆಯಲಿದೆ.ಊರಾಗ್ ಒಂದ ಕಾರ್ ಹಬ್ಬದ ಅಂಗವಾಗಿ ಗ್ರಾಹಕರಿಗೆ ಆಕರ್ಷಕ ಆಫರ್ ಗಳನ್ನು ನೀಡಲಾಗುತ್ತಿದ್ದು.ತಮ್ಮ ಹಳೆ ಕಾರನ್ನು ನೀಡಿ ಉತ್ತಮ ಬೆಲೆಯನ್ನು ಪಡೆದುಕೊಂಡು ಹೊಸ ಕಾರನ್ನು ಖರೀದಿಸಲು ಅವಕಾಶವನ್ನು ಕಲ್ಪಿಸಲಾಗಿದೆ.ಗ್ಲಾಂಝಾ ಕಾರ್ ಹಾಗೂ ಹೈರೈಡರ್ ಕಾರ್ ಗೆ ಒಂದು ಲಕ್ಷದ ವರೆಗೆ ಡಿಸ್ಕೌಂಟ್ ಆಫರ್ ಕಂಪನಿ ಕಡೆಯಿಂದ ನೀಡಲಾಗಿದ್ದು.ಪೋರ್ರ್ಚುನರ್ ಕಾರ್ […]

You cannot copy content of this page