ಅಷ್ಟಪವಿತ್ರ ನಾಗಮಂಡಲೋತ್ಸವ,ಚಪ್ಪರ ಮುಹೂರ್ತ

ಕುಂದಾಪುರ:ತಾಲೂಕಿನ ಕನ್ಯಾನ ಗ್ರಾಮದ ಕೂಡ್ಲು ಬಾಡಬೆಟ್ಟು ಶ್ರೀಶನೀಶ್ವರ ಮತ್ತು ಶ್ರೀಚೌಡೇಶ್ವರಿ ದೇವಸ್ಥಾನದಲ್ಲಿ ಏಪ್ರಿಲ್.14 ರಂದು ನಡೆಯಲಿರುವ ಅಷ್ಟಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮದ ಅಂಗವಾಗಿ ಚಪ್ಪರ ಮುಹೂರ್ತ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.ಶ್ರೀಕ್ಷೇತ್ರದ ಆಡಳಿತ ಧರ್ಮದರ್ಶಿಗಳಾದ ಜಯರಾಮ ಸ್ವಾಮಿ,ಬಸ್ರೂರು ಶ್ರೀಮಾಹಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿಗಳಾದ ಬಿ.ಅಪ್ಪಣ್ಣ ಹೆಗ್ಡೆ,ಕ್ಷೇತ್ರದ ಪ್ರಧಾನ ಪುರೋಹಿತರಾದ ಗುರುರಾಜ ಸೋಮಯಾಜಿ ಬ್ರಹ್ಮನಜೆಡ್ಡು ನೇರಳಕಟ್ಟೆ ಅವರು ಚಪ್ಪರ ಮುಹೂರ್ತಕ್ಕೆ ಚಾಲನೆಯನ್ನು ನೀಡಿದರು.ಶ್ರೀಕ್ಷೇತ್ರ ಧರ್ಮಸ್ಥಳ ಕುಂದಾಪು ತಾಲೂಕು ಭಜನಾ ಪರಿಷತ್ ಅಧ್ಯಕ್ಷ ರಾಜೇಂದ್ರ ಕುಮಾರ ಬಸ್ರೂರು,ನಾಗಮಂಡಲೋತ್ಸವ ಸಮಿತಿ […]

ತ್ರಾಸಿ:ಅಷ್ಟಬಂಧನ ಲೇಪನ,ಅನ್ನಸಂತರ್ಪಣೆ

ಕುಂದಾಪುರ:ತಾಲೂಕಿನ ತ್ರಾಸಿ ಗ್ರಾಮದ ಶ್ರೀರಾಮ,ಶ್ರೀಗಣಪತಿ,ಶ್ರೀಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶುಕ್ರವಾರ ನಡೆಯಿತು.ಶ್ರೀದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಅಂಗವಾಗಿ ಗುರುಣಪತಿ ಪೂಜೆ,ಸ್ವಸ್ತಿ ಪುಣ್ಯಾಹ ವಾಚನ,ಶ್ರೀರಾಮ,ಶ್ರೀಗಣಪತಿ,ಶ್ರೀಅಯ್ಯಪ್ಪ ಸ್ವಾಮಿ ದೇವರಿಗೆ ಅಷ್ಟಬಂಧನ ಲೇಪನ,ಕಲಾತತ್ವ ಹೋಮ,ಮಹಾಪೂಜೆ,ಶ್ರೀರಾಮ ದೇವರಿಗೆ ಅಷ್ಟೋತ್ತರ ಪರಿಕರ ಕಲಶ ಸಹಿತ ಬ್ರಹ್ಮ ಕಲಶ ಸ್ಥಾಪನೆ,ಶ್ರೀಗಣಪತಿ ಮತ್ತು ಶ್ರಿಅಯ್ಯಪ್ಪ ಸ್ವಾಮಿ ದೇವರಿಗೆ ಪಂಚವಿಂಶತಿ ಕಲಶ ಸ್ಥಾಪನೆ,ಅಧಿವಾಸ ಹೋಮ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಿತು.ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕøತಿಕ ವೈಭವ,ಕುಣಿತ ಭಜನಾ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ದೇವಸ್ಥಾನದ […]

ಗುಡ್ಡಮ್ಮಾಡಿ:ಭೋಜನಾಲಾಯ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಕುಂದಾಪುರ:ತಾಲೂಕಿನ ಪ್ರಸಿದ್ಧ ಸೇನಾಪುರ ಗ್ರಾಮದ ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಭೋಜನಾಲಯ ನಿರ್ಮಾಣಕ್ಕೆ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ ಅರುಣ ಕುಮಾರ್ ಶೆಟ್ಟಿ ಅವರು ಗುದ್ದಲಿ ಪೂಜೆಯನ್ನು ನೆರವೇರಿಸಿದರು.ಗುತ್ತಿಗೆದಾರ ಸತೀಶ ಶೆಟ್ಟಿ ಯಳೂರು,ಸ್ಥಳೀಯರು ಉಪಸ್ಥಿತರಿದ್ದರು.ದೇವಸ್ಥಾನದ ಅರ್ಚಕರಾದ ನಾಗೇಂದ್ರ ಭಟ್ ಧಾರ್ಮಿಕ ಪೂಜಾ ಕಾರ್ಯಗಳನ್ನು ನಡೆಸಿಕೊಟ್ಟರು.

You cannot copy content of this page