ಮಾರಣಕಟ್ಟೆ ಸುಬ್ರಹ್ಮಣ್ಯ ಮಂಜರ ಸಂಸ್ಮರಣಾ ಕಾರ್ಯಕ್ರಮ,ಸಾಧಕರಿಗೆ ಪ್ರಶಸ್ತಿ ಪ್ರದಾನ,ಅಶಕ್ತರಿಗೆ ಧನ ಸಹಾಯ ವಿತರಣೆ
ಕುಂದಾಪುರ:ಮಾರಣಕಟ್ಟೆ ಸುಬ್ರಹ್ಮಣ್ಯ ಮಂಜ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾರಣಕಟ್ಟೆ ಸುಬ್ರಹ್ಮಣ್ಯ ಮಂಜರವರ ಸಂಸ್ಮರಣಾ ಕಾರ್ಯಕ್ರಮದ ಅಂಗವಾಗಿ ಕಲ್ಪವೃಕ್ಷ ಸೇವೆ ಉಸಿರು ಕಾರ್ಯಕ್ರಮ ಹಾಗೂ ಸಾಧಕರಿಗೆ ಸನ್ಮಾನ,ಅಶಕ್ತರಿಗೆ ಧನಸಹಾಯ ವಿತರಣೆ ಕಾರ್ಯಕ್ರಮ ಅನುಗ್ರಹ ಮಾರಣಕಟ್ಟೆಯಲ್ಲಿ ಮಂಗಳವಾರ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾರಣಕಟ್ಟೆ ಸುಬ್ರಹ್ಮಣ್ಯ ಮಂಜ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತರಾದ ಎಂ.ಕೃಷ್ಣ ಮೂರ್ತಿ ಮಂಜರು ಮಾತನಾಡಿ,ದುಡಿಮೆ ಒಂದಂಶ ಹಣವನ್ನು ಸಮಾಜಕ್ಕೆ ಮೀಸಲು ಇಡುವುದರಿಂದ ಅಶಕ್ತರ ಬಾಳಿಗೆ ನೆರವಾಗುವುದರ ಜೊತೆಗೆ ಸಶಕ್ತವಾದ ಸಮಾಜ ನಿರ್ಮಾಣ ಮಾಡುವಲ್ಲಿ ಸಹಕಾರ […]



























































































































































































































































































































































































































































































































































































































































































































































































































































































































































































































































































































































































































































































































































































































































































