ಡಾ.ಶ್ರೇಯಸ್ ರಾವ್.ಜಿ ಯುಪಿಎಸ್ಸಿ ಪರೀಕ್ಷೆಯಲ್ಲಿ ಶ್ರೇಷ್ಠ ಸಾಧನೆ

ಕುಂದಾಪುರ:ಬೈಂದೂರು ತಾಲೂಕಿನ ಉಪ್ಪುಂದಡಾ. ಶ್ರೇಯಸ್ ರಾವ್ ಜಿ. ಯುಪಿಎಸ್ ಸಿ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲಿಯೇ 651ನೇ ರ್ಯಾಂಕ್ ಪಡೆದಿದ್ದಾರೆ.ಶಿಕ್ಷಕಿ ಸುಶೀಲ ಯು.ಎಸ್ ಅವರ ಸುಪುತ್ರರಾದ ಅವರು ವೈದ್ಯಕೀಯ ಪದವೀಧರರಾಗಿದ್ದು ಕಳೆದ ಎರಡು ವರ್ಷದಿಂದ ಉಡುಪಿ ಅಂಬಲಪಾಡಿ ಮೆಡಿಕಲ್ ಸೆಂಟರ್ ನಲ್ಲಿ ರೇಡಿಯಾಲಾಜಿಸ್ಡ್ ಆಗಿ ಸೇವೆ ಸಲ್ಲಿಸುತ್ತಿದ್ದರು.ಯಾವುದೇ ಕೋಚಿಂಗ್ ಪಡೆಯದೇ ಈ ಸಾಧನೆ ಮಾಡಿರುವುದು ಗಮನಾರ್ಹ ಸಂಗತಿಯಾಗಿದೆ.

ರಾಮ ನವಮಿ ಪಲ್ಲಕ್ಕಿ ಉತ್ಸವ ಮೆರವಣಿಗೆ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ಶ್ರೀರಾಮ ಮಂದಿರದಲ್ಲಿ ರಾಮನವಮಿ ಉತ್ಸವ ಅಂಗವಾಗಿ ಅಖಂಡ ಭಜನಾ ಕಾರ್ಯಕ್ರಮ,ಸತ್ಯನಾರಾಯಣ ಪೂಜೆ,ಅನ್ನಸಂತರ್ಪಣೆ ಹಾಗೂ ಶ್ರೀರಾಮ ದೇವರ ಪಲ್ಲಕ್ಕಿ ಉತ್ಸವ ಮೆರವಣಿಗೆ ಬುಧವಾರ ವಿಜೃಂಭಣೆಯಿಂದ ನಡೆಯಿತು.ಕಂಚುಗೋಡು ಶ್ರೀರಾಮ ಮಂದಿರದ ಸುವರ್ಣ ಮಹೋತ್ಸವ ಅಂಗವಾಗಿ ಏಪ್ರಿಲ್ 18 ರ ಗುರುವಾರದಂದು ಸಂಜೆ 4 ಗಂಟೆ ಯಿಂದ ವೈಭವದ ಐತಿಹಾಸಿಕ ಶ್ರೀ ಸೀತಾರಾಮಚಂದ್ರ ಕಲ್ಯಾಣೋತ್ಸವ ಕಾರ್ಯಕ್ರಮ ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ.ಡಾ.ಎ ಚನ್ನಕೇಶವ ಗಾಯತ್ರಿ ಭಟ್ ಗಜಪುರ ಆನಗಳ್ಳಿ ಹಾಗೂ […]

ಮಾಣಿಕೊಳಲು ಶ್ರೀಲಕ್ಷ್ಮೀಚೆನ್ನಕೇಶವ ದೇವರ ಶ್ರೀಮನ್ಮಹಾರಥೋತ್ಸವ

ಕುಂದಾಪುರ:ಹದಿನಾರು ಮಾಗಣೆಯ ಒಡೆಯನಾದ ಕುಂದಾಪುರ ತಾಲೂಕಿನ ಕುಂದಬಾರಂದಾಡಿ ಗ್ರಾಮದ ಮಾಣಿಕೊಳಲು ಶ್ರೀಲಕ್ಷ್ಮೀಚೆನ್ನಕೇಶವ ದೇವರ ಶ್ರೀಮನ್ಮಹಾರಥೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವೈಭವದಿಂದ ಬುಧವಾರ ನಡೆಯಿತು.ಭಕ್ತಿಭಾವದಿಂದ ಭಕ್ತಾದಿಗಳು ರಥವನ್ನು ಎಳೆದರು.ಚಂಡೆ ವಾದನ,ವಾದ್ಯಘೋಷ ರಥೋತ್ಸವದ ಸೊಬಗನ್ನು ಹೆಚ್ಚಿಸಿತು.ಶ್ರೀ ಲಕ್ಷ್ಮೀಚೆನ್ನಕೇಶವ ದೇವರ ಮನ್ಮಹಾರಥೋತ್ಸವ ಕಾರ್ಯಕ್ರಮದ ಅಂಗವಾಗಿ ವಾಸ್ತು ರಾಕ್ಷೋಘ್ನ ಹೋಮ,ಬಲಿ ಉತ್ಸವ,ಕಟ್ಟೆ ಪೂಜೆ,ಧ್ವಜಾರೋಹಣ,ಪ್ರಧಾನ ಹೋಮ,ಮಹಾಪೂಜೆ ಅನ್ನಪ್ರಸಾದ ಸೇವೆ ಮಹಾ ರಂಗಪೂಜೆ.ಹಟ್ಟಿಯಂಗಡಿ ಮೇಳದವರಿಂದ ಯಕ್ಷಗಾನ ಕಾರ್ಯಕ್ರಮ ಜರುಗಿತು.ಏಪ್ರಿಲ್.18 ರಂದು ಚೂರ್ಣೋತ್ಸವ,ಏಪಿಲ್ 19 ರಂದು ಶುಕ್ರವಾರ ಅವಭೃತ ತೆಪೆÇೀತ್ಸವ ಕಾರ್ಯಕ್ರಮ ವೈಭವದಿಂದ ನಡೆಯಲಿದೆ.ಹಿರಿಯರಾದ ಗಣಪ್ಪಯ್ಯ […]

You cannot copy content of this page