ನಾವುಂದ:ಪ್ರಯಾಣಿಕರ ತಂಗುದಾಣ ಉದ್ಘಾಟನೆ

ಕುಂದಾಪುರ:ನಗು ಗ್ರೂಪ್ ಸಹಾಯದೊಂದಿಗೆ ಹಾಗೂ ನಾವುಂದ ಲಯನ್ಸ್ ಕ್ಲಬ್ ಸಹಕಾರದೊಂದಿಗೆ ಸುಮಾರು 2.ಲಕ್ಷ.ರೂ ವೆಚ್ಚದಲ್ಲಿ ಬೈಂದೂರು ತಾಲೂಕಿನ ನಾವುಂದದಲ್ಲಿ ನೂತನವಾಗಿ ನಿರ್ಮಿಸಿರುವ ನಾವುಂದ ನಾಗಯ್ಯ ಶೆಟ್ಟಿ ಪ್ರಯಾಣಿಕರ ತಂಗುದಾಣವನ್ನು ಶನಿವಾರ ಉದ್ಘಾಟಿಸಲಾಯಿತು.ಲಯನ್ಸ್ ಕ್ಲಬ್ ಜಿಲ್ಲಾ ಗರ್ವನರ್ ಡಾ.ನೇರಿ ಕರ್ನೇಲಿಯೊ ಮತ್ತು ಗುಲಾಬಿ ಶೆಟ್ಟಿ ಅವರು ಜಂಟಿಯಾಗಿ ಉದ್ಘಾಟಿಸಿದರು.ನಗು ಗ್ರೂಪ್ ಎಂ.ಡಿ ಕುಶಲ ಶೆಟ್ಟಿ,ಝೊನ್ ಚೆರ್‍ಪರ್ಸನ್ ಕನಕ ಜಗದೀಶ್ ಶೆಟ್ಟಿ ಕುದ್ರುಕೋಡು,ನಾವುಂದ ಕ್ಲಬ್ಬಿನ ಅಧ್ಯಕ್ಷ ಪ್ರದೀಪ ಶೆಟ್ಟಿ,ನರಸಿಂಹ ದೇವಾಡಿಗ,ರಾಜು ದೇವಾಡಿಗ ಅರೆಹೊಳೆ,ಅಶೋಕ ಆಚಾರ್ಯ,ರಮೇಶ ಮೊಗವೀರ,ಶಶಿಧರ ಶೆಟ್ಟಿ,ಸ್ಥಳೀಯರು,ಮತ್ತಿತರರು ಉಪಸ್ಥಿತರಿದ್ದರು.

ಮಹಿಳಾ ಪಿಸಿ ಆತ್ಮಹತ್ಯೆ ಪ್ರಕರಣ,ಪತಿ ಬಂಧನ

ಉಡುಪಿ:ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬಂದಿ ಜ್ಯೋತಿ ಅವರ ಆತ್ಮಹತ್ಯೆ ಪ್ರಕರಣದ ಸಂಬಂಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಅವರ ಪತಿ ರವಿಕುಮಾರ್(35) ಅವರನ್ನು ಕಾಪು ಪೊಲೀಸರು ಬಂಧಿಸಿದ್ದಾರೆ.ಜ್ಯೋತಿ ಅವರ ಕೊಠಡಿಯಲ್ಲಿ ಒಂದು ಡೈರಿ ಸಿಕ್ಕಿದ್ದು ಅದರಲ್ಲಿ ಆಕೆ ತನ್ನ ಆತ್ಮಹತ್ಯೆಗೆ ನನ್ನ ಗಂಡನ ಸಂಶಯ ಪ್ರವೃತ್ತಿಯೇ ಕಾರಣ ಎಂದು‌ಬರೆದುಕೊಂಡಿದ್ದಾಗಿ ಆಕೆಯ ತಾಯಿ ದೇವಮ್ಮ ವಿಟ್ಲಾಪುರ ಪೊಲೀಸರಿಗೆ ದೂರು ನೀಡಿದ್ದು ಆ ಹಿನ್ನಲೆಯಲ್ಲಿ ಪೊಲೀಸರು ಶನಿವಾರ ತಡರಾತ್ರಿ ಆಕೆಯ ಪತಿಯನ್ನು ಬಂಧಿಸಿದ್ದಾರೆ.ಬಾಗಲಕೋಟೆ ಮೂಲದ ರವಿ ಕುಮಾರ್ ಕೆಎಸ್ […]

ಕ್ರಿಶ್ಚಿಯನ್ ಬಾಂಧವರಿಂದ ಗುಡ್‍ಫ್ರೈಡೆ ಆಚರಣೆ

ಕುಂದಾಪುರ:ತಾಲೂಕಿನ ತ್ರಾಸಿ ಇಗರ್ಜಿ ಹಾಗೂ ಕೊಸೆಸಾಂವ್ ಅಮ್ಮನವರ ಚರ್ಚ್ ಗಂಗೊಳ್ಳಿ,ತಲ್ಲೂರು ಚರ್ಚ್,ಪಡುಕೋಣೆ ಚರ್ಚ್ ಸೇರಿದಂತೆ ನಾನಾ ಚರ್ಚ್‍ಗಳಲ್ಲಿ ಯೇಸು ಕ್ರಿಸ್ತನನ್ನು ಶಿಲುಬೆಗೇರಿಸಿದ ದಿನ ಗುಡ್‍ಫ್ರೈಡ್ ಅನ್ನು ಶುಕ್ರವಾರ ಆಚರಿಸಲಾಯಿತು.ಕ್ರಿಶ್ಚಿಯನ್ ಬಾಂಧವರು ಚರ್ಚ್‍ಗೆ ತೆರಳಿ ಪ್ರಾರ್ಥನೆಯನ್ನು ಸಲ್ಲಿಸಿದರು.ಯೇಸು ಕ್ರಿಸ್ತರ ಮರಣ ದಿನದ ಅಂಗವಾಗಿ ಉಪವಾಸವನ್ನು ಆಚರಿಸಲಾಗುತ್ತದೆ.

You cannot copy content of this page