ಸ್ಕೈಡೈನಿಂಗ್ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ: ಪ್ರಕೃತಿ ಸೌಂದರ್ಯಕ್ಕೆ ಮನಸೋತ ಸಚಿವ

ಕುಂದಾಪುರ:ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದು,ಇಲ್ಲಿಗೆ ಬರುವಂತೆ ಸಂಸದರು, ಶಾಸಕರು ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಈ ಭಾಗದ ಪ್ರವಾಸೋದ್ಯಮ ತಾಣಗಳನ್ನು ವೀಕ್ಷಿಸಲು ಬಂದಿದ್ದು,ನದಿ ಹಾಗೂ ಸಮುದ್ರದ ಸುಂದರವಾದ ವಾತಾವರಣ ಇಲ್ಲಿದೆ.ತ್ರಾಸಿ- ಮರವಂತೆಯನ್ನು ಅತ್ಯುತ್ತಮ ಪ್ರವಾಸೋದ್ಯಮ ಸ್ಥಳವನ್ನಾಗಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ವಿಸ್ತೃತ ಯೋಜನೆಯೊಂದಿಗೆ ಪ್ರಸ್ತಾವನೆ ಸಲ್ಲಿಸಿದರೆ,ಒಟ್ಟಾಗಿ ಅಭಿವೃದ್ಧಿಪಡಿಸಬಹುದು ಎಂದು ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದರು.ಅವರು ಗುರುವಾರ ಸಂಜೆ ತ್ರಾಸಿ – ಮರವಂತೆ ಬೀಚ್ ಗೆ ಭೇಟಿ ನೀಡಿದ,ಸಮಯದಲ್ಲಿ ತ್ರಾಸಿ ಬೀಚ್ ನಲ್ಲಿನ […]

ತ್ರಾಸಿ ಜಂಕ್ಷನ್‍ನಲ್ಲಿ ಅಪಘಾತ:ಕಾರು ಜಖಂ

ತ್ರಾಸಿ:ಚರ್ಚ್ ರೋಡ್ ನಿಂದ ಜಂಕ್ಷನ್ ಮೂಲಕ ವಿರುದ್ಧ ದಿಕ್ಕಿನಲ್ಲಿ ಕ್ರಾಸಿಂಗ್ ತೆಗೆದುಕೊಂಡು ಸಾಗುತ್ತಿದ್ದ ವೇಳೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರುಗಳೆರಡು ಜಖಂ ಗೊಂಡಿದ್ದ ಘಟನೆ ಮಂಗಳವಾರ ನಡೆದಿದೆ.ಅಪಘಾತದಲ್ಲಿ ಚಾಲಕರಿಬ್ಬರು ಪಾರಾಗಿದ್ದಾರೆ.

ಬ್ಯಾಗ್ ಮರಳಿಸುವಂತೆ ಮನವಿ

ಕುಂದಾಪುರ:ಮಾರಣಕಟ್ಟೆ ಮೇಳದ ಯಕ್ಷಗಾನ ಕಲಾವಿದರಾದ ಐರ್ಬೈಲು ಆನಂದ ಶೆಟ್ಟಿ ಅವರ ಮಗಳು ಸೀಮಾ ಶೆಟ್ಟಿ ಎಂಬುವರು ಏ.೨೩ ರ ಬುಧವಾರ ರಾತ್ರಿ ಐರ್ಬೈಲ್‌ನಲ್ಲಿ ಯಕ್ಷಗಾನವನ್ನು ವೀಕ್ಷಿಸಿ ಆಟೋದಲ್ಲಿ ಸಿದ್ದಾಪುರ ನೇರಳಕಟ್ಟೆ ನೆಂಪು ಬಗ್ವಾಡಿ ಕ್ರಾಸ್ ಹಕ್ಲಾಡಿ ಮಾರ್ಗದಲ್ಲಿ ಚಲಿಸುತ್ತಿರುವಾಗ ಆಟೋದ ಹಿಂಭಾಗದಲ್ಲಿದ್ದ ಬೆಲೆ ಬಾಳುವ ವಸ್ತುಗಳನ್ನೊಳಗೊಂಡ ಬ್ಯಾಗ್ ಮಾರ್ಗ ಮಧ್ಯೆ ಬಿದ್ದು ಹೋಗಿರುತ್ತದೆ.ಬ್ಯಾಗ್‌ನಲ್ಲಿ ಆಧಾರ್ ಕಾರ್ಡ್,ಪಾನ್ ಕಾರ್ಡ್,ಎಟಿಎಂ ಕಾರ್ಡ್,ಚುನಾವಣಾ ಗುರುತಿನ ಚೀಟಿ,೨೦ ಪವನ್ ಚಿನ್ನ ಹಾಗೂ ೨೦ ಸಾವಿರ.ರೂ ಇದ್ದಿದ್ದು ಬುಧವಾರ ರಾತ್ರಿ ಐರ್ಬೈಲ್‌ನಲ್ಲಿ ಯಕ್ಷಗಾನವನ್ನು ನೋಡಿಕೊಂಡು […]

You cannot copy content of this page