ಶ್ರೀಸೀತಾರಾಮಚಂದ್ರ ದೇವರ ಕಲ್ಯಾಣೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ಶ್ರೀರಾಮ ದೇವಸ್ಥಾನದ ಸುವರ್ಣಮಹೋತ್ಸವ ಅಂಗವಾಗಿ ಶ್ರೀಸೀತಾರಾಮಚಂದ್ರ ದೇವರ ಕಲ್ಯಾಣೋತ್ಸವ ಡಾ.ಎ ಚೆನ್ನಕೇಶವ ಗಾಯತ್ರಿ ಭಟ್ ಗಜಪುರ ಆನಗಳ್ಳಿ ಅವರ ನೇತೃತ್ವದಲ್ಲಿ ಗುರುವಾರ ವಿಜೃಂಭಣೆಯಿಂದ ನಡೆಯಿತು.ಸೀತಾ ದೇವಿ ಮೂರ್ತಿಯನ್ನು ಗಂಗೊಳ್ಳಿ ಶ್ರೀಮಹಾಂಕಾಳಿ ಅಮ್ಮನವರ ದೇವಸ್ಥಾನ ದಿಂದ ಹಾಗೂ ಶ್ರೀರಾಮ ದೇವರ ಮೂರ್ತಿಯನ್ನು ತ್ರಾಸಿ ಕೊಂಕಣಿ ಖಾರ್ವಿ ಸಭಾಭವನದ ಬಳಿಯಿಂದ ಪೂರ್ಣ ಕುಂಭ ಕಲಶದೊಂದಿಗೆ ಭವ್ಯ ಮೆರವಣಿಗೆ ಮೂಲಕ ಶ್ರೀರಾಮ ದೇವಸ್ಥಾನ ಕಂಚುಗೋಡುನಲ್ಲಿ ಎದುರುಗೊಳಿಸಲಾಯಿತು.ಉಡುಪಿ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಅವರು […]

ಶ್ರೀಲಕ್ಷ್ಮೀನಾರಾಯಣ ದೇವರ ವೈಭವದ ಹೊರೆ ಕಾಣಿಕೆ ಪುರಮೆರವಣಿಗೆ

ಕುಂದಾಪುರ:ತಾಲೂಕಿನ ಹೆಮ್ಮಾಡಿ ಶ್ರೀಲಕ್ಷ್ಮೀನಾರಾಯಣ ದೇವಸ್ಥಾನದ ನೂತನ ಶಿಲಾಮಯಗುಡಿ ಲೋಕಾರ್ಪಣೆ ಹಾಗೂ ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮಕಂಭಾಭಿಷೇಕ ಮಹೋತ್ಸವ ಅಂಗವಾಗಿ ವೈಭವದ ಹೊರೆ ಕಾಣಿಕೆ ಶೋಭಾಯಾತ್ರೆ ಶುಕ್ರವಾರ ನಡೆಯಿತು.ಪೂರ್ಣ ಕುಂಭ ಸ್ವಾಗತದೊಂದಿಗೆ ಶ್ರೀ ದೇವರ ಹೊರೆ ಕಾಣಿಕೆ ಮೆರವಣಿಗೆಯನ್ನು ಸ್ವಾಗತಿಸಿಕೊಳ್ಳಲಾಯಿತು.ಚಂಡೆ ವಾದನ,ವಾದ್ಯ ಘೋಷ,ಭಜನೆ ಮೆರವಣಿಗೆ ಸೊಬಗನ್ನು ಹೆಚ್ಚಿಸಿತು.ಮಹಿಳೆಯರು ಮತ್ತು ಪುರುಷರು ಸಮವಸ್ತ್ರದೊಂದಿಗೆ ಮೆರವಣಿಗೆಯಲ್ಲಿ ಭಾಗವಹಿಸಿದರು.

ಬಿಜೆಪಿ ಯುವ ಮೋರ್ಚಾದಿಂದ ಕೊಲ್ಲೂರು ಮೂಕಾಂಬಿಕಾ ದೇವಿಗೆ ಪೂಜೆ ಸಲ್ಲಿಕೆ

ಬೈಂದೂರು:ಬಿ.ವೈ ರಾಘವೇಂದ್ರ ಅವರ ಶ್ರೇಯಸ್ಸಿಗಾಗಿ,ಬೈಂದೂರು ಯುವ ಮೋರ್ಚಾ ತಂಡದಿಂದ ಕೊಲ್ಲೂರು ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಲಾಯಿತು.ಬೈಂದೂರು ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಅಧಿಕ ಲೀಡ್ ಮತ ಸಿಗಬೇಕೆಂದು ಜಗನ್ಮಾತೆಯಲ್ಲಿ ಪ್ರಾರ್ಥಿಸಲಾಯಿತು.ಬಿಜೆಪಿ ಯುವಮೋರ್ಚ ಬೈಂದೂರು ವತಿಯಿಂದ ಬಿ.ವೈ ರಾಘವೇಂದ್ರರವರಿಗೆ ಬೈಂದೂರು ಕ್ಷೇತ್ರದಲ್ಲಿ 1 ಲಕ್ಷ ಲೀಡ್ ಕೊಡಿಸುವ ಶಾಸಕ ಗುರುರಾಜ್ ಗಂಟಿಹೊಳೆಯವರ ಸಂಕಲ್ಪಕ್ಕೆ ಶಕ್ತಿ ತುಂಬಲು ಕೊಲ್ಲೂರು ತಾಯಿ ಮೂಕಾಂಬಿಕೆಯಲ್ಲಿ ಯುವಮೋರ್ಚ ತಂಡದಿಂದ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು.ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ,ಯುವಮೋರ್ಚ ಅಧ್ಯಕ್ಷ ಗಜೇಂದ್ರ ಬೇಲೆಮನೆ […]

You cannot copy content of this page