ಕೃಷ್ಣ ಮಠ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ
ಉಡುಪಿ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ವಿದ್ಯಾರ್ಥಿಗಳಿಂದ ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ ನಡೆಯಿತು.ವಿದ್ಯಾರ್ಥಿಗಳು ಹೆಜ್ಞೆ ಹಾಕುವುದರ ಮುಖೇನ ಶ್ರೀ ಕೃಷ್ಣನಿಗೆ ಸೇವೆಯನ್ನು ಸಲ್ಲಿಸಿದರು.ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಗಳು ವಿದ್ಯಾರ್ಥಿಗಳನ್ನು ಗೌರವಿಸಿದರು.ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಸಂಸ್ಥಾಪಕಿ ಹೇಮ,ವಿದ್ಯಾರ್ಥಿಗಳಾದ ನಯನ,ಗವ್ಯ ಜಿ ಮೂರ್ತಿ,ಅಕ್ಷಯ,ವರ್ಷ,ಜೀವಿತ,ಅಕ್ಷಿರ ಉಪಸ್ಥಿತರಿದ್ದರು.ರಮೇಶ್ ಭಟ್ ಕಾರ್ಯಕ್ರಮವನ್ನು ಆಯೋಜಿಸಿದ್ದರು.ಗವ್ಯ ಜಿ ಮೂರ್ತಿ ಐವತ್ತಕ್ಕೂ ಹೆಚ್ಚಿನ ಪ್ರದರ್ಶನವನ್ನು ನೀಡಿರುತ್ತಾರೆ.