ಜೂನ್.16 ರಂದು ಪ್ರಾಥಮಿಕ, ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ರಜೆ

ಕುಂದಾಪುರ:ಉಡುಪಿ ಜಿಲ್ಲೆಯಾದ್ಯಂತ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಅಂಗನವಾಡಿ ಹಾಗೂ ಒಂದರಿಂದ ಹತ್ತನೇ ತರಗತಿವರೆಗೆ (ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ) ಜೂ. 16 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾ ಕುಮಾರಿ ಆದೇಶಿಸಿದ್ದಾರೆ.

ಶ್ರೀ ಕೃಷ್ಣಾನಂದತೀರ್ಥಮಹಾಸ್ವಾಮಿ ಗೋಪಾಲಕೃಷ್ಣ ದೇವಸ್ಥಾನಕ್ಕೆ ಭೇಟಿ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಶಕಟಪುರ ಶ್ರೀ ವಿದ್ಯಾಪೀಠಾಧೀಶ್ವರ ಶ್ರೀ ಜಗದ್ಗುರು ಬದರೀಶಂಕರಾಚಾರ್ಯ ಶ್ರೀ ವಿದ್ಯಾಭಿನವ ಶ್ರೀ ಕೃಷ್ಣಾನಂದತೀರ್ಥಮಹಾಸ್ವಾಮಿಗಳು ಭಾನುವಾರ ಭೇಟಿ ನೀಡಿ ಶ್ರೀ ದೇವರಿಗೆ ಕಲಶಾಭಿಷೇಕ ಸಹಿತ ಮಹಾಪೂಜೆಯನ್ನು ನೆರವೇರಿಸಿದರು.ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ “ಐಕ್ಯಂ” 2k25 ಕಾರ್ಯಕ್ರಮ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ “ಐಕ್ಯಂ” 2025 ಅದ್ದೂರಿಯಿಂದ ನಡೆಯಿತು.ವಿಭಿನ್ನ ರೀತಿಯ ನೃತ್ಯ, ಸಂಗೀತದಿಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳೇ ಸ್ವತಃ ತಾವೇ ವಿನ್ಯಾಸಗೊಳಿಸಿರುವ ಸೀರೆಯ ಮೇಲೆ ಚಿತ್ರಗಳ ಚಿತ್ತಾರ,ಎಂಬ್ರಾಡರಿ ಪ್ರದರ್ಶನ ಮತ್ತು ರ್‍ಯಾಂಪ್ ವಾಕ್ ಜರುಗಿತು.ಶೈಕ್ಷಣಿಕವಾಗಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ನಾನಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು.ರಾಜ್ಯಶಾಸ್ತ್ರ ನಿವೃತ್ತ ಉಪನ್ಯಾಸಕ ಡಾ.ದಯಾನಂದ ನಾಯಕ್ ಮಂಗಳೂರು ವಿಶ್ವವಿದ್ಯಾಲಯ ಹಾಗೂ ಅಧ್ಯಾಪಕರಾದ ಕರುಣಾಕರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ವಿದ್ಯಾರ್ಥಿಗಳಿಗೆ ವಿದ್ಯೆಯ ಜೊತೆಗೆ ಭವಿಷ್ಯವನ್ನು […]

You cannot copy content of this page