ಶ್ರೀರಾಮ ದೇವರಿಗೆ ಹಸಿರು ಹೊರೆ ಕಾಣಿಕೆ ಸಮರ್ಪಣೆ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ಶ್ರೀರಾಮ ದೇವಸ್ಥಾನದ ಸುವರ್ಣ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಹಸಿರು ಹೊರೆಕಾಣಿಕೆ ಮೆರವಣಿಗೆ ತ್ರಾಸಿ ಕೊಂಕಣಿ ಖಾರ್ವಿ ಸಭಾಭವನದಿಂದ ಹೊಸಪೇಟೆ ಮಾರ್ಗವಾಗಿ ಶ್ರೀರಾಮ ದೇವಸ್ಥಾನದ ವರಗೆ ಅದ್ದೂರಿಯಾಗಿ ಶುಕ್ರವಾರ ನಡೆಯಿತು.ಚಂಡೆವಾದನ,ಪೂರ್ಣ ಕುಂಭ ಸ್ವಾಗತದೊಂದಿಗೆ ಹಸಿರು ಹೊರೆಕಾಣಿಕೆ ಮೆರವಣಿಗೆಯನ್ನು ಸ್ವಾಗತಿಸಿಕೊಳ್ಳಲಾಯಿತು.ಮಹಿಳೆಯರು,ಪುರುಷರು ಸಮವಸ್ತ್ರವನ್ನು ಧರಿಸಿದ್ದರು.ಸುಮಾರು ಐವತ್ತಕ್ಕೂ ಅಧಿಕ ವಾಹನಗಳು ಹಸಿರು ಹೊರೆ ಕಾಣಿಕೆಯನ್ನು ಹೊತ್ತು ಮೆರವಣಿಗೆಯಲ್ಲಿ ಸಾಗಿದವು.ಅನ್ನಸಂತರ್ಪಣೆ ಭಜನಾ ಕಾರ್ಯಕ್ರಮ ನಡೆಯಿತು.ಏಪ್ರಿಲ್ 13 ರ ಶನಿವಾರ ದಂದು ಶ್ರೀರಾಮ ದೇವಸ್ಥಾನದಲ್ಲಿ ಶ್ರೀರಾಮ ತಾರಕ ಹೋಮ,ಅನ್ನಸಂರ್ಪಣೆ ಕಾರ್ಯಕ್ರಮ,ಸಂಜೆ […]

ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ಸರಣಿ ಅಪಘಾತ,ನಾಲ್ವರಿಗೆ ಗಾಯ

ಕುಂದಾಪುರ:ತಾಲೂಕಿನ ಗಂಗೊಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯ ಹೊಸಾಡು-ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ಶುಕ್ರವಾರ ಸಂಭವಿಸಿದ ಗೂಡ್ಸ್ ಲಾರಿ,ಕಾರು,ರಿಕ್ಷಾ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.ತಾಯಿ ಜತೆ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಏಳು ತಿಂಗಳ ಹಸುಗೂಸು ಪವಾಡಸದೃಶವಾಗಿ ಪಾರದ ಘಟನೆ ನಡೆದಿದೆ.ಕುಂದಾಪುರ ಕಡೆಯಿಂದ ಮುಳ್ಳಿಕಟ್ಟೆ ಮಾರ್ಗವಾಗಿ ಬಂಟ್ವಾಡಿ ಕಡೆಗೆ ಸಾಗುತ್ತಿದ್ದ ಕಾರನ್ನು ಚಾಲಕ ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ಅಜಾಗರೂಕತೆಯಿಂದ ಯೂಟರ್ನ್ ತೆಗೆದುಕೊಳ್ಳುತ್ತಿದ್ದ ಸಮಯದಲ್ಲಿ ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ವೇಗವಾಗಿ ಸಾಗುತ್ತಿದ್ದ ಗೂಡ್ಸ್ ಲಾರಿ ಡಿಕ್ಕಿ ಹೊಡೆದಿದೆ.ಅದೆ ಸಮಯದಲ್ಲಿ ತ್ರಾಸಿ […]

ಎಕ್ಸಲೆಂಟ್ ಕಾಲೇಜು ಕುಂದಾಪುರ ತಾಲೂಕಿಗೆ ಗರಿಷ್ಠ ಸಾಧನೆ.

ಕುಂದಾಪುರ:2023-240 ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಕುಂದಾಪುರದ ಎಕ್ಸಲೆಂಟ್ಪಪೂ ಕಾಲೇಜಿಗೆ ರಾಜ್ಯಮಟ್ಟದಲ್ಲಿ 13 ಸ್ಥಾನಗಳು ಬಂದಿದ್ದು, ಶೇ.1೦೦ ಫಲಿತಾಂಶ ಲಭಿಸಿದೆ. ಅತೀ ಹೆಚ್ಚು ರ‍್ಯಾಂಕ್‌ಗಳನ್ನು ಪಡೆದ ಕುಂದಾಪುರದ ಏಕೈಕ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.ಸಂಸ್ಥೆಯಲ್ಲಿ ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಗಳಿದ್ದು ಒಟ್ಟು 404 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಗೊಂಡು ಶೇ.1೦೦ ಫಲಿತಾಂಶ ಬರುವುದರೊಂದಿಗೆ ವಿಜ್ಞಾನ ವಿಭಾಗದಲ್ಲಿ ೦8 ಸ್ಥಾನಗಳು ಹಾಗೂ ವಾಣಿಜ್ಯ ವಿಭಾಗದಲ್ಲಿ ೦5 ಸ್ಥಾನಗಳನ್ನು ರಾಜ್ಯಮಟ್ಟದಲ್ಲಿ ಗಳಿಸುವುದರ […]

You cannot copy content of this page