ಕುಂದಾಪುರ\ತೀರ್ಥಹಳ್ಳಿ:ಸ್ಕೂಟಿಗೆ ಬಸ್ ಡಿಕ್ಕಿ,ವ್ಯಕ್ತಿ ಸಾವು

ಕುಂದಾಪುರ:ಆಗುAಬೆ ಕಡೆ ಯಿಂದ ತೀರ್ಥ ಹಳ್ಳಿಗೆ ಸಾಗುತ್ತಿದ್ದ ಬಸ್ ತೀರ್ಥಹಳ್ಳಿ ಎಂಬಲ್ಲಿ ಕುಂದಾಪುರ ಕಡೆಗೆ ಸಾಗುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ತ್ರಾಸಿ ಗ್ರಾಮದ ಮೊವಾಡಿ ನಿವಾಸಿ ಗುರುರಾಜ ಎಸ್ ಕಾಂಚನ್ (೪೩) ಸಾವನ್ನಪ್ಪಿದ್ದ ಘಟನೆ ಮಂಗಳವಾರ ನಡೆದಿದೆ.ಏ.೨೫ ರಂದು ಮನೆಯಲ್ಲಿ ಯಕ್ಷಗಾನ ಕಾರ್ಯಕ್ರಮ ನಡೆಯುತ್ತಿರುವ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ಯಿಂದ ಗುರುರಾಜ ಕಾಂಚನ್ ಅವರು ಸ್ಕೂಟಿಯಲ್ಲಿ ಕುಂದಾಪುರಕ್ಕೆ ಬರುತ್ತಿರುವಾಗ ಇವೊಂದು ಘಟನೆ ನಡೆದಿದೆ ಎಂದು ಅವರ ಸಂಬAಧಿ ಸಂಜಯ್ ಪೂಜಾರಿ ತಿಳಿಸಿದ್ದಾರೆ.

ಆಲಸ್ಯಕರ ಜೀವನ ಪದ್ಧತಿಯಿಂದ ಹಣದುಬ್ಬರ ಏರಿಕೆ, ದುಡಿಯುವ ಕೈಗಳಿಂದ ಅಭಿವೃದ್ಧಿ:ಡಾ. ಹೆಚ್.ಎಸ್.ಶೆಟ್ಟಿ

ಕುಂದಾಪುರ:ನಮ್ಮ ದೇಶದಲ್ಲಿ ಆಹಾರ ಹಣದುಬ್ಬರ ಕ್ಕೆ ಸರ್ಕಾರ ಕೈಗೊಳ್ಳುವ ಕ್ರಮಗಳ ಜೊತೆಗೆ ದುಡಿಯುವ ಕೈಗಳಿಗಿಂತ ಉಣ್ಣುವ ಕೈಗಳು ಹೆಚ್ಚಾಗಿದೆ.ಆಲಸ್ಯಕರ ಜೀವನ ಪದ್ಧತಿಯಿಂದ ಹಣದುಬ್ಬರ ಏರಿಕೆ ದರದಲ್ಲಿ ಸಾಗುತ್ತಿದೆ ಎಂದು ಮೈಸೂರು ಮರ್ಕಂಟೈಲ್ ಕಂಪೆನಿಯ ಚೇರ್ ಮೆನ್ ಉದ್ಯಮತಾರೆ ಡಾ. ಹೆಚ್.ಎಸ್.ಶೆಟ್ಟಿ ಹೇಳಿದರು.ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಗುಸಿಟಿ ಮೈದಾನದಲ್ಲಿ ದೀಪಕ್ ಕುಮಾರ್ ಶೆಟ್ಟಿ ನೇತೃತ್ವದಲ್ಲಿ ಆಯೋಜನೆ ಗೊಂಡಿರುವ ಬೈಂದೂರು ಜೋಡುಕೆರೆ ಕಂಬಳದ ಅಂಗವಾಗಿ ಗುರುವಾರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಿ ಅವರು ಮಾತನಾಡಿದರು.ಬಸ್ರೂರು ಮಹತೋಬಾರ […]

ಫಿಯರ್ಲೆಸ್ ಸೆಕ್ಯೂರಿಟಿ ಸಿಸ್ಟಮ್ ಕುಂದಾಪುರದಲ್ಲಿ ಶುಭಾರಂಭ

ಕುಂದಾಪುರ:ಸಿಸಿಟಿವಿ ಮತ್ತು ಮಾನಿಟರಿಂಗ್ ಕ್ಷೇತ್ರದಲ್ಲಿ ಈಗಾಗಲೇ ಬಹಳಷ್ಟು ಹೆಸರನ್ನು ಗಳಿಸಿರುವ ದಿಗಂತ ಶೆಟ್ಟಿ ಮತ್ತು ದಿಕ್ಷೀತ್ ಶೆಟ್ಟಿ ಮಾಲಿಕತ್ವದಲ್ಲಿ ಫಿಯರ್ಲೆಸ್ ಸೆಕ್ಯೂರಿಟಿ ಸಿಸ್ಟಮ್ ಬುಧವಾರ ಕುಂದಾಪುರ ಯುವ ಜನಾ ಕಾಂಪ್ಲೆಕ್ಸ್ನಲ್ಲಿ ಅದ್ದೂರಿಯಾಗಿ ಶುಭರಂಭಗೊಂಡಿತು.ನಾನಾ ರೀತಿಯ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮುಖೇನ ಸಂಸ್ಥೆಯ ಶುಭಾರಂಭ ಕಾರ್ಯಕ್ರಮವನ್ನು ಮಾಡಲಾಯಿತು.ಗಣ್ಯರು,ಉದ್ಯಮಿಗಳು,ಅಧಿಕಾರಿ ವರ್ಗದವರು ಫಿಯರ್ಲೆಸ್ ಸೆಕ್ಯೂರಿಟಿ ಸಿಸ್ಟಮ್ ಶುಭಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಸಿ.ಕಛೇರಿ ನಿರ್ವಹಣೆ ತಂತ್ರಜ್ಞಾನ ಬಳಕೆ ಮಾಡಿಕೊಳ್ಳುವಲ್ಲಿ ಸಂಸ್ಥೆಯ ಕಾರ್ಯ ಚಟುವಟಿಕೆಯನ್ನು ಪ್ರಶಂಸಿಸಿದ ಅವರು ಸಂಸ್ಥೆ ಸಾರ್ವಜನಿಕ ಕ್ಷೇತ್ರದಲ್ಲಿ ಹೊಸ […]

You cannot copy content of this page