ಪರೀಕ್ಷೆಯಲ್ಲಿ ಅಂಕ ನೀಡುವಂತೆ ದೈವದ ಮೊರೆ ಹೋದ ವಿದ್ಯಾರ್ಥಿ

ಕುಂದಾಪುರ:ಪರೀಕ್ಷೆಯಲ್ಲಿ ತಾನು ಅಂದು ಕೊಂಡಷ್ಟು ಮಾಕ್ರ್ಸ್ ನೀಡುವಂತೆ ನಿವೇದಿಸಿ ವಿದ್ಯಾರ್ಥಿಯೊಬ್ಬ (ಳು) ಹೊಳ್ಮಗೆ ಹೋರ್ ಬೊಬ್ಬರ್ಯ ದೈವದ ಮೊರೆ ಹೋಗಿದ್ದು.ಚೀಟಿ ಬರೆದು ಹುಂಡಿಗೆ ಹಾಕಿರುವ ಕುತೂಹಲಕರ ವಿಷಯ ಹುಂಡಿ ಒಡೆಯುವ ಸಮಯದಲ್ಲಿ ಬೆಳಕಿಗೆ ಬಂದಿದೆ.ವಿದ್ಯಾರ್ಥಿ ಬರೆದು ಹುಂಡಿಗೆ ಹಾಕಿರುವ ಚೀಟಿ ಸೋಷಿಯಲ್ ಮೀಡಿಯಾದಲ್ಲಿ ಬಾರಿ ವೈರಲ್ ಆಗಿದೆ.

ಉಡುಪಿ ಕರ್ನಾಟಕ ಪತ್ರಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷರಾಗಿ ಜನಾರ್ಧನ ಕೆ.ಎಂ ಆಯ್ಕೆ

ಕುಂದಾಪುರ:ಕರ್ನಾಟಕ ಪತ್ರಕರ್ತರ ಸಂಘ (ರಿ) ಪ್ರೆಸ್ ಕಾಲೊನಿ,ಬೆಳಗಾವಿ ಇದರ ಉಡುಪಿ ಜಿಲ್ಲಾಧ್ಯಕ್ಷರಾಗಿ ಕಿರಣ್ ಪೂಜಾರಿ ಅವರು ರಾಜ್ಯಾಧ್ಯಕ್ಷರಾದ ಎಂ.ಬಿ.ಶಿವಪೂಜಿ ಅವರ ಸೂಚನೆಯಂತೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಜನಾರ್ಧನ ಕೆ.ಎಂ. ಪ್ರಧಾನ ಕಾರ್ಯದರ್ಶಿಯಾಗಿ ಪಿ.ಕೆ.ಪೂಜಾರಿ,ಜೊತೆ ಕಾರ್ಯದರ್ಶಿಯಾಗಿ ವಿಶ್ವನಾಥ ಬೆಳ್ಳಂಪಳ್ಳಿ,ಖಜಾಂಜಿಯಾಗಿ ದೇವೇಂದ್ರ ಸುವರ್ಣ ಅವರು ಆಯ್ಕೆಯಾಗಿದ್ದಾರೆ.

ಹೊಳ್ಮಗೆ ಶ್ರೀ ಬ್ರಹ್ಮ ಬೈದರ್ಕಳ ಕೋಟಿ ಚೆನ್ನಯ್ಯ ಪಂರ್ಜುಲಿ ಹಾಗೂ ಪರಿವಾರ ದೈವಗಳ ವಾರ್ಷಿಕ ಗೆಂಡಸೇವೆ

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಕ್ಲಾಡಿ ಗ್ರಾಮದ ಹೊಳ್ಮಗೆ ಶ್ರೀ ಬ್ರಹ್ಮ ಬೈದರ್ಕಳ ಕೋಟಿ ಚೆನ್ನಯ್ಯ ಪಂಜುರ್ಲಿ ಹಾಗೂ ಪರಿವಾರ ದೈವಗಳ ಗರಡಿ ದೈವಸ್ಥಾನದಲ್ಲಿ ವಾರ್ಷಿಕ ಗೆಂಡ ಸೇವೆ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.ವರ್ಷಂಪ್ರತಿ ನಡೆಯುವ ಶ್ರೀ ದೇವರ ವಾರ್ಷಿಕ ಗೆಂಡಸೇವೆ ಕಾರ್ಯಕ್ರಮದ ಅಂಗವಾಗಿ ದೇವರಿಗೆ ಹೂವಿನ ಅಲಂಕಾರ ಪೂಜೆ,ಮಂಗಳಾರತಿ ಮತ್ತು ಹಣ್ಣುಕಾಯಿ ಸೇವೆ ಹಾಗೂ ತುಲಾಭಾರ ಸೇವೆ,ದೈವದರ್ಶನ ಸೇವೆ,ಹರಕೆ ಕೋಲ ಜರುಗಿತು.ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಕಷ್ಟ ಕಾಲದಲ್ಲಿ ಹೇಳಿ ಕೊಂಡ […]

You cannot copy content of this page